ಕೇಂದ್ರ ಬಜೆಟ್ 2019 : ಮಾರುಕಟ್ಟೆಗೆ ಬರಲಿದೆ 20 ರೂ. ಹೊಸ ನಾಣ್ಯ
ಬೆಂಗಳೂರು, ಜುಲೈ 05 : ದೃಷ್ಟಿ ಹೀನರೂ ಸಹ ಸುಲಭವಾಗಿ ಗುರುತಿಸಲು ಸಹಾಯಕವಾಗುವಂತಹ ಹೊಸ ನಾಣ್ಯಗಳನ್ನು ಪರಿಚಯಿಸಲಾಗುತ್ತದೆ ಎಂದು ಕೇಂದ್ರ ಬಜೆಟ್ನಲ್ಲಿ ಘೋಷಣೆ ಮಾಡಲಾಗಿದೆ. 20 ರೂ.ಗಳ ಹೊಸ ನಾಣ್ಯ ಬಿಡುಗಡೆ ಮಾಡುವುದಾಗಿಯೂ ಘೋಷಿಸಲಾಗಿದೆ.
ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಸರ್ಕಾರದ 2ನೇ ಬಜೆಟ್ ಮಂಡನೆಯಾಗಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ತಮ್ಮ ಚೊಚ್ಚಲ ಬಜೆಟ್ನಲ್ಲಿ ಹಲವು ಘೋಷಣೆಗಳನ್ನು ಮಾಡಿದ್ದಾರೆ. ಹಲವು ವಸ್ತುಗಳ ಬೆಲೆಗಳು ಏರಿಕೆ, ಇಳಿಕೆಯಾಗಿವೆ.
ದೃಷ್ಟಿ ಹೀನರಿಗೆ ಸಹ ಗುರುತಿಸಲು ಸಹಾಯಕವಾಗುವಂತೆ 1, 2, 5, 10 ಮತ್ತು 20 ರೂ.ಗಳ ಹೊಸ ನಾಣ್ಯಗಳನ್ನು ಶೀಘ್ರವೇ ಬಿಡುಗಡೆ ಮಾಡಲಾಗುತ್ತದೆ ಎಂದು ಹೇಳಿದ್ದಾರೆ. 2019ರ ಮಾರ್ಚ್ನಲ್ಲಿ ಮೋದಿ ನಾಣ್ಯಗಳನ್ನು ಬಿಡುಗಡೆ ಮಾಡಿದ್ದು, ಅದನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿಲ್ಲ.

20 ರೂ. ಹೊಸ ನಾಣ್ಯ : 20 ರೂ.ಗಳ ಹೊಸ ನಾಣ್ಯವನ್ನು ಬಿಡುಗಡೆ ಮಾಡಲಾಗುತ್ತದೆ ಎಂದು ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದರು. ಹೊಸ ನಾಣ್ಯ 27 ಮಿ.ಮೀ.ಇರಲಿದ್ದು, 854 ಗ್ರಾಂ ತೂಕ ಹೊಂದಿರುತ್ತದೆ. ಈಗಿರುವ 10 ರೂ. ನಾಣ್ಯಕ್ಕಿಂತ ಭಿನ್ನವಾಗಿರುತ್ತದೆ.
ನಾಣ್ಯದ ಹೊರಭಾಗದ ಉಂಗುರ ಶೇ 65ರಷ್ಟು ತಾಮ್ರ, ಶೇ 15ರಷ್ಟು ಸತು, ಶೇ 20ರಷ್ಟು ನಿಕ್ಕಲ್ ಬಳಸಿ ತಯಾರು ಮಾಡಲಾಗುತ್ತದೆ. ಹಿಂದಿ ಮತ್ತು ಇಂಗ್ಲಿಶ್ ಭಾಷೆಯಲ್ಲಿ ನಾಣ್ಯದ ಮೇಲೆ 20 ರೂ. ಎಂದು ಬರೆಯಲಾಗುತ್ತದೆ.
ಕೃಷಿಯ ಪ್ರಾಮುಖ್ಯತೆಯನ್ನು ಸಾರಲು ನಾಣ್ಯದ ಮೇಲೆ ಧಾನ್ಯಗಳ ಚಿತ್ರ ಇರಲಿದೆ. ನಾಣ್ಯದ ಮುಂಭಾಗದಲ್ಲಿ ನಾಲ್ಕು ಸಿಂಹಗಳ ಲಾಂಚನ, ಸತ್ಯಮೇವ ಜಯತೆ ವಾಕ್ಯವನ್ನು ಮುದ್ರಿಸಲಾಗುತ್ತದೆ. 2009ರಲ್ಲಿ 10 ರೂ. ನಾಣ್ಯ ಪರಿಚಯಿಸಲಾಗಿತ್ತು. 10 ವರ್ಷಗಳ ಬಳಿಕ 20 ರೂ. ನಾಣ್ಯವನ್ನು ಬಿಡುಗಡೆ ಮಾಡಲಾಗುತ್ತದೆ.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications