Ujjain Rape Case: ಅತ್ಯಾಚಾರ ಸಂತ್ರಸ್ತೆಗೆ ಸಹಾಯಹಸ್ತ ಚಾಚದವರ ವಿರುದ್ಧ ಕೇಸ್- ಕಠಿಣ ಕ್ರಮಕ್ಕೆ ಮುಂದಾದ ಪೊಲೀಸರು
ನವದೆಹಲಿ, ಸೆಪ್ಟೆಂಬರ್ 30: ಉಜ್ಜಯಿನಿಯಲ್ಲಿ ಅತ್ಯಾಚಾರಕ್ಕೊಳಗಾದ 15 ವರ್ಷದ ಬಾಲಕಿಗೆ ಸಹಾಯ ಮಾಡದವರ ವಿರುದ್ಧ ಪ್ರಕರಣ ದಾಖಲಿಸುತ್ತೇವೆ ಎಂದು ಮಧ್ಯಪ್ರದೇಶದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು 'ಎನ್ಡಿಟಿವಿ'ಗೆ ತಿಳಿಸಿದ್ದಾರೆ.
ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ ಬಾಲಕಿಯು ಮನೆಮನೆಗೆ ತೆರಳಿ ಅಂಗಲಾಚಿದರೂ ಸಹಾಯಕ್ಕೆ ಬರದ ವ್ಯಕ್ತಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಚಿಂತನೆ ನಡೆದಿದೆ ಎಂದು ಪೊಲೀಸರು ಹೇಳಿದ್ದಾರೆ.

ತೀವ್ರ ರಕ್ತಸ್ರಾವವಾಗುತ್ತಿದ್ದರೂ ಆಕೆಗೆ ಸಹಾಯವನ್ನು ಮಾಡಲು ಮುಂದಾಗದ ಜನರ ವಿರುದ್ಧ ಮಕ್ಕಳ ಲೈಂಗಿಕ ದೌರ್ಜನ್ಯ ಕಾನೂನುಗಳ ಅಡಿಯಲ್ಲಿ ಪ್ರಕರಣ ದಾಖಲಿಸಬಹುದು ಎಂದು ಅಧಿಕಾರಿ ತಿಳಿಸಿದ್ದಾರೆ.
ಅಪರಾಧದ ಕುರಿತು ಗೊತ್ತಿದ್ದರೂ, ಪೊಲೀಸರಿಗೆ ಮಾಹಿತಿ ನೀಡದೇ ಇರುವುದು ಕಾನೂನು ರೀತಿ ತಪ್ಪು. ಅತ್ಯಾಚಾರದ ಬಗ್ಗೆ ಮಾಹಿತಿ ನೀಡಲು ವಿಫಲರಾದವರು ಮಕ್ಕಳ ಸಂರಕ್ಷಣಾ ಕಾಯ್ದೆಯ ಅಡಿಯಲ್ಲಿ ಕ್ರಮವನ್ನು ಎದುರಿಸಬಹುದು ಎಂದು ಅವರು ಹೇಳಿದ್ದಾರೆ.

ಈ ಕುರಿತು ಮಾತನಾಡಿರುವ ಉಜ್ಜಯಿನಿಯ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಜಯಂತ್ ಸಿಂಗ್ ರಾಥೋಡ್, ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ತೆಯ ಬಗ್ಗೆ ಕಾಳಜಿ ತೋರಿಸದ ವ್ಯಕ್ತಿಗಳನ್ನು ಗುರುತಿಸಲಾಗಿದೆ. ಆಟೋ ರಿಕ್ಷಾ ಚಾಲಕನೊಬ್ಬನಿಗೆ ಸಂತ್ರಸ್ತೆಯ ಕುರಿತು ತಿಳಿದಿದ್ದರೂ ಆತ ಪೊಲೀಸರಿಗೆ ಮಾಹಿತಿ ನೀಡಿಲ್ಲ. ಆತನ ವಿರುದ್ಧವೂ ಕ್ರಮ ಕೈಗೊಳ್ಳಲು ನಾವು ಮುಂದಾಗಿದ್ದೇವೆ' ಎಂದು ತಿಳಿಸಿದ್ದಾರೆ.
ಸಿಸಿಟಿವಿ ದೃಶ್ಯಾವಳಿಗಳನ್ನು ಅಧ್ಯಯನ ಮಾಡಲಾಗುವುದು. ಸಹಾಯಹಸ್ತ ಚಾಚದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ಆಟೋ ರಿಕ್ಷಾ ಚಾಲಕನನ್ನು ರಾಕೇಶ್ ಮಾಳವೀಯ ಎಂದು ಗುರುತಿಸಲಾಗಿದೆ. ಆತ ತನ್ನ ವಾಹನದಲ್ಲಿ ಯುವತಿಯನ್ನು ಕರೆದುಕೊಂಡು ಹೋಗಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ. ಆಟೋ ಸೀಟಿನಲ್ಲಿ ರಕ್ತದ ಕಲೆಗಳನ್ನು ಕಂಡುಬಂದರೂ, ಆತ ಪೊಲೀಸರಿಗೆ ಮಾಹಿತಿ ನೀಡಿಲ್ಲವೆಂದು ತಿಳಿದುಬಂದಿದೆ. ಆತನ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಹೇಳಿದ್ದಾರೆ.

ಇದೇ ರೀತಿ ಆಕೆಗೆ ಸಹಾಯ ಮಾಡಲು ನಿರಾಕರಿಸಿದ ಇತರರು ಕೂಡ ಪೊಲೀಸ್ ಕ್ರಮವನ್ನು ಎದುರಿಸಬೇಕಾಗುತ್ತದೆ ಎಂದು ತಿಳಿದುಬಂದಿದೆ.
ಮರಣದಂಡನೆಗೆ ಒತ್ತಾಯಿಸಿದ ಆರೋಪಿಯ ತಂದೆ
ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಭರತ್ ಸೋನಿ ಅವರ ತಂದೆ ತಮ್ಮ ಮಗನಿಗೆ ಶಿಕ್ಷೆಯಾಗಬೇಕು ಎಂದು ಹೇಳಿದ್ದಾರೆ.
'ಸಾವಿನ ಹೊರತಾಗಿ ಆತನಿಗೆ ಬೇರೆ ಶಿಕ್ಷೆ ಬೇಕಿಲ್ಲ. ಆತ ಎಸಗಿದ್ದು ಹೀನಾಯ ತಪ್ಪು. ಆತನಿಗೆ ಮರಣದಂಡನೆಯಂತಹ ಶಿಕ್ಷೆಯಾಗಬೇಕು. ನಾನಾಗಿದ್ದರೆ ಆತನನ್ನು ಕೊಲ್ಲುತ್ತಿದ್ದೆ' ಎಂದು ಆರೋಪಿಯ ತಂದೆ ರಾಜಾ ಸೋನಿ ತಿಳಿಸಿದ್ದಾರೆ.
ಪ್ರಮುಖ ಆರೋಪಿಯೂ ಆಟೋ ರಿಕ್ಷಾ ಚಾಲಕನಾಗಿದ್ದು, ಸುಮಾರು 700 ಸಿಸಿಟಿವಿ ಫೀಡ್ಗಳ ದೃಶ್ಯಾವಳಿಗಳ ಪರಿಶೀಲನೆ ಮಾಡುವ ಮೂಲಕ ಆತನನ್ನು ಪತ್ತೆ ಹಚ್ಚಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಪ್ರಕರಣ ಬೆಳಕಿಗೆ ಬಂದಾಗಿನಿಂದ ಸುಮಾರು ಮೂವತ್ತು ಪೊಲೀಸರು ಮೂರ್ನಾಲ್ಕು ದಿನಗಳ ಕಾಲ ಮಲಗಿಯೇ ಇಲ್ಲವೆಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಆರೋಪಿಗಳಿಗೆ ಕಠಿಣ ಶಿಕ್ಷೆಯನ್ನು ವಿಧಿಸಲು ಎಲ್ಲಾ ರೀತಿಯ ಪ್ರಯತ್ನ ಮಾಡಲಾಗುವುದು ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌವಾಣ್ ಹೇಳಿದ್ದಾರೆ. ನವೆಂಬರ್ ಅಥವಾ ಡಿಸೆಂಬರ್ನಲ್ಲಿ ಮಧ್ಯಪ್ರದೇಶ ವಿಧಾನಸಭೆ ಚುನಾವಣೆ ನಡೆಯುತ್ತಿರುವುದರಿಂದ, ಚೌವಾಣ್ ಮೇಲೆ ಒತ್ತಡ ಹೆಚ್ಚಿದೆ ಎಂದು ಹೇಳಲಾಗುತ್ತಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications