Union Budget 2026: ಕೇಂದ್ರ ಬಜೆಟ್ ಮಂಡನೆಗೆ ಕ್ಷಣಗಣನೆ..ಆರಂಭಿಕ ಪ್ರಕ್ರಿಯೆಗಳ ಸಂಕ್ಷಿಪ್ತ ಮಾಹಿತಿ
ನವದೆಹಲಿ: ಇಂದು ಭಾನುವಾರ ಇತಿಹಾಸದಲ್ಲೇ ಎರಡನೇ ಬಾರಿಗೆ ಭಾನುವಾರ ಕೇಂದ್ರ ಬಜೆಟ್ ಮಂಡನೆ ಆಗುತ್ತಿದೆ. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಒಂಬತ್ತನೆ ಬಜೆಟ್ ಮಂಡನೆ ಇದಾಗಿದ್ದು, ಇದರ ಆರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ಬಜೆಟ್ ಮಂಡನೆಗೂ ಮುನ್ನ ಏನೆಲ್ಲ ನಡೆಯುತ್ತದೆ. ಆ ಪ್ರಕ್ರಿಯೆಗಳ ಸಂಕ್ಷಿಪ್ತ ಮಾಹಿತಿ ಇಲ್ಲಿದೆ
ಬೆಳಗ್ಗೆ 11 ಗಂಟೆಯಲ್ಲಿ ಲೋಕಸಭೆಯಲ್ಲಿ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ಭಾಷಣ ಆರಂಭಿಸಲಿದ್ದಾರೆ. ಅದಕ್ಕು ಮೊದಲು ಕರ್ತವ್ಯ ಭವನದಿಂದ ಸುಮಾರು 09 ಗಂಟೆಗೆ ತೆರಳಿದ ವಿತ್ತ ಸಚಿವೆ ಬಜೆಟ್ ಮಂಡನೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಅನುಮತಿ ಪಡೆದರು. ಈ ವೇಳೆ ರಾಷ್ಟ್ರಪತಿಗಳು ಸಚಿವೆಗೆ ಸಿಹಿ ತಿನ್ನಿಸಿ ಶುಭ ಹಾರೈಸಿ ಕಳುಹಿಸಿದ್ದು ವಿಶೇಷವಾಗಿತ್ತು. ಅಲ್ಲಿಂದ ನಾರ್ತ್ ಬ್ಲಾಕ್ ನಲ್ಲಿರುವ ಹಣಕಾಸು ಸಚಿವಾಲಯಕ್ಕೆ ಅವರು ಭೇಟಿ ನೀಡಿದರು.

ಸಂಸತ್ ಭವನದತ್ತ ಬರುವ ನಿರ್ಮಲಾ ಸೀತಾರಾಮನ್ ಅವರು, ಸಚಿವ ಸಂಪುಟ ಸಭೆಯಲ್ಲಿ ಪಾಲ್ಗೊಂಡು ಬಜೆಟ್ ಮಂಡನೆಗೆ ಸಂಪುಟ ಸರ್ವ ಸದಸ್ಯರಿಂದ ಅಧಿಕೃತ ಅನುಮೋದನೆ ಪಡೆಯಲಿದ್ದಾರೆ. ನಂತರ ಅಧಿವೇಶನ ಹಾಲ್ಗೆ ಬಂದು ಸರಿಯಾಗಿ 11 ಗಂಟೆಗೆ ಬಜೆಟ್ ಭಾಷಣ ಶುರು ಮಾಡಲಿದ್ದಾರೆ. ಅಲ್ಲಿಂದ ಬಜೆಟ್ ಮಂಡನೆ ಆರಂಭವಾಗಲಿದೆ.
ವಿಶೇಷ ಸೀರೆಯಲ್ಲಿದ್ದ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕರ್ತವ್ಯ ಭವನದಿಂದ ತೆರಳುವ ಮೊದಲು ಕೆಂಪು ಬಣ್ಣದ ಕವರ್ನಲ್ಲಿದ್ದ ಟ್ಯಾಬ್ ಅನ್ನು ಪ್ರದರ್ಶಿಸಿದರು. ಈ ಬಜೆಟ್ ಮೇಲೆ ಬೆಟ್ಟದಷ್ಟು ನಿರೀಕ್ಷೆಗಳು ಇವೆ. ಅನ್ನದಾತರಿಗೆ ಗುಡ್ ನ್ಯೂಸ್ ಸಿಗುವ ಸಾಧ್ಯತೆ ಇದೆ. ಒಂಬತ್ತನೇ ಬಜೆಟ್ ಮಂಡಿಸುತ್ತಿರುವ ನಿರ್ಮಲಾ ಸೀತಾರಾಮನ್ ಅವರಿಗೆ ರಾಜಕೀಯ ಸಹೋದ್ಯೋಗಿಗಳು, ಸಂಸದರು ಶುಭಕೋರಿದ್ದು ಕಂಡು ಬಂತು.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications