ತಿಹಾರ್ ಜೈಲಿನಿಂದ ಉಮರ್ ಖಾಲಿದ್ ಬಿಡುಗಡೆ
ನವದೆಹಲಿ, ಡಿಸೆಂಬರ್ 23: ಉಮರ್ ಖಾಲಿದ್ ತನ್ನ ಸಹೋದರಿಯ ಮದುವೆ ಹಾಜರಾಗಲು ಏಳು ದಿನಗಳ ಮಧ್ಯಂತರ ಜಾಮೀನನ್ನು ದೆಹಲಿ ನ್ಯಾಯಲಯವು ಶುಕ್ರವಾರ ನೀಡಿದ್ದು, ಈಗ ತಿಹಾರ್ ಜೈಲಿನಿಂದ ಅವರು ಬಿಡುಗಡೆಯಾಗಿದ್ದಾರೆ.
2020ರ ಡಿಸೆಂಬರ್ 12 ರಂದು ಈಶಾನ್ಯ ದೆಹಲಿ ಗಲಭೆಯ ದೊಡ್ಡ ಪಿತೂರಿ ಪ್ರಕರಣದಲ್ಲಿ ವಿದ್ಯಾರ್ಥಿ ಕಾರ್ಯಕರ್ತ ಉಮರ್ ಖಾಲಿದ್ಗೆ ದೆಹಲಿ ನ್ಯಾಯಾಲಯವು ಒಂದು ವಾರದ ಮಧ್ಯಂತರ ಜಾಮೀನು ನೀಡಿತು. ಕರ್ಕರ್ಡೂಮಾ ಕೋರ್ಟ್ನ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಅಮಿತಾಭ್ ರಾವತ್ ಅವರು ಡಿಸೆಂಬರ್ 23ರಿಂದ ಒಂದು ವಾರದ ಅವಧಿಗೆ ಖಾಲಿದ್ಗೆ ಜಾಮೀನು ನೀಡಿದರು.
ಡಿಸೆಂಬರ್ 28ರಂದು ತನ್ನ ಸಹೋದರಿಯ ಮದುವೆಗೆ ಹಾಜರಾಗುವುದ್ದಕ್ಕಾಗಿ ಖಾಲಿದ್ಗೆ ಜಾಮೀನು ನೀಡಲಾಗಿದೆ. ಅವರು ಡಿಸೆಂಬರ್ 30ರಂದು ಶರಣಾಗಬೇಕು. ಅವರು ಮದುವೆಗೆ ಹಾಜರಾಗಲು ಎರಡು ವಾರಗಳ ಮಧ್ಯಂತರ ಜಾಮೀನು ಕೋರಿದ್ದರು. ನವೆಂಬರ್ 6 ರಂದು ನಡೆದ ವಾದದ ವೇಳೆ ಖಾಲಿದ್ ಪರ ವಕೀಲ ತ್ರಿದೀಪ್ ಪೈಸ್ ಅವರು ತಮ್ಮ ಸಹೋದರಿಯ ವಿವಾಹಕ್ಕೆ ಮಧ್ಯಂತರ ಜಾಮೀನು ನೀಡಿದರೆ ಮಾಧ್ಯಮಗಳೊಂದಿಗೆ ಮಾತನಾಡುವುದಿಲ್ಲ ಅಥವಾ ಯಾವುದೇ ಸಂದರ್ಶನವನ್ನು ನೀಡುವುದಿಲ್ಲ ಎಂದು ನ್ಯಾಯಾಲಯಕ್ಕೆ ಭರವಸೆ ನೀಡಿದ್ದರು.

ಅವರು ನ್ಯಾಯಾಲಯ ವಿಧಿಸುವ ಯಾವುದೇ ಷರತ್ತಿಗೆ ಬದ್ಧರಾಗಿರುತ್ತೇನೆ ಎಂದೂ ಅವರು ಹೇಳಿದ್ದಾರೆ. ಮಧ್ಯಂತರ ಜಾಮೀನಿನ ಮೇಲೆ ಖಾಲಿದ್ ಬಿಡುಗಡೆಯು ಅಶಾಂತಿಗೆ ಕಾರಣವಾಗಬಹುದು ಎಂದು ದೆಹಲಿ ಪೊಲೀಸರು ಈ ಹಿಂದೆ ಅರ್ಜಿ ಸಲ್ಲಿಸಿದ್ದರು. ಖಾಲಿದ್ ಪರವಾಗಿ ಸಲ್ಲಿಸಲಾದ ಮಧ್ಯಂತರ ಜಾಮೀನು ಅರ್ಜಿಯನ್ನು ವಿರೋಧಿಸಿ ದೆಹಲಿ ಪೊಲೀಸರು ಕಾರ್ಕರ್ಡೂಮಾ ನ್ಯಾಯಾಲಯಕ್ಕೆ ಸಲ್ಲಿಸಿದ ವರದಿಯನ್ನು ಸಲ್ಲಿಸಿದ್ದರು.
ಹಿರಿಯ ವಕೀಲ ತ್ರಿದೀಪ್ ಪೈಸ್ ಯುಎಪಿಎ ಅಡಿಯಲ್ಲಿ ಆರೋಪಿಗಳಿಗೆ ಮಧ್ಯಂತರ ಜಾಮೀನು ನೀಡಿದ ಪ್ರಕರಣಗಳನ್ನು ಉಲ್ಲೇಖಿಸಿದರು. ಮಾಧ್ಯಮಗಳೊಂದಿಗೆ ಸಂವಹನ ನಡೆಸಬಾರದು ಎಂಬ ಷರತ್ತನ್ನು ವಿಧಿಸಿ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿದ ಸಿದ್ದಿಕ್ ಕಪ್ಪನ್ ಪ್ರಕರಣವನ್ನೂ ಅವರು ಉಲ್ಲೇಖಿಸಿದರು.
ಪೈಸ್ ಅವರು, "ಸಿದ್ಧಿಕ್ ಕಪ್ಪನ್ ಅವರಿಗೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿದ್ದು ಷರತ್ತು ವಿಧಿಸಲಾಗಿದೆ. ದಯವಿಟ್ಟು ಷರತ್ತು ಹಾಕಿರುವುದನ್ನು ನೋಡಿ ನನ್ನ ಕಕ್ಷಿದಾರರಿಗೆ ಅದೇ ಷರತ್ತನ್ನು ಹಾಕಬಹುದು. ಖಾಲಿದ್ ಭೇಟಿಯ ಸಮಯದಲ್ಲಿ ಅವರು ಯಾವುದೇ ಮಾಧ್ಯಮ ಸಂದರ್ಶನಗಳನ್ನು ನೀಡುವುದಿಲ್ಲ ಎಂದು ತಿಳಿಸಿದರು.

ಸಹ ಆರೋಪಿ ಇಶ್ರತ್ ಜಹಾನ್ ತನ್ನ ಸ್ವಂತ ವಿವಾಹಕ್ಕಾಗಿ 10 ದಿನಗಳ ಮಧ್ಯಂತರ ಜಾಮೀನು ಪಡೆದ ಪ್ರಕರಣವನ್ನು ಸಹ ವಕೀಲರು ಉಲ್ಲೇಖಿಸಿದ್ದಾರೆ. ಮತ್ತೊಂದೆಡೆ, ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ (ಎಸ್ಪಿಪಿ) ಅಮಿತ್ ಪ್ರಸಾದ್ ಜಾಮೀನು ಅರ್ಜಿಯನ್ನು ವಿರೋಧಿಸಿದ್ದರು. ಸಿದ್ದಿಕ್ ಕಪ್ಪನ್ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿದೆ. ಉಲ್ಲೇಖಿಸಿದ ಇತರ ತೀರ್ಪುಗಳು ಉಮರ್ ಖಾಲಿದ್ ಪ್ರಕರಣಕ್ಕೆ ಅನ್ವಯಿಸುವುದಿಲ್ಲ ಎಂದು ಅವರು ಹೇಳಿದ್ದರು.
-
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ












Click it and Unblock the Notifications