ಉಗ್ರ ಸಂಘಟನೆ ಸೇರಿದವರಲ್ಲಿ ಕರ್ನಾಟಕ, ಕೇರಳದವರೇ ಹೆಚ್ಚು!
ನವದೆಹಲಿ, ಜುಲೈ.26: ಜಾಗತಿಕ ಮಟ್ಟದಲ್ಲಿ ಶಾಂತಿ ಕದಡುತ್ತಿರುವ ಇಸ್ಲಾಮಿಕ್ ಸ್ಟೇಟ್ಸ್ ಉಗ್ರ ಸಂಘಟನೆಯ ಸದಸ್ಯರು ಕರ್ನಾಟಕ ಮತ್ತು ಕೇರಳದಲ್ಲಿ ಗಣನೀಯ ಪ್ರಮಾಣದಲ್ಲಿದ್ದಾರೆ ಎಂದು ವಿಶ್ವಸಂಸ್ಥೆಯು ಎಚ್ಚರಿಕೆ ನೀಡಿದೆ.
ಭಾರತ, ಪಾಕಿಸ್ತಾನ, ಮಯನ್ಮಾರ್, ಮತ್ತು ಬಾಂಗ್ಲಾದೇಶದ 150 ರಿಂದ 200 ಮಂದಿ ಉಗ್ರರು ಅಲ್-ಖೈದಾ ಉಗ್ರ ಸಂಘಟನೆಯಲ್ಲಿ ಸೇರಿಕೊಂಡಿದ್ದು ಪ್ರತೀಕಾರಕ್ಕಾಗಿ ದಾಳಿ ನಡೆಸುವುದಕ್ಕೆ ಯೋಜನೆ ರೂಪಿಸುತ್ತಿದ್ದಾರೆ ಎಂದು ವಿಶ್ವಸಂಸ್ಥೆಯ ವರದಿಯಲ್ಲಿ ಎಚ್ಚರಿಸಿದೆ.
ಭಾರತೀಯ ಉಪಖಂಡದಲ್ಲಿ ಉಗ್ರ ಚಟುವಟಿಕೆ ಆರಂಭಿಸುವುದಕ್ಕೆ ಅಲ್-ಖೈದಾ ಪ್ಲ್ಯಾನ್ ಮಾಡಿಕೊಂಡಿದೆ. ಈಗಾಗಲೇ ಅಫ್ಘಾನಿಸ್ತಾನದ ನಿಮ್ರುಜ್, ಹೆಲ್ಮಂದ್ ಮತ್ತು ಕಂದಹಾರ್ ಪ್ರಾಂತ್ಯಗಳಲ್ಲಿ ತಾಲಿಬಾನ್ ಅಡಿಯಲ್ಲಿ ಅಲ್-ಖೈದಾ ಪ್ರತೀಕಾರಕ್ಕಾಗಿ ಹವಣಿಸುತ್ತಿದೆ. ಅದಕ್ಕಾಗಿ ಬೆಂಬಲ ನೀಡುವಂತೆ ಐಸಿಸ್ ಮತ್ತು ಅಲ್-ಖೈದಾ ಉಗ್ರ ಸಂಘಟನೆಗಳ ಸಂಪರ್ಕದಲ್ಲಿ ಸದಸ್ಯರು ಇದ್ದಾರೆ ಎಂದು 26ನೇ ವಿಶ್ಲೇಷಣಾತ್ಮಕ ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಪ್ರತೀಕಾರಕ್ಕಾಗಿ ದಾಳಿ ನಡೆಸಲು ಸಂಚು:
ಅಲ್-ಖೈದಾದ ಈ ಉಗ್ರರ ಗುಂಪಿನಲ್ಲಿ ಬಾಂಗ್ಲಾದೇಶ, ಭಾರತ, ಮ್ಯಾನ್ಮಾರ್ ಮತ್ತು ಪಾಕಿಸ್ತಾನದ 150 ರಿಂದ 200 ಸದಸ್ಯರಿದ್ದಾರೆ ಎಂದು ಹೇಳಲಾಗುತ್ತಿದೆ. ಭಾರತ ಉಪಖಂಡದಲ್ಲಿ ಅಲ್-ಖೈದಾ(ಎಕ್ಯೂಐಎಸ್) ಉಗ್ರ ಸಂಘಟನೆಗೆ ಒಸಾಮಾ ಮಹಮೂದ್ ಮುಖ್ಯಸ್ಥನಾಗಿದ್ದಾನೆ. ಎಕ್ಯೂಐಎಸ್ ಮಾಜಿ ನಾಯಕ ಅಸಿಮ್ ಉಮರ್ ಸಾವಿಗೆ ಪ್ರತೀಕಾರ ತೀರಿಸಿಕೊಳ್ಳಲು ಈ ಪ್ರದೇಶದಲ್ಲಿ ಪ್ರತೀಕಾರದ ಕಾರ್ಯಾಚರಣೆಯನ್ನು ಯೋಜಿಸುತ್ತಿದೆ ಎಂದು ವರದಿಯಾಗಿದೆ.
2019ರ ಮೇ.10ರಂದು ಘೋಷಿಸಲ್ಪಟ್ಟ ಅಂಕಿ-ಅಂಶಗಳ ಪ್ರಕಾರ ಭಾರತೀಯ ಅಂಗಸಂಸ್ಥೆಯಾಗಿರುವ ಐಎಸ್ಐಎಲ್ (ಹಿಂದ್ ವಿಲಾಯಾ) 180 ರಿಂದ 200 ಸದಸ್ಯರನ್ನು ಹೊಂದಿದೆ ಎಂದು ಒಂದು ಸದಸ್ಯ ರಾಷ್ಟ್ರವು ವರದಿ ಮಾಡಿತ್ತು. ಈ ಪೈಕಿ ಕೇರಳ ಮತ್ತು ಕರ್ನಾಟಕ ಭಾಗದಲ್ಲಿ ಅತಿಹೆಚ್ಚು ಕಾರ್ಯಚಟುವಟಿಕೆಗಳನ್ನು ನಡೆಸುವುದಾಗಿ ವರದಿಯಲ್ಲಿ ಉಲ್ಲೇಖಿಸಲಾಗಿತ್ತು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications