ಗ್ರಾಮೀಣ ಪ್ರದೇಶಗಳಲ್ಲಿ ನಿರುದ್ಯೋಗ ದರ ತೀವ್ರ ಏರಿಕೆ: ಸಿಎಮ್ಐಇ ವರದಿ
ನವದೆಹಲಿ, ಜು.26: ದೇಶಾದ್ಯಂತ ಗ್ರಾಮೀಣ ಪ್ರದೇಶಗಳಲ್ಲಿ ನಿರುದ್ಯೋಗ ದರ ಏರಿಕೆಯಾಗಿದ್ದು, ಜುಲೈ 25 ಕ್ಕೆ ಕೊನೆಗೊಂಡ ವಾರದಲ್ಲಿ ಇದು ಶೇಕಡ 6.75 ರಷ್ಟು ಏರಿಕೆಯಾಗಿದೆ ಎಂದು ಸೆಂಟರ್ ಫಾರ್ ಮಾನಿಟರಿಂಗ್ ಇಂಡಿಯನ್ ಎಕಾನಮಿ (ಸಿಎಮ್ಐಇ) ಯ ಹೊಸ ಅಂಕಿ ಅಂಶಗಳು ತಿಳಿಸಿವೆ. ಒಂದು ವಾರದ ಹಿಂದೆ ಗ್ರಾಮೀಣ ಪ್ರದೇಶಗಳಲ್ಲಿ ನಿರುದ್ಯೋಗ ದರವು ಶೇಕಡಾ 5.1 ರಷ್ಟಿತ್ತು.
ಇನ್ನು ಈ ಸಂದರ್ಭದಲ್ಲೇ ನಗರ ಉದ್ಯೋಗದಲ್ಲಿ ಅಲ್ಪ ಏರಿಕೆ ಕಂಡುಬಂದಿದೆ. ಜುಲೈ 25 ಕ್ಕೆ ಕೊನೆಗೊಂಡ ವಾರದಲ್ಲಿ ನಗರ ನಿರುದ್ಯೋಗವು ಶೇಕಡ 8.01 ಕ್ಕೆ ಏರಿಕೆಯಾಗಿದ್ದು, ವಾರದ ಹಿಂದೆ ಶೇ 7.94 ರಷ್ಟಿತ್ತು.
ಕೋವಿಡ್ -19 ನಿರ್ಬಂಧಗಳನ್ನು ಸಡಿಲಿಸಿಕೆ ಹಾಗೂ ಹೆಚ್ಚುತ್ತಿರುವ ಆರ್ಥಿಕ ಚಟುವಟಿಕೆಗಳ ಹೊರತಾಗಿಯೂ ನಗರ ನಿರುದ್ಯೋಗ ದರವು, ಗ್ರಾಮೀಣ ಮತ್ತು ರಾಷ್ಟ್ರೀಯ ಸರಾಸರಿಗಿಂತ ಹೆಚ್ಚಾಗಿದೆ ಎಂದು ವರದಿಯಾಗಿದೆ. ಈ ಸಂದರ್ಭದಲ್ಲೇ, ರಾಷ್ಟ್ರೀಯ ನಿರುದ್ಯೋಗ ದರವು ಶೇಕಡ 7.14 ರಷ್ಟಿದೆ. ಈ ದರವು ವಾರದ ಹಿಂದಿನ ಅವಧಿಯಲ್ಲಿ 5.98 ರಷ್ಟಿತ್ತು ಎಂದು ಸೆಂಟರ್ ಫಾರ್ ಮಾನಿಟರಿಂಗ್ ಇಂಡಿಯನ್ ಎಕಾನಮಿ (ಸಿಎಮ್ಐಇ) ಯ ಅಂಕಿ ಅಂಶಗಳು ತಿಳಿಸಿವೆ.

ಜುಲೈ 25 ಕ್ಕೆ ಕೊನೆಗೊಂಡ ವಾರದಲ್ಲಿ ಒಟ್ಟಾರೆ ನಿರುದ್ಯೋಗ ದರವು ಹೆಚ್ಚಾಗಿದ್ದರೆ, ಕೋವಿಡ್ -19 ರ ಎರಡನೇ ಅಲೆಯ ಮಧ್ಯೆ ನಿರುದ್ಯೋಗ ತೀವ್ರವಾಗಿ ಹೆಚ್ಚಾದ ಹಿಂದಿನ ಮೂರು ತಿಂಗಳುಗಳಿಗಿಂತ ಪರಿಸ್ಥಿತಿ ಉತ್ತಮವಾಗಿದೆ. ಭಾರತದ ನಗರ ಭಾಗಗಳಲ್ಲಿ ನಿರುದ್ಯೋಗ ದರವು ಜುಲೈ ಆರಂಭದಿಂದಲೂ ಶೇಕಡ 9 ಕ್ಕಿಂತಲೂ ಕಡಿಮೆಯಿದೆ. ಹಾಗೆಯೇ ರಾಷ್ಟ್ರಮಟ್ಟದಲ್ಲಿ ನಿರುದ್ಯೋಗ ದರವು ಶೇಕಡ 8 ಕ್ಕಿಂತಲೂ ಕಡಿಮೆಯಾಗಿದೆ.
ಈ ನಡುವೆ, ಜೂನ್ನಲ್ಲಿ ಮಾಸಿಕ ರಾಷ್ಟ್ರೀಯ ನಿರುದ್ಯೋಗ ದರವು ಶೇಕಡ 9.17 ರಷ್ಟಿದ್ದರೆ, ನಗರ ಭಾರತದಲ್ಲಿ ಇದು 10.07 ಮತ್ತು ಗ್ರಾಮೀಣ ಭಾರತದಲ್ಲಿ ಶೇಕಡ 8.75 ರಷ್ಟಿತ್ತು. ಮುಂಗಾರು ಪ್ರಗತಿಯೊಂದಿಗೆ ಹೆಚ್ಚಿನ ಆರ್ಥಿಕ ಚಟುವಟಿಕೆಗಳನ್ನು ತೆರೆಯಲಾಗಿದ್ದು, ನಗರ ಮತ್ತು ಗ್ರಾಮೀಣ ಉದ್ಯೋಗವನ್ನು ಸ್ಥಿರಗೊಳಿಸಲು ಸಹಾಯ ಮಾಡಿದೆ ಎಂದು ನಾವು ಈ ಸಂದರ್ಭದಲ್ಲಿ ಗಮನಿಸಬಹುದು.
ಆದರೆ ಕೋವಿಡ್ ಸಾಂಕ್ರಾಮಿಕ ರೋಗದ ಮತ್ತೊಂದು ಅಲೆಯಿಂದ ದೇಶವು ಅಪ್ಪಳಿಸಿದಾಗಿನಿಂದಲೂ ಉದ್ಯೋಗಾವಕಾಶಗಳು ಭಾರೀ ಕಡಿಮೆಯಾಗಿರುವುದರಿಂದ ದೇಶದ ಉದ್ಯೋಗ ಮಾರುಕಟ್ಟೆಯಲ್ಲಿ ಪರಿಸ್ಥಿತಿ ಜಿಗುಟಾಗಿದೆ. ಎರಡನೆಯ ಕೋವಿಡ್ ಅಲೆಯು ಆರ್ಥಿಕತೆಯ ಮೇಲೆ ಸೌಮ್ಯವಾದ ಪರಿಣಾಮವನ್ನು ಬೀರಿದರೆ, ಈ ಕೋವಿಡ್ನ ಎರಡನೇ ಅಲೆಯೇ ಅನೌಪಚಾರಿಕ ವಲಯದ ಮೇಲೆ ತೀವ್ರ ಪರಿಣಾಮ ಬೀರಿದೆ. ಲಕ್ಷಾಂತರ ಜನರು ಉದ್ಯೋಗ ಕಳೆದುಕೊಂಡಿದ್ದಾರೆ. ದೇಶದಲ್ಲಿ ಉದ್ಯೋಗ ದರವು ಜೂನ್ನಿಂದ ಕೊಂಚ ಚೇತರಿಸಿಕೊಳ್ಳುತ್ತಿದೆ.
(ಒನ್ಇಂಡಿಯಾ ಸುದ್ದಿ)
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications