ಗ್ರಾಮೀಣ ಮಹಿಳೆಯರಿಗೆ ನಿರ್ಮಲಾ ಸೀತಾರಾಮನ್ ಭರ್ಜರಿ ಗುಡ್ ನ್ಯೂಸ್
Good News For Rural women: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೇಂದ್ರ ಬಜೆಟ್ನಲ್ಲಿ ಗ್ರಾಮೀಣ ಮಹಿಳೆಯರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಗ್ರಾಮೀಣ ಮಹಿಳೆಯರು ನಡೆಸುವ ಉದ್ಯಮಗಳಿಗಾಗಿ ಸ್ವ-ಸಹಾಯ ಉದ್ಯಮಗಳು ಅಂದರೆ ಶಿ-ಮಾರ್ಟ್ಗಳನ್ನು ಪ್ರಾರಂಭ ಮಾಡಲಾಗುವುದು ಎಂದು ಘೋಷಣೆ ಮಾಡಿದ್ದಾರೆ.
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೇಂದ್ರ ಬಜೆಟ್ನಲ್ಲಿ ಗ್ರಾಮೀಣ ಮಹಿಳೆಯರಿಗೆ ಮಹತ್ವದ ಘೋಷಣೆ ಮಾಡಿದ್ದಾರೆ. ಗ್ರಾಮೀಣ ಭಾಗಗಳಲ್ಲಿ ಮಹಿಳೆಯರು ನಡೆಸುವ ಉದ್ಯಮಗಳನ್ನು ಬೆಂಬಲಿಸಲು "ಸ್ವ-ಸಹಾಯ ಉದ್ಯಮಗಳನ್ನು ಆರಂಭಿಸಲು ಈ ಯೋಜನೆ ಘೋಷಿಸಲಾಗಿದೆ.

ಈ ಮೂಲಕ ಮಹಿಳೆಯರಿಗೆ ಸ್ವಂತ ಉದ್ಯಮ ಆರಂಭಿಸಲು ಪ್ರೋತ್ಸಾಹ ದೊರೆಯುತ್ತಿದ್ದು, ಅವರ ಆದಾಯವನ್ನು ಹೆಚ್ಚಿಸಲು ಮತ್ತು ಸಶಕ್ತಗೊಳಿಸಲು ಕೇಂದ್ರ ಸರ್ಕಾರ ಮುಂದಾಗುತ್ತಿದೆ. ಗ್ರಾಮೀಣ ಮಹಿಳೆಯರು ತಮ್ಮ ಉತ್ಪನ್ನಗಳನ್ನು ಸ್ಥಳೀಯ ಮಾರ್ಕೆಟಿಂಗ್ ಮೂಲಕ ಮಾರಾಟ ಮಾಡಲು ಈ ಶಿ-ಮಾರ್ಟ್ಗಳು ಸಹಾಯ ಮಾಡುವಂತೆ ನಿರೀಕ್ಷಿಸಲಾಗಿದೆ.
ಈ ಯೋಜನೆಯ ಉದ್ದೇಶ ಏನು?: ಮಹಿಳೆಯರು ಉದ್ಯಮದಲ್ಲಿ ಪ್ರಗತಿ ಸಾಧಿಸುವ ಉದ್ದೇಶದಿಂದ ಶಿ - ಮಾರ್ಟ್ ಯೋಜನೆ ಪರಿಚಯಿಸಲಾಗಿದೆ. ಇನ್ನು ಈ ಹೊಸ ಯೋಜನೆಯು ಮಹಿಳಾ ನೇತೃತ್ವದ ಸ್ವ-ಸಹಾಯ ಗುಂಪುಗಳು ಸ್ಥಳೀಯ ಚಿಲ್ಲರೆ ಮಾರುಕಟ್ಟೆ ನಡೆಸಲು ಹಾಗೂ ಮಹಿಳೆಯರು ತಯಾರಿಸಿದ ಉತ್ಪನ್ನಗಳಿಗೆ ಮಾರುಕಟ್ಟೆ ಪ್ರವೇಶ ಪ್ರಕ್ರಿಯೆಯನ್ನು ಸುಧಾರಿಸಲು ಸಹಕಾರಿಯಾಗಲಿದೆ.
ಇನ್ನು ಮುಂದುವರಿದು ಸಮುದಾಯ ಮಟ್ಟದಲ್ಲಿ ಸುಸ್ಥಿರ ಜೀವನೋಪಾಯ ಅವಕಾಶ ಸೃಷ್ಟಿಗೆ ಅನುವು ಮಾಡಿಕೊಡಲಿದೆ. ಇದರಿಂದ ತಳಮಟ್ಟದ ಉದ್ಯಮಶೀಲತೆ ಬಲಗೊಳ್ಳಲಿದೆ. ಶಿ-ಮಾರ್ಟ್ಸ್ ಯೋಜನೆಯು ಈ ಹಿಂದೆ ಪರಿಚಯಿಸಲಾಗಿದ್ದ ಲಖ್ಪತಿ ದೀದಿ ಕಾರ್ಯಕ್ರಮದ ಯಶಸ್ಸಿನ ಮುಂದುವರಿದ ಭಾಗವಾಗಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಹೇಳಿದ್ದಾರೆ.
ಈ ಯೋಜನೆಯು ಮುಖ್ಯವಾಗಿ ಗ್ರಾಮೀಣ ಮಹಿಳೆಯರು ನಡೆಸುವ ಉದ್ಯಮಗಳ ಉತ್ತೇಜನ ಹಾಗೂ ಪ್ರೋತ್ಸಾಹ ನೀಡುವ ಉದ್ದೇಶವನ್ನು ಒಳಗೊಂಡಿದೆ. ಮಹಿಳಾ ವ್ಯಾಪಾರಿಗಳು ದೊಡ್ಡ ಮಾರುಕಟ್ಟೆಗಳನ್ನು ತಲುಪಲು, ತಮ್ಮ ಬ್ರ್ಯಾಂಡ್ಗಳನ್ನು ಸೃಷ್ಟಿ ಮಾಡುವುದು ಮತ್ತು ಪ್ರಚಾರ ಮಾಡುವುದು. ಸ್ಥಿರವಾದ ಆದಾಯದ ಮೂಲಗಳನ್ನು ಸೃಷ್ಟಿಸಲು ಸಹಾಯ ಮಾಡುವ ಗುರಿಯನ್ನು ಶಿ - ಮಾರ್ಟ್ಸ್ ಯೋಜನೆ ಒಳಗೊಂಡಿದೆ.
ಅಲ್ಲದೇ ಸ್ವ-ಸಹಾಯ ಗುಂಪುಗಳಂತಹ ಸ್ಥಳೀಯ ಸಂಘಟನೆ ಗಳನ್ನು ಬಲಪಡಿಸಲು ಉದ್ದೇಶಿಸಲಾಗಿದೆ ಎಂದು ಹೇಳಲಾಗಿದೆ. ಸ್ವ-ಸಹಾಯ ಉದ್ಯಮಗಳನ್ನು ಕ್ಲಸ್ಟರ್ ಮಟ್ಟಕ್ಕೆ ಅಭಿವೃದ್ಧಿ ಮಾಡಲಾಗುವುದು. ಕ್ಲಸ್ಟರ್ ಮಟ್ಟದಲ್ಲಿ ಈ ಮಳಿಗೆಗಳನ್ನು ಸ್ಥಾಪಿಸುವ ಮೂಲಕ, ಗ್ರಾಮೀಣ ಉತ್ಪನ್ನಗಳು ಪ್ರಸಿದ್ಧ ಬ್ರ್ಯಾಂಡ್ಗಳಿಗೆ ಪೈಪೋಟಿ ನೀಡುವ ಮಟ್ಟಕ್ಕೆ ಉತ್ತೇಜನ ನೀಡುವುದು ಕೇಂದ್ರ ಸರ್ಕಾರದ ಉದ್ದೇಶವಾಗಿದೆ.
ಈ ಯೋಜನೆಯನ್ನು ಬೆಂಬಲಿಸಲು ನಿಯಮಿತ ಬ್ಯಾಂಕ್ ಸಾಲಗಳು ಸಾಕಾಗುವುದಿಲ್ಲ. ಉದ್ಯಮಿಗಳಿಗೆ ವರ್ಧಿತ ಮತ್ತು ಹೊಸ ಹಣಕಾಸು ವ್ಯವಸ್ಥೆಯ ಮೂಲಕ ಸಹಾಯ ಸಿಗುತ್ತದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಅಭಿಪ್ರಾಯಪಟ್ಟಿದ್ದಾರೆ.
ಕೇಂದ್ರ ಬಜೆಟ್ ಲೈವ್ ಜೊತೆಗೆ ವಿಶ್ಲೇಷಣೆಯೂ ಇಲ್ಲಿದೆ
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಭಾನುವಾರ (ಫೆ 1) ಸಂಸತ್ತಿನಲ್ಲಿ ಮಂಡಿಸಿದ ಬಜೆಟ್ ಭಾಷಣದ ಲೈವ್ ವಿಡಿಯೊ ಮತ್ತು ತಜ್ಞರ ವಿಶ್ಲೇಷಣೆಗಾಗಿ 'ಒನ್ ಇಂಡಿಯಾ ಕನ್ನಡ' ಯುಟ್ಯೂಬ್ ಚಾನೆಲ್ಗೆ ಭೇಟಿ ನೀಡಿ.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications