ಬಜೆಟ್ ನಲ್ಲಿ ಜೇಬಿಗೆ ಭಾರ ಯಾವುದು, ಹಗುರ ಯಾವುದು?
ಅಭಿವೃದ್ಧಿಯನ್ನು ಗಮನದಲ್ಲಿ ಇಟ್ಟುಕೊಂಡು ಮಂಡಿಸಲಾದ ಶುಕ್ರವಾರದ ಕೇಂದ್ರ ಬಜೆಟ್ ನಲ್ಲಿ ಸಚಿವೆ ನಿರ್ಮಲಾ ಸೀತಾರಾಮನ್ ಏನು ನೀಡಿದ್ದಾರೆ. ಯಾರ ಪಾಲಿಗೆ ಈ ಬಜೆಟ್ ಹೇಗೆ ಎಂಬುದನ್ನು ಮುಖ್ಯಾಂಶಗಳ ರೀತಿಯಲ್ಲಿ ನಿಮ್ಮ ಮುಂದೆ ಇಡಲಾಗುತ್ತಿದೆ.
* ಐದು ಲಕ್ಷ ರುಪಾಯಿ ತನಕ ಯಾವುದೇ ಆದಾಯ ತೆರಿಗೆ ಇಲ್ಲ. ಆದಾಯ ತೆರಿಗೆ ಸ್ಲ್ಯಾಬ್ ನಲ್ಲಿ ಯಾವುದೇ ಬದಲಾವಣೆ ಪ್ರಸ್ತಾವ ಆಗಿಲ್ಲ.
* ಮೆಚ್ಯೂರಿಟಿ ಸಂದರ್ಭದಲ್ಲಿ ಎನ್ ಪಿಎಸ್ ನಿಂದ ಒಟ್ಟಾರೆಯಾಗಿ ಅರವತ್ತು ಪರ್ಸೆಂಟ್ ವಿಥ್ ಡ್ರಾಗೆ ಯಾವುದೇ ತೆರಿಗೆ ಇಲ್ಲ.

* ನಲವತ್ತೈದು ಲಕ್ಷದೊಳಗಿನ ಮನೆ ಸಾಲವನ್ನು ಮಾರ್ಚ್ 31, 2020ರೊಳಗೆ ಪಡೆದಿದ್ದರೆ ಅದಕ್ಕೆ ಹೆಚ್ಚುವರಿ ಒಂದೂವರೆ ಲಕ್ಷ ತೆರಿಗೆ ವಿನಾಯಿತಿ ಹೆಚ್ಚುವರಿಯಾಗಿ ದೊರೆಯುತ್ತದೆ.
* ಆದಾಯ ತೆರಿಗೆ ರಿಟರ್ನ್ ಗೆ ಪ್ಯಾನ್ ಕಾರ್ಡ್ ಕಡ್ಡಾಯವಲ್ಲ. ಆಧಾರ್ ಇದ್ದರೂ ಸಾಕು.
* ತೆರಿಗೆದಾರರಿಗೆ ಅನುಕೂಲ ಆಗುವಂತೆ ಎಲೆಕ್ಟ್ರಾನಿಕ್ ವಿಧಾನದಲ್ಲಿ ಆದಾಯ ತೆರಿಗೆ ಅಸೆಸ್ ಮೆಂಟ್ ಅನ್ನು ಹಂತಹಂತವಾಗಿ ಆರಂಭಿಸಲಾಗುವುದು.
* ಎರಡರಿಂದ ಐದು ಕೋಟಿ ಮತ್ತು ಏಳು ಕೋಟಿ ಆದಾಯ ಇರುವವರಿಗೆ ಕ್ರಮವಾಗಿ ಮೂರು ಹಾಗೂ ಏಳು ಪರ್ಸೆಂಟ್ ಗೆ ಸರ್ ಚಾರ್ಜ್ ಹೆಚ್ಚಳ.
* ರಸ್ತೆ ಹಾಗೂ ಮೂಲ ಸೌಕರ್ಯಕ್ಕಾಗಿ ಪೆಟ್ರೋಲ್ ಹಾಗೂ ಡೀಸೆಲ್ ಗೆ ಪ್ರತಿ ಲೀಟರ್ ಗೆ ಎರಡು ರುಪಾಯಿ ವಿಶೇಷ ಹೆಚ್ಚುವರಿ ಅಬಕಾರಿ ಸುಂಕ.
* ಚಿನ್ನ ಹಾಗೂ ದುಬಾರಿ ಲೋಹಗಳ ಆಮದು ಸುಂಕವು 10ರಿಂದ 12.5 ಪರ್ಸೆಂಟ್ ಗೆ ಏರಿಕೆ.
* ಬ್ಯಾಂಕ್ ಖಾತೆಯಿಂದ ವಾರ್ಷಿಕ ಒಂದು ಕೋಟಿ ರುಪಾಯಿ ವಿಥ್ ಡ್ರಾ ಮಾಡಿದರೆ ಎರಡು ಪರ್ಸೆಂಟ್ ಟಿಡಿಎಸ್.
-
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
ಕರ್ನಾಟಕ PGCET 2026 ಅಧಿಸೂಚನೆ ಪ್ರಕಟ: ಎಂಬಿಎ ಸೇರಿ ವಿವಿಧ ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಮಾರ್ಚ್ 23 ರಿಂದ ಅರ್ಜಿ ಆಹ್ವಾನ -
ವಿಶ್ವಮಾತೆ ಎನ್ನುತ್ತಾ ಶ್ರೀಚಾಮುಂಡೇಶ್ವರಿಯ ಕನ್ನಡ ಹಾಡು ಹಂಚಿಕೊಂಡ ಪ್ರಧಾನಿ ಮೋದಿ -
ಮಾರ್ಚ್ 21ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications