ಕೇಂದ್ರ ಬಜೆಟ್ನಲ್ಲಿ ಬಂಪರ್: ಔಷಧಿ ವಲಯಕ್ಕೆ 10,000 ಕೋಟಿ ರೂ. ಘೋಷಣೆ
ನವದೆಹಲಿ: ಭಾರತೀಯರ ಬಹುನಿರೀಕ್ಷೆಯ 2026-27 ನೇ ಹಣಕಾಸು ವರ್ಷದ ಕೇಂದ್ರ ಬಜೆಟ್ ಅನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಭಾನುವಾರ (ಫೆ.1) ಮಂಡಿಸಿದ್ದಾರೆ. ತಮ್ಮ ಒಂಬತ್ತನೇ ಬಾರಿಯ ಬಜೆಟ್ ನಲ್ಲಿ ಅವರು ದೇಶದ ಔಷಧಿ ವಲಯಕ್ಕೆ 10,000 ಕೋಟಿ ರೂಪಾಯಿ ಘೋಷಣೆ ಮಾಡುವ ಮೂಲಕ ಫಾರ್ಮಾ (ಔಷಧ ಸಂಶೋಧನೆ, ಉತ್ಪಾದನೆ) ಕ್ಷೇತ್ರಕ್ಕೆ ಬಂಪರ್ ನೀಡಿದ್ದಾರೆ. 10 ಸಾವಿರ ಕೋಟಿ ರೂಪಾಯಿ ಇದರಲ್ಲಿ ಬಡ ಹಾಗೂ ಮಧ್ಯ ವರ್ಗದವರಿಗೆ ಔಷಧಿ ಸಿಗುವಂತೆ ಮಾಡುವ ಚಿಂತನೆ ಇದೆ.
ಕೇಂದ್ರ ಸರ್ಕಾರದಿಂದ ಔಷಧಿ ಸಾಮರ್ಥ್ಯ ಹೆಚ್ಚಿಸುವ ಉದ್ದೇಶದಿಂದ ಈ ಆರ್ಥಿಕವಾಗಿ ಹೆಚ್ಚಿನ ಬೆಂಬಲ ಘೋಷಿಸಲಾಗಿದೆ. ಕ್ಯಾನ್ಸರ್, ಸಕ್ಕರೆ ಕಾಯಿಲೆ ಸೇರಿದಂತೆ ಇನ್ನಿತರ ಗಂಭೀರ ಕಾಯಿಲೆಯ ರೋಗಿಗಳಿಗೆ ಕಡಿಮೆ ಬೆಲೆಯಲ್ಲಿ ಔಷಧಿ ಪೂರೈಕೆ ಉದ್ದೇಶ ಸಹ ಹೊಂದಿದೆ. ಅದಕ್ಕಾಗಿ ಈಗಾಗಲೇ ಜನೌಷಧಿ ಕೇಂದ್ರಗಳು ದೇಶಾದ್ಯಂತ ಕಾರ್ಯ ನಿರ್ವಹಿಸುತ್ತಿವೆ.

ಜ್ಞಾನ, ತಂತ್ರಜ್ಞಾನ ಮತ್ತು ನಾವೀನ್ಯತೆ ಮೂಲಕ ಆರೋಗ್ಯ ಪ್ರಗತಿಗಾಗಿ 5 ವರ್ಷಗಳ ಬಯೋಫಾರ್ಮಾ ಕಾರ್ಯತಂತ್ರವು ಭಾರತದ ಆರೋಗ್ಯ ರಕ್ಷಣೆಯಲ್ಲಿ ಪರಿಸರ ವ್ಯವಸ್ಥೆಯನ್ನು ಬಲಪಡಿಸುತ್ತದೆ. ಬಜೆಟ್ ನಲ್ಲಿ ಕೇಂದ್ರ ಸರ್ಕಾರ ಔಷಧಿ ಉತ್ಪಾದನೆಗೆ ಉತ್ತೇಜನ ನೀಡಿದ್ದು ಸ್ಪಷ್ಟವಾಗಿದೆ.
ರೋಗಿಗಳಿಗೆ ಗುಡ್ ನ್ಯೂಸ್
ಔಷಧಿ ವಲಯಕ್ಕೆ ಸಂಬಂಧಿಸಿಂತೆ ಪ್ರಮುಖ ಅಪರೂಪದ ಏಳು ಔಷಧಿಗಳ ಆಮದು ಸುಂಕಕ್ಕೆ ವಿನಾಯಿತಿ ನೀಡಲಾಗಿದೆ. ಇದರೊಂದಿಗೆ ಕ್ಯಾನ್ಸರ್ ಮತ್ತು ಮಧುಮೇಹ ಕಾಯಿಲೆಗಳು ಸೇರಿ ಇತರ ಬಳಕೆಯ 17 ಔಷಧಿಗಳ ಬೆಲೆ ಇಳಿಕೆ ಮಾಡಲಾಗಿದೆ. ಇದರಿಂದ ಆ ಔಷಧಿಗಳು ಅಗ್ಗವಾಗಲಿವೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ತಿಳಿಸಿದ್ದಾರೆ. ಈ ಮೂಲಕ ರೋಗಿಗಳಿಗೆ ಕೇಂದ್ರ ಸರ್ಕಾರ ಬಜೆಟ್ನಲ್ಲಿ ಗುಡ್ ನ್ಯೂಸ್ ನೀಡಿದೆ. ಈ ಮೂಲಕ ಪ್ರತ್ಯೇಕವಾಗಿ ಆರೋಗ್ಯ ಕ್ಷೇತ್ರಕ್ಕೆ ಒಂದಷ್ಟು ಯೋಜನೆಗಳ, ಅನುದಾನ ಘೋಷಿಸಿರುವ ಕೇಂದ್ರ ಸರ್ಕಾರ, ಔಷಧಿ ಉತ್ಪನ್ನಗಳ ಹೆಚ್ಚಳ, ಬಳಕೆಗೆ ಉತ್ತೇಜನ ನೀಡುತ್ತಿದೆ.
ಕೇಂದ್ರ ಬಜೆಟ್ ಲೈವ್ ಜೊತೆಗೆ ವಿಶ್ಲೇಷಣೆಯೂ ಇಲ್ಲಿದೆ
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಭಾನುವಾರ (ಫೆ 1) ಸಂಸತ್ತಿನಲ್ಲಿ ಮಂಡಿಸಿದ ಬಜೆಟ್ ಭಾಷಣದ ಲೈವ್ ವಿಡಿಯೊ ಮತ್ತು ತಜ್ಞರ ವಿಶ್ಲೇಷಣೆಗಾಗಿ 'ಒನ್ ಇಂಡಿಯಾ ಕನ್ನಡ' ಯುಟ್ಯೂಬ್ ಚಾನೆಲ್ಗೆ ಭೇಟಿ ನೀಡಿ.
-
"ಕಾಂಗ್ರೆಸ್ನಿಂದ ದಲಿತ ದ್ರೋಹ: 14,200 ಕೋಟಿ ರೂ ಎಸ್ಸಿಎಸ್ಪಿ/ಟಿಎಸ್ಪಿ ಹಣ ಗ್ಯಾರಂಟಿ ಪಾಲು'' -
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
"ಬೆಂಗಳೂರು: 370 ಎಕ್ರೆ ಜಕ್ಕೂರು ವೈಮಾನಿಕ ಶಾಲೆ ಜಾಗದಲ್ಲಿ ಶಾಪಿಂಗ್ ಕಾಂಪ್ಲೆಕ್ಸ್ಗೆ ಪ್ಲ್ಯಾನ್'' -
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
ಬೆಂಗಳೂರು ಬಂಗಲೆ ವಿವಾದ: ರಾಜೀವ್ ಚಂದ್ರಶೇಖರ್ ನಾಮಪತ್ರ ಅಂಗೀಕರಿಸಿದ ಚುನಾವಣಾ ಆಯೋಗ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು











Click it and Unblock the Notifications