ಭಾರತಕ್ಕೆ ಉದ್ಯಮಿ ನೀರವ್ ಮೋದಿ ಹಸ್ತಾಂತರ ಇನ್ನು ದೂರವಿಲ್ಲ
ನವದೆಹಲಿ, ಜೂನ್ 23: ವಿದೇಶಕ್ಕೆ ಪರಾರಿ ಆಗಿರುವ ವಜ್ರದ ವ್ಯಾಪಾರಿ ನೀರವ್ ಮೋದಿ ಅನ್ನು ಭಾರತಕ್ಕೆ ಹಸ್ತಾಂತರಿಸುವುದನ್ನು ವಿರೋಧಿಸಿದ ಸಲ್ಲಿಸಿದ ಮೇಲ್ಮನವಿ ಅರ್ಜಿಯನ್ನು ಬುಧವಾರ ಯುಕೆ ಹೈಕೋರ್ಟ್ ತಿರಸ್ಕರಿಸಿದೆ.
ಭಾರತದ ಪಂಜಾಬ್ ನ್ಯಾಷನಲ್ ಬ್ಯಾಂಕಿಗೆ 14,000 ಕೋಟಿ ರೂಪಾಯಿ ವಂಚಿಸಿ ವಿದೇಶಕ್ಕೆ ಪರಾರಿ ಆಗಿರುವ ಉದ್ಯಮಿ ನೀರವ್ ಮೋದಿ ಕಳೆದ ತಿಂಗಳು ಲಂಡನ್ ಹೈಕೋರ್ಟಿಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಪಿಟಿಐ ವರದಿ ಪ್ರಕಾರ, ಕಾಗದದಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಕೆಯ ಅವಕಾಶವನ್ನು ಲಂಡನ್ ಹೈಕೋರ್ಟ್ ನಿರಾಕರಿಸಿರುವ ಬಗ್ಗೆ ದೃಢಪಡಿಸಿದೆ.
ಆದರೆ ಮೇಲ್ಮನವಿ ಅರ್ಜಿ ವಿಚಾರಣೆಯನ್ನು ಮುಂದುವರಿಸಬಹುದೇ ಇಲ್ಲವೇ ಎಂಬುದನ್ನು ತಿಳಿಯಲು ಹೊಸ ಮೇಲ್ಮನವಿ ಅರ್ಜಿಯೊಂದಿಗೆ ಹೈಕೋರ್ಟ್ನಲ್ಲಿ ಸಂಕ್ಷಿಪ್ತ ಮೌಖಿಕ ವಿಚಾರಣೆಯ್ನು ನೀರವ್ ಮೋದಿ ಎದುರಿಸಬೇಕಾಗುತ್ತದೆ.

ಭಾರತಕ್ಕೆ ನೀರವ್ ಮೋದಿ ಹಸ್ತಾಂತರ ಆದೇಶ:
ವಜ್ರದ ವ್ಯಾಪಾರಿ ನೀರವ್ ಮೋದಿ ಅನ್ನು ಭಾರತಕ್ಕೆ ಹಸ್ತಾಂತರಿಸುವ ಬಗ್ಗೆ ಏಪ್ರಿಲ್ 15ರ 2020ರಂದೇ ಯುಕೆ ಗೃಹ ಕಾರ್ಯದರ್ಶಿ ಪ್ರೀತಿ ಪಟೇಲ್ ಆದೇಶ ಹೊರಡಿಸಿದ್ದಾರೆ. 2019 ಮಾರ್ಚ್ 19ರ ಬಂಧಿಸಲ್ಪಟ್ಟ ದಿನದಿಂದ ಇಂದಿನವರೆಗೂ ಆರೋಪಿ ನೀರವ್ ಮೋದಿ, ಲಂಡನ್ ವಾಂಡ್ಸವರ್ತ್ ಕಾರಾಗೃಹದಲ್ಲಿ ಸೆರೆವಾಸ ಅನುಭವಿಸುತ್ತಿದ್ದಾರೆ.
ಭಾರತದಲ್ಲಿ ಪರಾರಿ ಆಗಿದ್ದು ಯಾವಾಗ?:
ಪಂಜಾಬ್ ನ್ಯಾಷನಲ್ ಬ್ಯಾಂಕ್ ವಂಚನೆ ಪ್ರಕರಣದ ಪ್ರಮುಖ ಆರೋಪಿ ನೀರವ್ ಮೋದಿ 2018ರ ಜನವರಿ 1ರಂದು ಭಾರತದಿಂದ ಪರಾರಿ ಆಗುತ್ತಾರೆ. 2018ರ ಜೂನ್ ತಿಂಗಳಿನಲ್ಲಿ ನೀರವ್ ಮೋದಿ ವಿರುದ್ಧ ರೆಡ್ ಕಾರ್ನರ್ ನೋಟಿಸ್ ಜೊತೆಗೆ ಜಾಮೀನುರಹಿತ ಬಂಧನದ ವಾರೆಂಟ್ ಜಾರಿಗೊಳಿಸಲಾಗುತ್ತದೆ.
-
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ












Click it and Unblock the Notifications