ಮಲ್ಯಗೆ ಹೆಚ್ಚಿದ ಸಂಕಷ್ಟ: ಲಂಡನ್ನಲ್ಲಿನ ಆಸ್ತಿ ಮುಟ್ಟುಗೋಲಿಗೆ ಅನುಮತಿ
ಲಂಡನ್, ಜುಲೈ, 05: ಸಾಲಮಾಡಿ ಪರಾರಿಯಾಗಿ ಈಗ ಸಾಲಮರುಪಾವತಿಸಲು ಸಿದ್ದವಾಗಿರುವ ಮದ್ಯದ ದೊರೆ ವಿಜಯ್ ಮಲ್ಯಗೆ ಸಂಕಷ್ಟ ಇನ್ನಷ್ಟು ಹೆಚ್ಚಿದೆ. ಭಾರತದಲ್ಲಿನ ಅವರ ಆಸ್ತಿ ಕೈತಪ್ಪುವ ಬೆನ್ನಲ್ಲೆ ಅವರ ಲಂಡನ್ನಲ್ಲಿನ ಆಸ್ತಿಯೂ ಕೈತಪ್ಪಲಿದೆ.
ಭಾರತದ 13 ರಾಷ್ಟ್ರೀಕೃತ ಬ್ಯಾಂಕುಗಳ ಮೊರೆಗೆ ಓಗೊಟ್ಟಿರುವ ಯುವೈಟೆಡ್ ಕೀಂಗ್ಡಮ್ ನ್ಯಾಯಾಲಯವು ವಿಜಯ್ ಮಲ್ಯರ ಲಂಡನ್ನ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲು ಅನುಮತಿ ನೀಡಿದೆ.

ವಿಜಯ್ ಮಲ್ಯಾ ಲಂಡನ್ ಸೇರಿ ಇಂಗ್ಲೆಂಡ್ ವೇಲ್ಸ್ ಸೇರಿ ಹಲವು ಕಡೆ ಆಸ್ತಿ ಹೊಂದಿದ್ದು ಇವುಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು ಭಾರತದ ಬ್ಯಾಂಕುಗಳು ಕೇಳಿದ್ದ ಅನುಮತಿಯನ್ನು ಲಂಡನ್ನ ಹೈಕೋರ್ಟ್ ನೀಡಿದೆ.
ಭಾರತದಲ್ಲಿ ಸಹ ವಿಜಯ್ ಮಲ್ಯ ಆಸ್ತಿ ಮುಟ್ಟುಗೋಲು ಪ್ರಕ್ರಿಯೆ ಚಾಲ್ತಿಯಲ್ಲಿದ್ದು, ಬೆಂಗಳೂರು ಪೊಲೀಸರು ವಿಜಯ್ ಮಲ್ಯಗೆ ಸೇರಿದ 159 ಆಸ್ತಿಗಳನ್ನು ಪತ್ತೆ ಮಾಡಿ ಅದರ ವಿವರಗಳನ್ನು ಪಟಿಯಾಲಾ ಕೋರ್ಟ್ಗೆ ಸಲ್ಲಿಸಿದ್ದಾರೆ.
ಮಲ್ಯರ ಆಸ್ತಿ ಮುಟ್ಟುಗೋಲಿಗೆ ಅವಕಾಶ ಕೋರಿ ಭಾರತದ ಎಸ್ಬಿಐ, ಎಸ್ಬಿಎಂ, ಬಿಒಬಿ, ಕಾರ್ಪೊರೇಶನ್ ಬ್ಯಾಂಕ್, ಫೆಡರಲ್ ಬ್ಯಾಂಕ್, ಐಡಿಬಿಐ ಬ್ಯಾಂಕ್, ಇಂಡಿಯನ್ ಓವರ್ಸೀಸ್ ಬ್ಯಾಂಕ್, ಜಮ್ಮು ಆಂಡ್ ಕಾಶ್ಮೀರ್ ಬ್ಯಾಂಕ್, ಪಂಜಾಬ್ ಆಂಡ್ ಸಿಂಧ್ ಬ್ಯಾಂಕ್, ಯುಸಿಓ ಬ್ಯಾಂಕ್, ಯುನೈಟೆಡ್ ಬ್ಯಾಂಕ್ ಆಫ್ ಇಂಡಿಯಾ ಮತ್ತು ಜೆಮ್ ಫೈನಾನ್ಸ್ ಅಸೆಟ್ ರಿಕನ್ಸಸ್ಟ್ರಕ್ಷನ್ ಬ್ಯಾಂಕುಗಳು ಅನುಮತಿ ಕೋರಿ ಅರ್ಜಿ ಹಾಕಿದ್ದವು.
ಕ್ವೀನ್ಸ್ ನ್ಯಾಯಾಲಯವು ನೀಡಿರುವ ಈ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸುವುದಾಗಿ ಮಲ್ಯ ಅವರು ನ್ಯಾಯಾಲಯಕ್ಕೆ ತಿಳಿಸಿದ್ದು ಮೇಲ್ಮನವಿ ಅರ್ಜಿ ಇನ್ನೂ ಬಾಕಿ ಉಳಿದಿದೆ.
ಇತ್ತೀಚೆಗಷ್ಟೆ ವಿಜಯ್ ಮಲ್ಯ ಅವರು ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದು ತಾನು ಸಾಲ ಮರುಪಾವತಿಸಲು ಸಿದ್ಧವಿರುವುದಾಗಿ ತಿಳಿಸಿದ್ದರು. ಅವರು ಕಿಂಗ್ಪಿಶರ್ ಏರ್ಲೈನ್ಸ್ ನೌಕರರಿಗೂ ಪತ್ರ ಬರೆದಿದ್ದರು.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications