ಬಜೆಟ್ 2021: ಹಿರಿಯ ನಾಗರಿಕರಿಗೆ ಆದಾಯ ತೆರಿಗೆಯಲ್ಲಿ ನೆಮ್ಮದಿ
ನವದೆಹಲಿ, ಫೆಬ್ರವರಿ 1: ಆದಾಯ ತೆರಿಗೆ ಪಾವತಿಸುವ 75 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಕೇಂದ್ರ ಸರ್ಕಾರ ನೆಮ್ಮದಿಯ ಸುದ್ದಿ ನೀಡಿದೆ. ಇನ್ನು ಮುಂದೆ 75 ವರ್ಷ ದಾಟಿದ ಹಿರಿಯ ನಾಗರಿಕರು ಹಾಗೂ ಕೇವಲ ಪಿಂಚಣಿ ಮತ್ತು ಬಡ್ಡಿ ಮೂಲಕ ಆದಾಯ ಪಡೆದುಕೊಳ್ಳುವ ವ್ಯಕ್ತಿಗಳು ಇನ್ನು ಮುಂದೆ ಆದಾಯ ತೆರಿಗೆ ರಿಟರ್ನ್ಸ್ ಪಾವತಿ ಮಾಡುವ ಅಗತ್ಯವಿಲ್ಲ ಎಂದು ಸೋಮವಾರ ಬಜೆಟ್ ಮಂಡನೆ ವೇಳೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ.
ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸುವುದರಿಂದ ಹಿರಿಯ ನಾಗರಿಕರಿಗೆ ವಿನಾಯಿತಿ ನೀಡಲಾಗಿದೆ. ಆದರೆ ಅವರ ಬದಲು ಇನ್ನು ಮುಂದೆ ಸಂಬಂಧಿತ ಬ್ಯಾಂಕ್ಗಳು ಐಟಿಆರ್ ಸಲ್ಲಿಕೆ ಮಾಡಲಿವೆ.
ಹಾಗೆನೇ ಅನಿವಾಸಿ ಭಾರತೀಯರಿಗೆ ಬಜೆಟ್ನಲ್ಲಿ ಮತ್ತಷ್ಟು ಉತ್ತೇಜನ ನೀಡಲಾಗಿದೆ. ಅನಿವಾಸಿ ಭಾರತೀಯರ ವಿದೇಶಿ ನಿವೃತ್ತಿ ಫಂಡ್ನಲ್ಲಿನ ದುಪ್ಪಟ್ಟು ತೆರಿಗೆಯನ್ನು ತೆಗೆದುಹಾಕಲು ಸರ್ಕಾರ ಅಧಿಸೂಚನೆ ಹೊರಡಿಸಲಿದೆ ಎಂದು ನಿರ್ಮಲಾ ತಿಳಿಸಿದ್ದಾರೆ.

ಟ್ಯಾಕ್ಸ್ ರಿಟರ್ನ್ಸ್ ಅನ್ನು ಮರು ತೆರೆಯಲು ಇದ್ದ ಸಮಯದ ಮಿತಿಯನ್ನು ಮೂರು ವರ್ಷಗಳಿಗೆ ಇಳಿಸಲಾಗಿದೆ. ಪ್ರಸ್ತುತ ಅದು ಆರು ವರ್ಷಗಳವರೆಗೆ ಇತ್ತು. ಗಂಭೀರ ವಂಚನೆಗಳಲ್ಲಿಯೂ 50 ಲಕ್ಷಕ್ಕೂ ಅಧಿಕ ಮೊತ್ತದ ತೆರಿಗೆಯ ಸಾಧ್ಯತೆ ಇದ್ದರೆ ಮಾತ್ರ ಈ ಮಿತಿಯನ್ನು ಹೆಚ್ಚುವರಿಯಾಗಿ ನೀಡಬಹುದು.
ಆದಾರ ತೆರಿಗೆ ರಿಟರ್ನ್ಸ್ ಸಲ್ಲಿಸುವವರ ಸಂಖ್ಯೆ 2014ರಲ್ಲಿ 3.31 ಕೋಟಿ ಇದ್ದರೆ, ಅದು 2020ರ ವೇಳೆಗೆ 6.48 ಕೋಟಿಗೆ ಏರಿಕೆಯಾಗಿದೆ ಎಂದು ನಿರ್ಮಲಾ ಸೀತಾರಾಮನ್ ತಿಳಿಸಿದರು. ನಮ್ಮ ತೆರಿಗೆ ವ್ಯವಸ್ಥೆಯು ಪಾರದರ್ಶಕವಾಗಬೇಕು. ನೇರ ತೆರಿಗೆ ವ್ಯವಸ್ಥೆಯಲ್ಲಿ ಸರ್ಕಾರವು ಸರಣಿ ಸುಧಾರಣೆಗಳನ್ನು ಆರಂಭಿಸಿದೆ. ತೆರಿಗೆ ದಕ್ಷತೆಯನ್ನು ಸುಧಾರಿಸಲು ನೇರ ತೆರಿಗೆ ಆಡಳಿತದಲ್ಲಿ ಮುಖರಹಿತ ಮೌಲ್ಯನಿರ್ಣಯ ಪದ್ಧತಿಯನ್ನು ಜಾರಿಗೊಳಿಸಲಾಗಿದೆ. ಸಣ್ಣ ತೆರಿಗೆದಾರರಿಗಾಗಿ ಖುದ್ದು ಹಾಜರಾಗುವ ಅಗತ್ಯವಿಲ್ಲದ ವಾಜ್ಯ ಪರಿಹಾರ ಪದ್ಧತಿ ಜಾರಿಗೆ ತರಲಾಗುತ್ತದೆ.
ಮಧ್ಯಮ ಮತ್ತು ಸಣ್ಣ ಉದ್ಯಮಗಳಲ್ಲಿನ ತೆರಿಗೆ ಲೆಕ್ಕಪರಿಶೋಧನೆ ಮಿತಿಯನ್ನು 5 ಕೋಟಿ ರೂಪಾಯಿಯಿಂದ 10 ಕೋಟಿ ರೂಗೆ ಹೆಚ್ಚಿಸಲಾಗಿದೆ.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video












Click it and Unblock the Notifications