ಜೇಟ್ಲಿ ಮಂಡಿಸಿದ ಕೇಂದ್ರ ಬಜೆಟ್ 2018 ಮುಖ್ಯಾಂಶಗಳು
Recommended Video

ಕೇಂದ್ರ ಬಜೆಟ್ 2018 : ಲೋಕಸಭೆಯಲ್ಲಿ ಶುರುವಾದ ಕಲಾಪ
ನವದೆಹಲಿ, ಫೆಬ್ರವರಿ 1 : ಬಡವರಿಂದ ಹಿಡಿದು ಶ್ರೀಮಂತ ಜನರ ಅಪಾರ ನಿರೀಕ್ಷೆಗಳ ಮೂಟೆಯನ್ನು ಹೊತ್ತುಕೊಂಡು ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿಯವರು ಫೆಬ್ರವರಿ 1ರ ಗುರುವಾರದಂದು 2018-19ನೇ ಸಾಲಿನ ಕೇಂದ್ರ ಬಜೆಟ್ ಮಂಡಿಸಿದ್ದಾರೆ.
ಬಜೆಟ್ಟಿನಲ್ಲಿ ಕೃಷಿ ಉದ್ಯಮ ಮತ್ತು ಗ್ರಾಮೀಣ ಜನತೆಯನ್ನು ಗಮನದಲ್ಲಿಟ್ಟುಕೊಂಡು ಅರುಣ್ ಜೇಟ್ಲಿಯವರು ಹಲವಾರು ಯೋಜನೆಗಳನ್ನು ಹರಿಯಬಿಟ್ಟಿದ್ದಾರೆ. ಕೃಷಿಯನ್ನು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಕಡೆಗಣಿಸುತ್ತಿದೆ ಎಂದು ವಿರೋಧಿಗಳಿಂದ ಸಾಕಷ್ಟು ಟೀಕೆಗಳು ಕೇಳಿಬಂದಿದ್ದವು.
ಆದಾಯ ತೆರಿಗೆ ಮಿತಿಯನ್ನು ಮುಟ್ಟದಿರುವುದು ಕೆಳಮಧ್ಯಮ ವರ್ಗದ ಜನತೆಗೆ ಭಾರೀ ನಿರಾಶೆ ಉಂಟು ಮಾಡಿದೆ. ಶಿಕ್ಷಣ ಸೆಸ್ ಶೇ.4ರಷ್ಟು ಏರಿಸಿರುವುದು ಕೂಡ ಮಧ್ಯಮ ಜನರಿಗೆ ಬಿಸಿ ತಟ್ಟಿಸಲಿದೆ. ಇನ್ನು ಮುಂಬರುವ ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡೇ ಗ್ರಾಮೀಣ ಜನತೆಗೆ ಸಾಕಷ್ಟು ಸೌಲಭ್ಯಗಳನ್ನು ಜೇಟ್ಲಿ ಒದಗಿಸಿದ್ದಾರೆ.

ಶಿಕ್ಷಣ ಸೆಸ್ ಶೇ.4ರಷ್ಟು ಏರಿಕೆ. ಶಿಕ್ಷಣ ಆಗಲಿದೆ ಇನ್ನಷ್ಟು ದುಬಾರಿ. ಮೊಬೈಲ್, ಟಿವಿ ಮತ್ತಿತರ ಎಲೆಕ್ಟ್ರಾನಿಕ್ಸ್ ವಸ್ತುಗಳ ಬೆಲೆ ಏರಿಕೆ ಸಾಧ್ಯತೆ.
ಆಮದು ಮಾಡಿಕೊಳ್ಳಲಾಗುವ ಮೊಬೈಲ್ ಮೇಲೆ ಕಸ್ಟಮ್ಸ್ ತೆರಿಗೆಯನ್ನು ಶೇ.15ರಿಂದ ಶೇ.20ಕ್ಕೆ ಏರಿಸಲಾಗಿದೆ.
100 ಕೋಟಿಗೂ ಹೆಚ್ಚು ಆದಾಯವಿರುವ ಕೃಷಿ ಉತ್ಪನ್ನ ಉತ್ಪಾದಿಸುವ ಕಂಪನಿಗಳಿಗೆ ಮೊದಲ 5 ವರ್ಷ ಶೇ.100ರಷ್ಟು ಆದಾಯ ತೆರಿಗೆ ವಿನಾಯಿತಿ.
250 ಕೋಟಿ ರುಪಾಯಿಗೂ ಹೆಚ್ಚು ವಾರ್ಷಿಕ ಆದಾಯವಿರುವ ಕಂಪನಿಗಳಿಗೂ ಶೇ.25ರಷ್ಟು ಕಾರ್ಪೊರೇಟ್ ತೆರಿಗೆ ವಿಧಿಸಲಾಗುವುದು
ಕಳೆದ 3 ವರ್ಷಗಳಲ್ಲಿ ವೈಯಕ್ತಿಕ ತೆರಿಗೆಯಲ್ಲಿ ಸಾಕಷ್ಟು ಬದಲಾವಣೆ ಮಾಡಿರುವುದರಿಂದ ಈ ವರ್ಷ ಯಾವುದೇ ತಿದ್ದುಪಡಿ ಇರುವುದಿಲ್ಲ. ಹಾಗಾಗಿ, ಆದಾಯ ತೆರಿಗೆ ಮಿತಿ ಏರಿಕೆ ಇರುವುದಿಲ್ಲ.
ಪ್ರಾಮಾಣಿಕ ತೆರಿಗೆದಾರರು ಅಪನಗದೀಕರಣವನ್ನು 'ಪ್ರಾಮಾಣಿಕತೆಯ ಉತ್ಸವ'ವನ್ನಾಗಿ ಮಾಡಿದ್ದಾರೆ. 2014-15ರಲ್ಲಿ 6.47 ಕೋಟಿ ಇದ್ದ ತೆರಿಗೆದಾರರ ಸಂಖ್ಯೆ 2016-17ರಲ್ಲಿ 8.27 ಆಗಿದೆ.
ರಾಷ್ಟ್ರಪತಿ ಸಂಬಳವನ್ನು ತಿಂಗಳಿಗೆ 5 ಲಕ್ಷ ರುಪಾಯಿಗೆ ಮತ್ತು ಉಪರಾಷ್ಟ್ರಪತಿ ಸಂಬಳವನ್ನು ತಿಂಗಳಿಗೆ 4 ಲಕ್ಷ ರುಪಾಯಿ ಮತ್ತು ರಾಜ್ಯಪಾಲರ ಸಂಬಳವನ್ನು 3.5 ಲಕ್ಷ ರುಪಾಯಿಗೆ ಪರಿಷ್ಕರಣೆ ಮಾಡಲಾಗಿದೆ.
ರಾಷ್ಟ್ರಪತಿ, ಉಪರಾಷ್ಟ್ರಪತಿ, ರಾಜ್ಯಪಾಲರು, ಸಂಸದೀಯರ ಸಂಬಳದಲ್ಲಿ ಏರಿಕೆ. ಪ್ರತಿ 5 ವರ್ಷಗಳಿಗೊಮ್ಮೆ ಹಣದುಬ್ಬರದ ಆಧಾರದ ಮೇಲೆ ಸಂಬಳ ಪರಿಷ್ಕರಣೆ ಮಾಡಲಾಗುವುದು.
ಭಾರತ ಏರ್ಪೋರ್ಟ್ ಪ್ರಾಧಿಕಾರದಡಿಯಲ್ಲಿ 124 ವಿಮಾನ ನಿಲ್ದಾಣಗಳಿವೆ. ಇದನ್ನು 5 ಪಟ್ಟು ಹೆಚ್ಚಿಸಲಾಗುವುದು ಮತ್ತು ಪ್ರತಿವರ್ಷ 1 ಬಿಲಿಯನ್ ಟ್ರಿಪ್ ಗುರಿ ಇಟ್ಟುಕೊಳ್ಳಲಾಗಿದೆ
2017ರ ಸೆಪ್ಟೆಂಬರ್ ನಲ್ಲಿ ಬುಲೆಟ್ ಟ್ರೈನ್ ಗಾಗಿ ಅಡಿಗಲ್ಲು ಹಾಕಲಾಗಿದೆ. ಹೈಸ್ಪೀಟ್ ರೈಲು ಯೋಜನೆಗಳಿಗಾಗಿ ತರಬೇತಿ ನೀಡಲು ಬರೋಡಾದಲ್ಲಿ ಸಂಸ್ಥೆ ಸ್ಥಾಪಿಸಲಾಗುತ್ತಿದೆ
ಪ್ರತಿದಿನ 25 ಸಾವಿರಕ್ಕೂ ಹೆಚ್ಚು ಪ್ರಯಾಣಿಕರು ಪ್ರಯಾಣಿಸುವ ರೈಲು ನಿಲ್ದಾಣಗಳಲ್ಲಿ ಎಸ್ಕಲೇಟರ್, ಎಲ್ಲ ನಿಲ್ದಾಣಗಳಲ್ಲಿ ವೈಫೈ, ಸಿಸಿಟಿವಿ ಅಳವಡಿಸಲಾಗುವುದು. ಮುಂಬೈ ರೈಲು ಸಂಪರ್ಕವನ್ನು 11 ಕೋಟಿ ರುಪಾಯಿ ಯೋಜನೆಯಲ್ಲಿ ಮೇಲ್ದರ್ಜೆಗೇರಿಸಲಾಗುವುದು.
ಗಂಗಾ ನದಿ ಶುದ್ಧೀಕರಣ ರಾಷ್ಟ್ರೀಯ ಆದ್ಯತೆಯಾಗಿದೆ. ನಮಾಮಿ ಗಂಗಾ ಯೋಜನೆಯಡಿಯಲ್ಲಿ 187 ಪ್ರಾಜೆಕ್ಟ್ ಗಳಿಗೆ ಅನುಮೋದನೆ ನೀಡಲಾಗಿದೆ.
ಪರಿಶಿಷ್ಟ ಜಾತಿಯ ಅಭ್ಯದಯಕ್ಕಾಗಿ 56,619 ಕೋಟಿ ರುಪಾಯಿ ಮತ್ತು ಪರಿಶಿಷ್ಟ ಪಂಗಡಗಳಿಗಾಗಿ 39,135 ಕೋಟಿ ರುಪಾಯಿ ನಿಯೋಜನೆ.
ಶೈಕ್ಷಣಿಕ ಗುಣಮಟ್ಟವನ್ನು ವೃದ್ಧಿಪಡಿಸಲು ತಂತ್ರಜ್ಞಾನವನ್ನು ಅಧಿಕವಾಗಿ ಬಳಸಲಾಗುವುದು. ಕಪ್ಪು ಹಲಗೆಯಿಂದ ಡಿಜಿಟಲ್ ಬೋರ್ಡ್ ಅಳವಡಿಸಲಾಗುವುದು.
ಪ್ರಸ್ತುತ ಜಿಲ್ಲಾಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸುವುದಲ್ಲದೆ 24 ಹೊಸ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಗಳನ್ನು ನಿರ್ಮಿಸಲು ಸರಕಾರ ಯೋಜನೆ ಹಾಕಿಕೊಂಡಿದೆ
600 ಕೋಟಿ ರುಪಾಯಿ ಕ್ಷಯ ರೋಗಿಗಳಿಗಾಗಿ ನಿಗದಿ, ಪ್ರತಿ ಮೂರು ಕ್ಷೇತ್ರಗಳಿಗೆ 1 ಮೆಡಿಕಲ್ ಕಾಲೇಜು ನಿರ್ಮಾಣದ ವಾಗ್ದಾನ
10 ಕೋಟಿ ಬಡ ಮತ್ತು ನಿರ್ಗತಿಕರ ಸಂರಕ್ಷಣೆಗಾಗಿ 5 ಲಕ್ಷ ರುಪಾಯಿ ಆಸ್ಪತ್ರೆ ವೆಚ್ಚಕ್ಕಾಗಿ ನೀಡಲಾಗುವುದು. ಇದಕ್ಕಾಗಿ 1200 ಕೋಟಿ ರುಪಾಯಿ ನೀಡಲಾಗುತ್ತಿದೆ.
ಭಾರತ ಆರೋಗ್ಯಕರವಾಗಿದ್ದರೆ ಮಾತ್ರ ಆರ್ಥಿಕ ಸ್ಥಿತಿಯೂ ಆರೋಗ್ಯಕರವಾಗಿರುತ್ತದೆ. ಆರೋಗ್ಯ ಕ್ಷೇತ್ರವನ್ನು ಜನರ ಮನೆಗೆ ತೆಗೆದುಕೊಂಡು ಹೋಗಬಯಸುತ್ತೇವೆ. ಬಡವರಿಗೆ ಉಚಿತ ಔಷಧಿ ದೊರಕಿಸಲು 12,000 ಕೋಟಿ ರುಪಾಯಿ ನಿಗದಿಪಡಿಸಲಾಗಿದೆ.
ದೆಹಲಿಯ ವಾಯು ಮಾಲಿನ್ಯ ನಿಜಕ್ಕೂ ಕಳವಳಕಾರಿ. ಇದಕ್ಕಾಗಿ ದೆಹಲಿ, ಹರ್ಯಾಣ, ಪಂಜಾಬ್, ಉತ್ತರ ಪ್ರದೇಶದಲ್ಲಿ ಮಾಲಿನ್ಯ ಕಡಿಮೆ ಮಾಡಲು ವಿಶೇಷ ಯೋಜನೆಗಳನ್ನು ಆರಂಭಿಸಲಾಗುವುದು.
ಸ್ವಚ್ಛ ಭಾರತ ಅಭಿಯಾನದಡಿಯಲ್ಲಿ ಮುಂದಿನ ವರ್ಷದಲ್ಲಿ ಬಡವರಿಗಾಗಿ 2 ಕೋಟಿ ಹೆಚ್ಚುವರಿ ಶೌಚಾಲಯ ನಿರ್ಮಿಸುವ ಗುರಿ ಹೊಂದಿದ್ದೇವೆ
ಆಪರೇಷನ್ ಫ್ಲಡ್ ಯೋಜನೆಯಂತೆ ಆಪರೇಷನ್ ಗ್ರೀನ್ ಯೋಜನೆ ಆರಂಭಿಸಲಾಗುತ್ತಿದ್ದು, 500 ಕೋಟಿ ರುಪಾಯಿಯನ್ನು ನಿಗದಿಪಡಿಸಲಾಗಿದೆ
ಕೃಷಿ ಪ್ರಧಾನ ದೇಶವಾಗಿರುವ ಭಾರತದಲ್ಲಿ ಕೃಷಿ ಉತ್ಪನ್ನ ಮತ್ತು ಗ್ರಾಮೀಣ ಆರ್ಥಿಕತೆಯ ಮೇಲೆ ಹೆಚ್ಚಿನ ಆದ್ಯತೆ ನೀಡಲಾಗುವುದು.
ರೈತರ ಅಭ್ಯುದಯಕ್ಕೆ ಸರಕಾರ ಕಟಿಬದ್ಧ. ರೈತರ ಆದಾಯ ಏರಿಸಬೇಕೆಂಬುದು ನಮ್ಮ ಆಶಯ. ಅವರ ಬೆಳೆಗಳಿಗೂ ಹೆಚ್ಚಿನ ಬೆಲೆ ಸಿಗಬೇಕು. ಕೃಷಿ ಉತ್ಪನ್ನವೂ ಏರಿಕೆಯಾಗಿದೆ. ಅವರ ಬೆಳೆಗಳಿಗೆ ಒಂದೂವರೆ ಪಟ್ಟು ಹೆಚ್ಚು ಬೆಲೆ ಸಿಗಬೇಕು.
ಬಡವರಿಗೆ ಉಚಿತ ಡಯಾಲಿಸಿಸ್, ಸ್ಟೆಂಟ್ ದರ ಇಳಿಸಲಾಗಿದೆ, ಎಲ್ಲ ಸೇವೆಗಳು ಆನ್ ಲೈನ್ ನಲ್ಲಿವೆ... ಇವೆಲ್ಲದರಿಂದ ಜನರಿಗೆ ಲಾಭ ಸಿಗುತ್ತಿದೆ.
ಅಂತಾರಾಷ್ಟ್ರೀಯ ಹಣಕಾಸು ಸಂಸ್ಥೆ ಕೂಡ ಭಾರತದ ಜಿಡಿಪಿ ಮುಂದಿನ ವರ್ಷ 7.4ಕ್ಕೆ ಏರಲಿದೆ ಎಂದು ಹೇಳಿದೆ
READ MORE
More From
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications