ಬಜೆಟ್ 2020: ಗೃಹ ಸಾಲದ ಬಡ್ಡಿ ಮೇಲೆ ತೆರಿಗೆ ವಿನಾಯಿತಿ ಮತ್ತೊಂದು ವರ್ಷ ವಿಸ್ತರಣೆ
ನವದೆಹಲಿ, ಫೆಬ್ರವರಿ 1: ಗೃಹ ಸಾಲದ ಬಡ್ಡಿಯ ಮೇಲೆ 3.5 ಲಕ್ಷ ರೂ.ವರೆಗೂ ನೀಡಲಾಗುತ್ತಿರುವ ತೆರಿಗೆ ವಿನಾಯಿತಿಯನ್ನು 2021ರ ಮಾರ್ಚ್ 31ರವರೆಗೂ ವಿಸ್ತರಿಸಿರುವುದಾಗಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದರು.
ಕಳೆದ ಬಜೆಟ್ನಲ್ಲಿ ಗೃಹ ಸಾಲದ ಬಡ್ಡಿಯ ಮೇಲಿನ ತೆರಿಗೆ ವಿನಾಯಿತಿಯ ಮಿತಿಯನ್ನು 2 ಲಕ್ಷ ರೂ.ದಿಂದ 3.5 ಲಕ್ಷಕ್ಕೆ ಹೆಚ್ಚಿಸಲಾಗಿತ್ತು. ಈ ಬಾರಿ ಗರಿಷ್ಠ ಮಿತಿಯನ್ನು ಹೆಚ್ಚಿಸದೆ ಇದ್ದರೂ, ಪ್ರಸ್ತುತ ಇರುವ ಸೌಲಭ್ಯವನ್ನು ವಿಸ್ತರಿಸಲಾಗಿದೆ.
ಆದಾಯ ತೆರಿಗೆ ಕಾನೂನಿನ ಪ್ರಕಾರ ಜನರು ಗೃಹ ಸಾಲದ ಮೇಲಿನ ಬಡ್ಡಿ ಪಾವತಿಯನ್ನು ತಮ್ಮ ಒಟ್ಟು ಆದಾಯದಲ್ಲಿನ ಕಡಿತ ಎಂದು ಘೋಷಿಸಿಕೊಳ್ಳಲು ಅವಕಾಶವಿದೆ. ಪ್ರಸ್ತುತ ನಿಮಯದಡಿ 3.5 ಲಕ್ಷ ರೂವರೆಗೂ ಬಡ್ಡಿ ಮೇಲೆ ವಿನಾಯಿತಿ ಪಡೆಯಬಹುದು. ಇಷ್ಟು ಹಣ ಕಡಿತವಾದ ಬಳಿಕವಷ್ಟೇ ಆದಾಯ ತೆರಿಗೆ ಅನ್ವಯವಾಗುತ್ತದೆ. ಮೊದಲು ಇದನ್ನು 2019-20ರ ಅವಧಿಗೆ ಮಾತ್ರ ನೀಡಲಾಗಿತ್ತು. ಈಗ ಮತ್ತೊಂದು ವರ್ಷ ವಿಸ್ತರಿಸಲಾಗಿದೆ.

2021ರ ಮಾರ್ಚ್ 31ರ ಒಳಗೆ 45 ಲಕ್ಷ ರೂ.ವರೆಗಿನ ಮೌಲ್ಯದ ಮನೆಗಾಗಿ ಗೃಹ ಸಾಲ ಪಡೆದುಕೊಂಡವರಿಗೆ ಇದರಿಂದ ಲಾಭವಾಗಲಿದೆ. ತಾವು ವಾಸವಿರುವ ಮನೆಗಳ ಗೃಹ ಸಾಲಕ್ಕೆ ಪಾವತಿಸಿದ ಬಡ್ಡಿಗೆ ಸಹ 2 ಲಕ್ಷ ರೂ.ವರೆಗೆ ಆದಾಯ ತೆರಿಗೆ ವಿನಾಯಿತಿ ಇದ್ದು, ಅದರ ಮೇಲೆ ಸೆಕ್ಷನ್ 80EEA ಅಡಿ ಹೆಚ್ಚುವರಿವಾಗಿ 1.5 ಲಕ್ಷ ರೂ. ತೆರಿಗೆ ವಿನಾಯಿತಿ ನೀಡಲಾಗುತ್ತಿದೆ.
ಸೆಕ್ಷನ್ 80ಸಿ ಅಡಿ ಅಸಲು ಮೊತ್ತದ 1.5 ಲಕ್ಷ ರೂ ಮಿತಿ ಮತ್ತು ಆದಾಯ ತೆರಿಗೆ ಕಾಯ್ದೆಯ ಸೆಕ್ಷನ್ 24ರ ಅಡಿಯಲ್ಲಿನ 2 ಲಕ್ಷ ರೂ. ಬಡ್ಡಿಯ ಮೇಲಿನ ತೆರಿಗೆ ವಿನಾಯಿತಿಯನ್ನು ಹೆಚ್ಚಿಸಲಿದೆ ಅಥವಾ ಮಿತಿಯನ್ನು ಕೈಬಿಡಲಿದೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ಅದರಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications