ವೈರಸ್ ರೂಪಾಂತರ: ಭಾರತಕ್ಕೆ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಭೇಟಿ ಅನುಮಾನ
ನವದೆಹಲಿ, ಡಿಸೆಂಬರ್ 23: ಜನವರಿ 26ರಂದು ನಡೆಯುವ ಭಾರತದ ಗಣರಾಜ್ಯೋತ್ಸವ ಪಥ ಸಂಚಲನದಲ್ಲಿ ಪಾಲ್ಗೊಳ್ಳುವಂತೆ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಆಹ್ವಾನ ನೀಡಿದ್ದರು. ಅದಕ್ಕೆ ಅವರು ಒಪ್ಪಿಕೊಂಡಿದ್ದರು. ಆದರೆ ಬ್ರಿಟನ್ನಲ್ಲಿ ಈಗ ಹೊಸ ರೂಪಾಂತರಿ ಕೊರೊನಾ ವೈರಸ್ ಸೋಂಕು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಬೋರಿಸ್ ಜಾನ್ಸನ್ ಅವರು ಭಾರತಕ್ಕೆ ನೀಡುವುದು ಅನುಮಾನವಾಗಿದೆ.
ಗಣರಾಜ್ಯೋತ್ಸವ ಪಥಸಂಚಲನದಲ್ಲಿ ಪಾಲ್ಗೊಳ್ಳಲು ಬೋರಿಸ್ ಜಾನ್ಸನ್ ಅವರು ಭಾರತಕ್ಕೆ ಭೇಟಿ ನೀಡದೆ ಇರಬಹುದು ಎಂದು ಬ್ರಿಟಿಷ್ ಮೆಡಿಕಲ್ ಅಸೋಸಿಯೇಷನ್ ಮಂಡಳಿಯ ಮುಖ್ಯಸ್ಥ ಡಾ. ಚಾಂಗ್ ನಾಗ್ಪಾಲ್ ತಿಳಿಸಿದ್ದಾರೆ.
ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವದ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಬೋರಿಸ್ ಅವರು ಭಾರತಕ್ಕೆ ಪ್ರಯಾಣಿಸಬೇಕಿದೆ. ಆದರೆ ಲಂಡನ್ ಮತ್ತು ಇಂಗ್ಲೆಂಡ್ನ ಆಗ್ನೇಯ ಭಾಗಗಳಲ್ಲಿ ಹೊಸ ರೂಪಾಂತರ ಕೊರೊನಾ ವೈರಸ್ ಸೋಂಕು ತೀವ್ರವಾಗಿದೆ. ಈ ಹಿನ್ನೆಲೆಯಲ್ಲಿ ಇಂಗ್ಲೆಂಡ್ನಿಂದ ಆಗಮಿಸುವ ವಿಮಾನಗಳ ಮೇಲೆ ಭಾರತ ಸೇರಿದಂತೆ ಅನೇಕ ದೇಶಗಳು ನಿರ್ಬಂಧ ಹೇರಿವೆ. ಇದೇ ಸ್ಥಿತಿ ಮುಂದುವರಿದರೆ ಬೋರಿಸ್ ಜಾನ್ಸನ್ ಅವರ ಭಾರತ ಪ್ರವಾಸ ಅಧಿಕೃತವಾಗಿ ರದ್ದಾಗಲಿದೆ.

ಸೋಂಕಿನ ಮಟ್ಟ ಮತ್ತು ಹರಡುವಿಕೆ ಇದೇ ಮಟ್ಟದಲ್ಲಿ ಮುಂದುವರಿದರೆ ಬೋರಿಸ್ ಅವರ ಭಾರತ ಪ್ರವಾಸ ಸಾಧ್ಯವಾಗದೆ ಇರಬಹುದು. ಆದರೆ ಇಷ್ಟು ಬೇಗ ಬ್ರಿಟನ್ ಸರ್ಕಾರ ಇದರ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದಿಲ್ಲ ಎಂದು ಬ್ರಿಟನ್ನ ಹಿರಿಯ ವೈದ್ಯರೊಬ್ಬರು ಹೇಳಿದ್ದಾರೆ.
-
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್: ಶಾಂತಿ ಸ್ಥಾಪನೆಗೆ ಭಾರತದ ಬೆಂಬಲ, ಮಹತ್ವ ಮಾತುಕತೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು












Click it and Unblock the Notifications