Unified Pension Scheme: ಏನಿದು ಏಕೀಕೃತ ಪಿಂಚಣಿ ಯೋಜನೆ? ಮಾಹಿತಿ, ವಿವರ
ಕೇಂದ್ರ ಸರ್ಕಾರಿ ನೌಕರರಿಗೆ ಏಕೀಕೃತ ಪಿಂಚಣಿ ಯೋಜನೆಗೆ (ಯುಪಿಎಸ್) ಕೇಂದ್ರ ಸರ್ಕಾರ ಅನುಮೋದನೆ ಕೊಟ್ಟಿದೆ. ಇದರಿಂದ 23 ಲಕ್ಷ ಕೇಂದ್ರ ಸರ್ಕಾರಿ ನೌಕರರು ಪ್ರಯೋಜನ ಪಡೆಯಲಿದ್ದಾರೆ ಎಂದು ಸಚಿವ ಅಶ್ವಿನ್ ವೈಷ್ಣವ್ ಹೇಳಿದ್ದಾರೆ. ಹೊಸ ಪಿಂಚಣಿ ಯೋಜನೆ (ಎನ್ಪಿಎಸ್)ಗೆ ವಿರೋಧ ವ್ಯಕ್ತವಾಗುತ್ತಿರುವ ಬೆನ್ನಲ್ಲೇ ಕೇಂದ್ರ ಸರ್ಕಾರ ಏಕೀಕೃತ ಪಿಂಚಣಿ ಯೋಜನೆ ಜಾರಿಗೆ ನಿರ್ಧರಿಸಿದೆ. ಇದು ಸರ್ಕಾರಿ ನೌಕರರಿಗೆ ನಿವೃತ್ತಿಯ ಬಳಿಕ ಆರ್ಥಿಕ ಭದ್ರತೆ ಒದಗಿಸುವ ಗುರಿ ಹೊಂದಿದೆ.
ಹಾಗಾದರೆ ಏನಿದು ಏಕೀಕೃತ ಪಿಂಚಣಿ ಯೋಜನೆ, ಇದರಿಂದ ಕೇಂದ್ರ ಸರ್ಕಾರಿ ನೌಕರರಿಗೆ ಆಗುವ ಪ್ರಯೋಜನಗಳೇನು ಎನ್ನುವ ವಿವರ ಇಲ್ಲಿದೆ.

ನೌಕರರಿಗೆ ಖಚಿತ ಪಿಂಚಣಿ
ಈ ಮೊದಲು ಕನಿಷ್ಠ 25 ವರ್ಷಗಳ ಕಾಲ ಸೇವೆ ಸಲ್ಲಿಸಿದ ಉದ್ಯೋಗಿಗಳು ನಿವೃತ್ತಿಯ ಹಿಂದಿನ 12 ತಿಂಗಳುಗಳಲ್ಲಿ ಅವರ ಸರಾಸರಿ ಮೂಲ ವೇತನದ 50% ಖಚಿತ ಪಿಂಚಣಿಯನ್ನು ಪಡೆಯುತ್ತಿದ್ದರು. 25 ವರ್ಷಕ್ಕಿಂತ ಕಡಿಮೆ ಸೇವೆ ಹೊಂದಿದ್ದವರಿಗೆ ಪಿಂಚಣಿಯು ಅವರ ಅವಧಿಗೆ ಅನುಗುಣವಾಗಿರುತ್ತದೆ, ಆದರೆ ಏಕೀಕೃತ ಪಿಂಚಣಿ ಯೋಜನೆಯಲ್ಲಿ ಕನಿಷ್ಠ ಅರ್ಹತಾ ಸೇವಾ ಅವಧಿಯನ್ನು 10 ವರ್ಷಗಳಿಗೆ ನಿಗದಿಪಡಿಸಲಾಗಿದೆ.
ಖಚಿತ ಕುಟುಂಬ ಪಿಂಚಣಿ
ಕೇಂದ್ರ ಸರ್ಕಾರಿ ನೌಕರ ಮರಣ ಹೊಂದಿದ ಬಳಿಕ ಆತನ ಸಂಗಾತಿಯು ಕುಟುಂಬ ಪಿಂಚಣಿಯನ್ನು ಪಡೆಯಲಿದ್ದಾರೆ. ನೌಕರ ಮೃತಪಡುವ ಮೊದಲು ಪಡೆಯುತ್ತಿದ್ದ ಪಿಂಚಣಿಯ 60% ರಷ್ಟು ಸಂಗಾತಿಗೆ ಪ್ರತಿ ತಿಂಗಳು ಸಿಗಲಿದೆ.
ಖಚಿತ ಕನಿಷ್ಠ ಪಿಂಚಣಿ
ಕನಿಷ್ಠ 10 ವರ್ಷಗಳ ಸೇವೆಯನ್ನು ಪೂರ್ಣಗೊಳಿಸಿದ ನೌಕರರಿಗೆ ಸಹ, ನಿವೃತ್ತಿಯ ನಂತರ ತಿಂಗಳಿಗೆ ₹ 10,000 ಕನಿಷ್ಠ ಪಿಂಚಣಿಯನ್ನು ಖಚಿತವಾಗಿ ಪಡೆಯಲಿದ್ದಾರೆ.
ಹಣದುಬ್ಬರ ಸೂಚ್ಯಂಕಕ್ಕೆ ತಕ್ಕಂತೆ ಬದಲಾವಣೆ
ಖಚಿತವಾದ ಪಿಂಚಣಿ ಮತ್ತು ಕುಟುಂಬ ಪಿಂಚಣಿ ಎರಡೂ ಹಣದುಬ್ಬರ ಸೂಚ್ಯಂಕಕ್ಕೆ ಒಳಪಟ್ಟಿರುತ್ತವೆ. ಈ ಹೊಂದಾಣಿಕೆಯು ಪಿಂಚಣಿಗಳು ಹಣದುಬ್ಬರಕ್ಕೆ ಅನುಗುಣವಾಗಿ ಬದಲಾಗಲಿವೆ.
ಸೇವೆ ಸಲ್ಲಿಸುತ್ತಿರುವ ಉದ್ಯೋಗಿಗಳಂತೆಯೇ, ಏಕೀಕೃತ ಪಿಂಚಣಿ ಯೋಜನೆ ಅಡಿಯಲ್ಲಿ ನಿವೃತ್ತರಾದವರು ಕೈಗಾರಿಕಾ ಕಾರ್ಮಿಕರು (AICPI-IW) ಅಖಿಲ ಭಾರತ ಗ್ರಾಹಕ ಬೆಲೆ ಸೂಚ್ಯಂಕವನ್ನು ಆಧರಿಸಿ ಡಿಯರ್ನೆಸ್ ರಿಲೀಫ್ ಅನ್ನು ಪಡೆಯುತ್ತಾರೆ.
ದೊಡ್ಡ ಮೊತ್ತ ಪಾವತಿ
ಗ್ರಾಚ್ಯುಟಿ ಜೊತೆಗೆ, ಉದ್ಯೋಗಿಗಳು ನಿವೃತ್ತಿಯ ಸಮಯದಲ್ಲಿ ದೊಡ್ಡ ಮೊತ್ತದ ಹಣವನ್ನು ಪಡೆಯಲಿದ್ದಾರೆ. ಇದು ನಿವೃತ್ತಿಯ ದಿನಾಂಕದಂದು, ಪೂರ್ಣಗೊಂಡ ಪ್ರತಿ ಆರು ತಿಂಗಳ ಸೇವೆಗೆ ಉದ್ಯೋಗಿಯ ಮಾಸಿಕ ವೇತನದ 1/10 ಭಾಗವಾಗಿರುತ್ತದೆ (ವೇತನ ಮತ್ತು ತುಟ್ಟಿ ಭತ್ಯೆ ಸೇರಿದಂತೆ). ಇದು ಪಿಂಚಣಿ ಪ್ರಮಾಣವನ್ನು ಕಡಿಮೆ ಮಾಡುವುದಿಲ್ಲ.
23 ಲಕ್ಷ ನೌಕರರಿಗೆ ಪ್ರಯೋಜನ
ಏಕೀಕೃತ ಪಿಂಚಣಿ ಯೋಜನೆಯಿಂದ 23 ಲಕ್ಷ ಕೇಂದ್ರ ಸರ್ಕಾರಿ ನೌಕರರು ಪ್ರಯೋಜನ ಪಡೆಯಲಿದ್ದಾರೆ. ರಾಜ್ಯ ಸರ್ಕಾರ ಕೂಡ ಈ ಯೋಜನೆಗೆ ಸೇರಲು ಒಪ್ಪಿದರೆ ಸುಮಾರು 90 ಲಕ್ಷ ಪಿಂಚಣಿದಾರರು ಈ ಯೋಜನೆಯಡಿ ಪ್ರಯೋಜನ ಪಡೆಯುವ ನಿರೀಕ್ಷೆ ಇದೆ.
ಹಲವು ಬಿಜೆಪಿಯೇತರ ಆಡಳಿತವಿರುವ ರಾಜ್ಯಗಳು, ಡಿಎ ಸಂಯೋಜಿತ ಹಳೆಯ ಪಿಂಚಣಿ ಯೋಜನೆಗೆ (ಒಪಿಎಸ್) ವಾಪಸಾಗಲು ನಿರ್ಧರಿಸಿವೆ. ಉದ್ಯೋಗಿಗಳು ಕೂಡ ಹಳೆಯ ಪಿಂಚಣಿ ವ್ಯವಸ್ಥೆಯನ್ನೇ ಮುಂದುವರೆಸಲು ಒತ್ತಾಯಿಸುತ್ತಿರುವ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ಏಕೀಕೃತ ಪಿಂಚಣಿ ಯೋಜನೆ ಜಾರಿಗೆ ಅನುಮೋದನೆ ನೀಡಿದೆ.












Click it and Unblock the Notifications