ಸೆ.1 ರಂದು ಸಿಟಿ, ಎಂಆರ್ಐ, ಅಲ್ಟ್ರಾ ಸ್ಕ್ಯಾನ್ ಬಂದ್!
ಬೆಂಗಳೂರು, ಆಗಸ್ಟ್ 31: ಪ್ರಸವಪೂರ್ವ ಮತ್ತು ಗರ್ಭಪೂರ್ವ ಲಿಂಗ ಪತ್ತೆ ಕಾಯ್ದೆ(ಪಿಸಿಪಿಎನ್ ಡಿಟಿ) ತಿದ್ದುಪಡಿ ಮಾಡುವಂತೆ ಆಗ್ರಹಿಸಿ ಇಂಡಿಯನ್ ರೇಡಿಯೋಲಾಜಿಕಲ್ ಅಂಡ್ ಇಮೇಜಿಂಗ್ ಅಸೋಸಿಯೇಶನ್(ಎಂಎಸ್ಬಿಐಆರ್ಐಎ) ದೇಶಾದ್ಯಂತ ಗುರುವಾರ (ಸೆಪ್ಟೆಂಬರ್ 01) ಮುಷ್ಕರ ಹಮ್ಮಿಕೊಂಡಿದ್ದಾರೆ.
ಹೀಗಾಗಿ ಗುರುವಾರದಂದು ಸಿಟಿ, ಎಂಆರ್ಐ ಮತ್ತು ಅಲ್ಟ್ರಾ ಸೇರಿದಂತೆ ಎಲ್ಲಾ ಬಗೆಯ ಸ್ಕ್ಯಾನ್ ಸೆಂಟರ್ ಗಳು ಬಂದ್ ಆಗಲಿವೆ. ತುರ್ತು ಪರಿಸ್ಥಿತಿಯಲ್ಲಿ ಮಾತ್ರ ದೊಡ್ಡ ಆಸ್ಪತ್ರೆಗಳಲ್ಲಿ ಸ್ಕ್ಯಾನಿಂಗ್ ಯಂತ್ರ ಚಾಲನೆಗೊಳಿಸಲಾಗುವುದು.[ದೇಶವ್ಯಾಪಿ ಮುಷ್ಕರ:ಯಾವ ಸೇವೆ ಲಭ್ಯ? ಯಾವುದು ಅಲಭ್ಯ?]
ಖಾಸಗಿ ಸ್ಕ್ಯಾನಿಂಗ್ ಸೆಂಟರ್ಗಳಲ್ಲಿ ದೈನಂದಿನ ಸ್ಕ್ಯಾನಿಂಗ್ ನಡೆಸುವುದಿಲ್ಲ ಎಂದು ಡಾ.ರಾಘವೇಂದ್ರ ಭಟ್ ಹೇಳಿದ್ದಾರೆ. ಆದರೆ, CAT ಹಾಗೂ ಎಂಆರ್ ಐ ಸ್ಕ್ಯಾನ್ ಬಗ್ಗೆ ಇನ್ನೂ ಸ್ಪಷ್ಟನೆ ಸಿಕ್ಕಿಲ್ಲ.

ಪ್ರತಿಭಟನೆ ಏಕೆ?: ಗರ್ಭಿಣಿ ಮಹಿಳೆಯರ ಸ್ಕ್ಯಾನಿಂಗ್ ಮಾಡಿಸಿ ಹೆಣ್ಣು ಭ್ರೂಣ ಪತ್ತೆಯಾದ ಬಳಿಕ ಹತ್ಯೆಗೆ ಮುಂದಾಗುತ್ತಿದ್ದಾರೆ. ಇದರಿಂದ ದೇಶದಲ್ಲಿ ಗಂಡು- ಹೆಣ್ಣಿನ ನಡುವಿನ ಅನುಪಾತ(1000:940) ಏರುಪೇರಾಗಲಿದೆ. ಈ ಪಿಡುಗನ್ನು ತಡೆಗಟ್ಟಲು 1996ರಲ್ಲಿ ಕಾಯಿದೆ ಜಾರಿಗೆ ತರಲಾಯಿತು. ಹೆಣ್ಣು ಮಕ್ಕಳನ್ನು ಸಂರಕ್ಷಿಸುವ ಕಾಯಿದೆಗೆ ಸ್ಕ್ಯಾನಿಂಗ್ ಸೆಂಟರ್ ಗಳಲ್ಲಿ ಸಹಮತವಿದೆ.
ಆದರೆ, ಸ್ಕ್ಯಾನಿಂಗ್ ಸೆಂಟರ್ ಗಳಲ್ಲಿ ಲಿಂಗ ಪತ್ತೆ ಮಾಡಲಾಗುತ್ತಿದೆ ಎಂದು ದೂರುವ ಅಧಿಕಾರಿಗಳು ಅನಗತ್ಯವಾಗಿ ಸೆಂಟರ್ ಗಳ ಮೇಲೆ ಕ್ರಮ ಜರುಗಿಸಲು ಮುಂದಾಗಿರುವುದನ್ನು ಖಂಡಿಸಿ ಪ್ರತಿಭಟನೆ ನಡೆಸಲಾಗುತ್ತಿದೆ. ಅಧಿಕಾರಿಗಳ ಧೋರಣೆಯನ್ನು ಖಂಡಿಸಿ ಅನಿವಾರ್ಯವಾಗಿ ಒಂದು ದಿನ ಮುಷ್ಕರ ನಡೆಸುತ್ತಿದ್ದು, ಸರಕಾರದ ಸ್ಪಂದಿಸದಿದ್ದಲ್ಲಿ ಮುಂದೆ ನಿರಂತರ ಮುಷ್ಕರ ನಡೆಯಲಿದೆ ಎಂದು ಸ್ಕ್ಯಾನಿಂಗ್ ಸೆಂಟರ್ ಗಳು ಎಚ್ಚರಿಕೆ ನೀಡಿವೆ.
-
ಶಾಲಾ ಮಕ್ಕಳ ಮೊಬೈಲ್ ಬಳಕೆ ನಿರ್ಬಂಧ: 'ಡಿಜಿಟಲ್ ಕರಡು ನೀತಿ' ಬಿಡುಗಡೆಗೊಳಿಸಿದ ರಾಜ್ಯ ಸರ್ಕಾರ -
Harish Rana: ಭಾರತದ ಮೊದಲ ದಯಾಮರಣದ ಹಕ್ಕುದಾರ ಹರೀಶ್ ರಾಣಾ ನಿಧನ, ಕುಟುಂಬಸ್ಥರಿಂದ ಅಂಗಾಂಗ ದಾನ -
Vastu Tips for Kitchen: ವಾಸ್ತು ಪ್ರಕಾರ ಅಡುಗೆ ಮನೆಯಲ್ಲಿ ಇವು ಇರಬಾರದು.. ಒಮ್ಮೆ ನೋಡಿ! -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
ನಾವು ಸೇವಿಸುವ ಈ ಆಹಾರಗಳಲ್ಲಿ ಆಲ್ಕೋಹಾಲ್ ಇರುತ್ತದೆ.. ಇದು ನಿಮಗೆ ಗೊತ್ತಿರಲಿ -
CBSE ಶಾಲೆಗಳಲ್ಲಿ ಋತುಚಕ್ರ ನೈರ್ಮಲ್ಯ ಕಡ್ಡಾಯ: ಸುಪ್ರೀಂ ಕೋರ್ಟ್ ಆದೇಶದ ಬೆನ್ನಲ್ಲೇ ಹೊಸ ನಿಯಮ ಜಾರಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ











Click it and Unblock the Notifications