ನಿರ್ಮಾಣ ಹಂತದಲ್ಲಿದ್ದ ಬೃಹತ್ ಸೇತುವೆ ಕುಸಿತ: ಗಂಗೆ ಪಾಲಾದ 1,710 ಕೋಟಿ ಮೌಲ್ಯದ ಸೇತುವೆ
ಬಿಹಾರದಲ್ಲಿ ಗಂಗಾನದಿಗೆ ಅಡ್ಡಲಾಗಿ ಕಟ್ಟಲಾಗುತ್ತಿದ್ದ ಬೃಹತ್ ಸೇತುವೆ ಕುಸಿದು ಬಿದ್ದಿದೆ. ಸೇತುವೆ ಕುಸಿದು ಬೀಳುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿದೆ. 2014ರಲ್ಲಿ ಸೇತುವೆ ಉದ್ಘಾಟನೆಗೆ ಶಂಕುಸ್ಥಾಪನೆ ನೆರವೇರಿಸಲಾಗಿತ್ತು, ಸುಲ್ತಂಗಂಜ್ ಮತ್ತು ಖಗಾರಿಯಾವನ್ನು ಈ ಸೇತುವೆ ಸಂಪರ್ಕಿಸುತ್ತದೆ.
ಆದರೆ, ಘಟನೆಯಲ್ಲಿ ಯಾರಾದರೂ ಗಾಯಗೊಂಡಿದ್ದಾರೆಯೇ ಎಂಬುದು ಇನ್ನೂ ಖಚಿತವಾಗಿಲ್ಲ. 1,710 ಕೋಟಿ ಅಂದಾಜು ವೆಚ್ಚದ 3,160 ಮೀಟರ್ ಉದ್ದದ ನಾಲ್ಕು ಪಥದ ಕೇಬಲ್ ತಂಗುದಾಣ ಸೇತುವೆಯ ಜೊತೆಗೆ ಅಪ್ರೋಚ್ ರಸ್ತೆಯ ನಿರ್ಮಾಣಕ್ಕೆ ಸಿಎಂ ನಿತೀಶ್ ಕುಮಾರ್ ಫೆಬ್ರವರಿ 23, 2014 ರಂದು ಅಡಿಪಾಯ ಹಾಕಿದ್ದರು.

ಈ ವರ್ಷದ ಏಪ್ರಿಲ್ತಿಂಗಳಿನಲ್ಲಿ ಸುರಿದ ಭಾರಿ ಮಳೆಯ ಪರಿಣಾಮ ಸೇತುವೆಗೆ ಹಾನಿಯಾಗಿತ್ತು, 2 ವರ್ಷಗಳ ಹಿಂದೆ ಕೂಡ ಸೇತುವೆ ಒಂದು ಭಾಗ ಕುಸಿದಿತ್ತು ಎಂದು ವರದಿಯಾಗಿದೆ.
#Bihar a portion of under construction bridge over Ganga river collapsed today. The Aguanhighat Sultanganj bridge will connect Khagaria and Bhagalpur districts. pic.twitter.com/7DLTQszso7
— All India Radio News (@airnewsalerts) June 4, 2023
ಮಳೆಯಿಂದಾಗಿ ಸೇತುವೆಗೆ ಹಾನಿಯಾದಾಗಲೇ ಕಳಪೆ ಕಾಮಗಾರಿ ನಡೆದಿದೆ ಎನ್ನುವ ಆರೋಪ ಕೇಳಿ ಬಂದಿತ್ತು. ಆದರೆ ಸೇತುವೆ ನಿರ್ಮಾಣಕ್ಕೆ ಸಂಬಂಧಪಟ್ಟಂತೆ ಯಾವೊಬ್ಬ ಅಧಿಕಾರಿಯಾಗಲಿ, ಗುತ್ತಿಗೆದಾರರಾಗಲಿ ಈ ಬಗ್ಗೆ ತಲೆಕೆಡಿಸಿಕೊಂಡಿರಲಿಲ್ಲ. ಅಧಿಕಾರಿಗಳ ನಿರ್ಲಕ್ಷ್ಯದ ಕಾರಣದಿಂದಾಗಿ ನಿರ್ಮಾಣ ಹಂತದಲ್ಲೇ ಸೇತುವೆ ಕುಸಿದು ಗಂಗೆಯ ಪಾಲಾಗಿದೆ.
ಕಳಪೆ ಕಾಮಗಾರಿಗಳ ಬಗ್ಗೆ ಹಲವು ವರದಿಗಳು
2022ರ ಡಿಸೆಂಬರ್ ತಿಂಗಳಿನಲ್ಲಿ, ಬೇಗುಸರಾಯ್ನಲ್ಲಿ ಬುರ್ಹಿ ಗಂಡಕ್ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿದ್ದ ಸೇತುವೆಯ ಒಂದು ಭಾಗ ಕುಸಿದ ಬಗ್ಗೆ ವರದಿಯಾಗಿತ್ತು. ಸೇತುವೆಯ 2-3 ಕಂಬಗಳು ಉರುಳಿದ್ದು, ಸೇತುವೆಯ ಒಂದು ಭಾಗ ಕುಸಿಯಲು ಕಾರಣವಾಗಿತ್ತು. ಅದಕ್ಕೂ ಕೆಲವು ದಿನಗಳ ಮೊದಲು ನಳಂದ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಸೇತುವೆಯೊಂದು ಮುರಿದುಬಿದ್ದಿತ್ತು. ಘಟನೆಯಲ್ಲಿ ಕಾರ್ಮಿಕನೊಬ್ಬ ಮೃತಪಟ್ಟು ಇಬ್ಬರು ಕಾರ್ಮಿಕರು ಗಾಯಗೊಂಡಿದ್ದರು.
ಕಿಶನ್ಗಂಜ್ ಮತ್ತು ಸಹರ್ಸಾ ಜಿಲ್ಲೆಗಳಲ್ಲಿಯೂ ಉದ್ಘಾಟನೆಗೆ ಮುನ್ನ ನಿರ್ಮಾಣ ಹಂತದಲ್ಲಿದ್ದ ಸೇತುವೆಗಳು ಕುಸಿದ ಬಗ್ಗೆ ವರದಿಯಾಗಿತ್ತು. ಇನ್ನು ಬಿಹಾರದಲ್ಲಿ ಕಳಪೆ ಕಾಮಗಾರಿಗಳನ್ನು ನೋಡಿರುವ ನಾಗರಿಕರು ನಿತೀಶ್ ಕುಮಾರ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications