ಭಾರತ ಹೃದಯಕ್ಕೆ ಹತ್ತಿರವಿರುವ ದೇಶ: ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್
ನವದೆಹಲಿ, ಜನವರಿ 26: ಭಾರತದ 72ನೇ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಸೇರಿದಂತೆ ಅನೇಕ ದೇಶಗಳ ಗಣ್ಯರು ಭಾರತದ ಜನತೆಗೆ ಶುಭಾಶಯ ತಿಳಿಸಿದ್ದಾರೆ.
ಈ ಬಾರಿಯ ಗಣರಾಜ್ಯೋತ್ಸವಕ್ಕೆ ಮುಖ್ಯ ಅತಿಥಿಯನ್ನಾಗಿ ಬೋರಿಸ್ ಜಾನ್ಸನ್ ಅವರನ್ನು ಆಹ್ವಾನಿಸಲಾಗಿತ್ತು. ಆದರೆ ಬ್ರಿಟನ್ನಲ್ಲಿ ಕೊರೊನಾ ವೈರಸ್ ರೂಪಾಂತರ ತಳಿಯ ಪ್ರಭಾವ ಹೆಚ್ಚಾದ ಕಾರಣ ಬೋರಿಸ್ ಜಾನ್ಸನ್ ಅವರು ತಮ್ಮ ಪ್ರವಾಸ ರದ್ದುಗೊಳಿಸಿದ್ದರು. ಹೀಗಾಗಿ ಸಮಾರಂಭಕ್ಕೆ ಗೈರು ಹಾಜರಾದರೂ ಅವರು ಭಾರತಕ್ಕೆ ಸಂದೇಶ ರವಾನಿಸಿದ್ದಾರೆ.
'ಇಂದು ಭಾರತವು ಗಣರಾಜ್ಯೋತ್ಸವ ದಿನ ಆಚರಿಸುತ್ತಿದೆ. ಭಾರತ ವಿಶ್ವದ ಅತಿದೊಡ್ಡ ಸಾರ್ವಭೌಮ ಪ್ರಜಾಪ್ರಭುತ್ವದ ದೇಶವಾಗಿದ್ದು, ಅಸಾಧಾರಣ ಸಂವಿಧಾನವನ್ನು ಹೊಂದಿದೆ. ನನ್ನ ಹೃದಯಕ್ಕೆ ಹತ್ತಿರವಾಗಿರುವ ದೇಶಕ್ಕೆ ನನ್ನ ಪ್ರಾಮಾಣಿಕ ಶುಭಾಶಯಗಳನ್ನು ಕೋರುತ್ತೇನೆ' ಎಂದು ಅವರು ಹೇಳಿದ್ದಾರೆ.

ಈ ವರ್ಷ ಮುಂದಿನ ದಿನಗಳಲ್ಲಿ ಭಾರತಕ್ಕೆ ಭೇಟಿ ನೀಡಲು ಕಾತರನಾಗಿದ್ದೇನೆ. ನಾನು ಮತ್ತು ಪ್ರಧಾನಿ ನರೇಂದ್ರ ಮೋದಿ ಒಬ್ಬರೂ ಪ್ರತಿಜ್ಞೆಗೈದಿರುವಂತೆ ನಮ್ಮ ಸ್ನೇಹ ಮತ್ತು ಸಂಬಂಧವನ್ನು ಬಲಪಡಿಸುವ, ವೃದ್ಧಿಸುವ ನಿಟ್ಟಿನಲ್ಲಿ ಕೆಲಸ ಮಾಡಲಿದ್ದೇವೆ ಎಂದು ಬೋರಿಸ್ ಜಾನ್ಸನ್ ಹೇಳಿದ್ದಾರೆ.
ನಮ್ಮ ಎರಡು ದೇಶಗಳು ಈ ಪಿಡುಗಿನಿಂದ ಮನುಕುಲವನ್ನು ಮುಕ್ತಗೊಳಿಸಲು ಲಸಿಕೆಯ ಅಭಿವೃದ್ಧಿ, ಉತ್ಪಾದನೆ ಮತ್ತು ಹಂಚಿಕೆಗಳ ವಿಚಾರದಲ್ಲಿ ಜತೆಜತೆಯಾಗಿ ಕೆಲಸ ಮಾಡುತ್ತಿದ್ದೇವೆ. ಬ್ರಿಟನ್, ಭಾರತ ಮತ್ತು ಇತರೆ ದೇಶಗಳ ಸಂಯೋಜಿತ ಪ್ರಯತ್ನದ ಫಲವಾಗಿ ನಾವು ಕೋವಿಡ್ ವಿರುದ್ಧ ಯಶಸ್ಸಿನ ಹಾದಿಯಲ್ಲಿದ್ದೇವೆ ಎಂದು ತಿಳಿಸಿದ್ದಾರೆ.
-
ಐಪಿಎಲ್ 2026ಕ್ಕೆ ಮುಹೂರ್ತ ಫಿಕ್ಸ್: ಇಲ್ಲಿದೆ ಮಾಹಿತಿ -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
ಎಲ್ಪಿಜಿ ಸಿಲಿಂಡರ್ ದರ 60 ರೂ ಏರಿಕೆ: ಮೋದಿ ಸರ್ಕಾರದ ವಿರುದ್ಧ ತೀವ್ರ ಟೀಕೆ -
ಧುರಂಧರ್ 2 ಟ್ರೈಲರ್ ಔಟ್: ರಕ್ತ ಚರಿತ್ರೆ ಬರೆಯಲಿದೆ ಸಿನಿಮಾ, ಭರ್ಜರಿ ಕಲೆಕ್ಷನ್ ನಿರೀಕ್ಷೆ -
International Women's Day 2026: ಸ್ತ್ರೀ ಶಕ್ತಿಗೊಂದು ಗೌರವದ ನಮನ: ಮಹಿಳಾ ದಿನಾಚರಣೆಯ ಇತಿಹಾಸ, ಮಹತ್ವ ತಿಳಿಯಿರಿ -
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ












Click it and Unblock the Notifications