ಭಾರತದ ಆರ್ಥಿಕತೆ 3 ಟ್ರಿಲಿಯನ್ ಡಾಲರ್ ತಲುಪಲಿದೆ : ನಿರ್ಮಲಾ ವಿಶ್ವಾಸ ಸೀತಾರಾಮನ್
Recommended Video
ನವದೆಹಲಿ, ಜುಲೈ 05 : ಭಾರತದ ಆರ್ಥಿಕತೆ 1 ಟ್ರಿಲಿಯನ್ ಡಾಲರ್ ತಲುಪಲು 55 ವರ್ಷ ಬೇಕಾಯಿತು. ಆದರೆ, ನರೇಂದ್ರ ಮೋದಿ ಸರಕಾರ ಅಧಿಕಾರಕ್ಕೆ ಬಂದ ನಂತರ ಕೇವಲ 5 ವರ್ಷದಲ್ಲಿ ನಾವು 1 ಟ್ರಿಲಿಯನ್ ಡಾಲರ್ ಸೇರಿಸಿದ್ದೇವೆ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಹೇಳಿದ್ದಾರೆ.
ಮೋದಿ ಸರಕಾರ ಎರಡನೇ ಬಾರಿ ಅಧಿಕಾರದ ಚುಕ್ಕಾಣಿ ಹಿಡಿದ ನಂತರ, ಭಾರತದ ಪೂರ್ಣಪ್ರಮಾಣದ ಪ್ರಥಮ ಮಹಿಳಾ ವಿತ್ತ ಸಚಿವೆಯಾಗಿ ಆಯವ್ಯಯ ಮಂಡಿಸುತ್ತಿರುವ ನಿರ್ಮಲಾ ಸೀತಾರಾಮನ್ ಅವರು, ಭಾರತದ ಆರ್ಥಿಕತೆ ಯಾವ ರೀತಿ ವೇಗವಾಗಿ ಬೆಳೆಯುತ್ತಿದೆ ಎಂದು ಬಜೆಟ್ ಮಂಡನೆಯಲ್ಲಿ ವಿವರಿಸಿದರು.
ಆದರೆ, ಇದೆಲ್ಲಾ ಸಾಧ್ಯವಾಗಿದ್ದು, ಜನರು ನರೇಂದ್ರ ಮೋದಿ ಸರಕಾರದ ಮೇಲೆ ಇಟ್ಟಿರುವ ಭರವಸೆಯಿಂದಾಗಿ. ಜನರ ಹೃದಯ ನಿರೀಕ್ಷೆ, ನಂಬಿಕೆ ಮತ್ತು ಆಶಾಭಾವನೆಯಿಂದ ತುಂಬಿದ್ದರಿಂದ ಕೇವಲ 5 ವರ್ಷದಲ್ಲಿ ಭಾರತದ ಆರ್ಥಿಕತೆಯನ್ನು ದುಪ್ಪಟ್ಟು ಮಾಡಲು ಸಾಧ್ಯವಾಯಿತು ಎಂದು ಅವರು ಹೆಮ್ಮೆಯಿಂದ ಹೇಳಿದರು.

5 ವರ್ಷಗಳ ಹಿಂದೆ ಭಾರತದ ಆರ್ಥಿಕ ಸ್ಥಿತಿ ಜಾಗತಿಕವಾಗಿ 11ನೇ ಸ್ಥಾನದಲ್ಲಿತ್ತು. ದೇಶದ ಆರ್ಥಿಕ ಸ್ಥಿತಿ ಸುಭದ್ರವಾಗುತ್ತಿರುವುದರಿಂದ ಇದೀಗ ಅದು 6ನೇ ಸ್ಥಾನಕ್ಕೆ ತಲುಪಿದೆ. ಪ್ರಸ್ತುತ ವರ್ಷದಲ್ಲಿಯೇ ಭಾರತದ ಆರ್ಥಿಕ ಸ್ಥಿತಿ 3 ಟ್ರಿಲಿಯನ್ ಡಾಲರ್ ಗೆ ತಲುಪಲಿದೆ. ಅಲ್ಲದೆ, ಕೆಲವೇ ವರ್ಷಗಳಲ್ಲಿ 5 ಟ್ರಿಲಿಯನ್ ಡಾಲರ್ ತಲುಪುವ ಗುರಿ ಹೊಂದಿದ್ದೇವೆ ಎಂದು ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನಲ್ಲಿ ವಿವರಿಸಿದರು.
2014ರಲ್ಲಿ ನರೇಂದ್ರ ಮೋದಿ ಸರಕಾರ ಸ್ಥಾಪಿಸಿದಾಗ ಭಾರತದ ಆರ್ಥಿಕತೆ 1.85 ಟ್ರಿಲಿಯನ್ ಡಾಲರ್ ನಷ್ಟಿತ್ತು. ಮುಂದಿನ 5 ವರ್ಷಗಳಲ್ಲಿ ಆರ್ಥಿಕತೆ 2.7 ಟ್ರಿಲಿಯನ್ ಡಾಲರ್ ತಲುಪಿದೆ. ಮತ್ತು 2024ರೊಳಗೆ ಆರ್ಥಿಕ ಸ್ಥಿತಿಯನ್ನು 5 ಟ್ರಿಲಿಯನ್ ಡಾಲರ್ ತಲುಪುವ ಗುರಿ ಹೊಂದಿದ್ದೇವೆ ಎಂದು ಅವರು ಹೇಳಿದರು.
ಎರಡನೇ ಬಾರಿ ಆಡಳಿತ ಹಿಡಿದಿರುವ ನರೇಂದ್ರ ಮೋದಿ ಅವರು, ಸಾಮಾಜಿಕ-ಆರ್ಥಿಕ ಸಮಸ್ಯೆಗಳನ್ನು ಸಮರ್ಥವಾಗಿ ಎದುರಿಸಲು ಎಲ್ಲ ರಾಜ್ಯಗಳಿಗೆ ಕರೆ ನೀಡಿದ್ದಾರೆ. 2024ರೊಳಗೆ ಭಾರತದ ಆರ್ಥಿಕ ಸ್ಥಿತಿ 5 ಟ್ರಿಲಿಯನ್ ಡಾಲರ್ ಗೆ ತಲುಪುವಂತಾಗಲು ಎಲ್ಲ ರಾಜ್ಯಗಳ ಸಹಕಾರ ಕೋರಿದ್ದಾರೆ ಎಂದು ನಿರ್ಮಲಾ ಸೀತಾರಾಮನ್ ಅವರು ಬಜೆಟ್ ಮಂಡನೆಯ ಸಂದರ್ಭದಲ್ಲಿ ತಿಳಿಸಿದರು.
-
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ 3 ಜಾಗ ನಿಗದಿ: ಡಿಸಿಎಂ ಡಿ.ಕೆ ಶಿವಕುಮಾರ್ ಅಪ್ಡೇಟ್ಸ್ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್












Click it and Unblock the Notifications