ಕೇಂದ್ರ ಬಜೆಟ್ 2019 : ಮಾರುಕಟ್ಟೆಗೆ ಬರಲಿದೆ 20 ರೂ. ಹೊಸ ನಾಣ್ಯ
ಬೆಂಗಳೂರು, ಜುಲೈ 05 : ದೃಷ್ಟಿ ಹೀನರೂ ಸಹ ಸುಲಭವಾಗಿ ಗುರುತಿಸಲು ಸಹಾಯಕವಾಗುವಂತಹ ಹೊಸ ನಾಣ್ಯಗಳನ್ನು ಪರಿಚಯಿಸಲಾಗುತ್ತದೆ ಎಂದು ಕೇಂದ್ರ ಬಜೆಟ್ನಲ್ಲಿ ಘೋಷಣೆ ಮಾಡಲಾಗಿದೆ. 20 ರೂ.ಗಳ ಹೊಸ ನಾಣ್ಯ ಬಿಡುಗಡೆ ಮಾಡುವುದಾಗಿಯೂ ಘೋಷಿಸಲಾಗಿದೆ.
ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಸರ್ಕಾರದ 2ನೇ ಬಜೆಟ್ ಮಂಡನೆಯಾಗಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ತಮ್ಮ ಚೊಚ್ಚಲ ಬಜೆಟ್ನಲ್ಲಿ ಹಲವು ಘೋಷಣೆಗಳನ್ನು ಮಾಡಿದ್ದಾರೆ. ಹಲವು ವಸ್ತುಗಳ ಬೆಲೆಗಳು ಏರಿಕೆ, ಇಳಿಕೆಯಾಗಿವೆ.
ದೃಷ್ಟಿ ಹೀನರಿಗೆ ಸಹ ಗುರುತಿಸಲು ಸಹಾಯಕವಾಗುವಂತೆ 1, 2, 5, 10 ಮತ್ತು 20 ರೂ.ಗಳ ಹೊಸ ನಾಣ್ಯಗಳನ್ನು ಶೀಘ್ರವೇ ಬಿಡುಗಡೆ ಮಾಡಲಾಗುತ್ತದೆ ಎಂದು ಹೇಳಿದ್ದಾರೆ. 2019ರ ಮಾರ್ಚ್ನಲ್ಲಿ ಮೋದಿ ನಾಣ್ಯಗಳನ್ನು ಬಿಡುಗಡೆ ಮಾಡಿದ್ದು, ಅದನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿಲ್ಲ.

20 ರೂ. ಹೊಸ ನಾಣ್ಯ : 20 ರೂ.ಗಳ ಹೊಸ ನಾಣ್ಯವನ್ನು ಬಿಡುಗಡೆ ಮಾಡಲಾಗುತ್ತದೆ ಎಂದು ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದರು. ಹೊಸ ನಾಣ್ಯ 27 ಮಿ.ಮೀ.ಇರಲಿದ್ದು, 854 ಗ್ರಾಂ ತೂಕ ಹೊಂದಿರುತ್ತದೆ. ಈಗಿರುವ 10 ರೂ. ನಾಣ್ಯಕ್ಕಿಂತ ಭಿನ್ನವಾಗಿರುತ್ತದೆ.
ನಾಣ್ಯದ ಹೊರಭಾಗದ ಉಂಗುರ ಶೇ 65ರಷ್ಟು ತಾಮ್ರ, ಶೇ 15ರಷ್ಟು ಸತು, ಶೇ 20ರಷ್ಟು ನಿಕ್ಕಲ್ ಬಳಸಿ ತಯಾರು ಮಾಡಲಾಗುತ್ತದೆ. ಹಿಂದಿ ಮತ್ತು ಇಂಗ್ಲಿಶ್ ಭಾಷೆಯಲ್ಲಿ ನಾಣ್ಯದ ಮೇಲೆ 20 ರೂ. ಎಂದು ಬರೆಯಲಾಗುತ್ತದೆ.
ಕೃಷಿಯ ಪ್ರಾಮುಖ್ಯತೆಯನ್ನು ಸಾರಲು ನಾಣ್ಯದ ಮೇಲೆ ಧಾನ್ಯಗಳ ಚಿತ್ರ ಇರಲಿದೆ. ನಾಣ್ಯದ ಮುಂಭಾಗದಲ್ಲಿ ನಾಲ್ಕು ಸಿಂಹಗಳ ಲಾಂಚನ, ಸತ್ಯಮೇವ ಜಯತೆ ವಾಕ್ಯವನ್ನು ಮುದ್ರಿಸಲಾಗುತ್ತದೆ. 2009ರಲ್ಲಿ 10 ರೂ. ನಾಣ್ಯ ಪರಿಚಯಿಸಲಾಗಿತ್ತು. 10 ವರ್ಷಗಳ ಬಳಿಕ 20 ರೂ. ನಾಣ್ಯವನ್ನು ಬಿಡುಗಡೆ ಮಾಡಲಾಗುತ್ತದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications