Union Budget 2026: ಬೆಂಗಳೂರಿನಿಂದ ಹೈದರಾಬಾದ್, ಚೆನ್ನೈಗೆ ಹೈಸ್ಪೀಡ್ ರೈಲು ಕಾರಿಡಾರ್: ದೆಹಲಿ, ವಾರಣಾಸಿಗೂ ಬಂಪರ್
ನವದೆಹಲಿ: ಇಂದಿನ ಕೇಂದ್ರ ಬಜೆಟ್ ನಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬೆಂಗಳೂರು ಸೇರಿದಂತೆ ದೇಶದ ಏಳು ಮಹಾನಗರಗಳಿಗೆ ಹೈಸ್ಪೀಡ್ ರೈಲು ಘೋಷಣೆ ಮಾಡಿದ್ದಾರೆ. ಈ ಮೂಲಕ ಕರ್ನಾಟಕಕ್ಕೂ ಬಂಪರ್ ನೀಡಿದ್ದಾರೆ.
ಈ ಹೈಸ್ಪೀಡ್ ರೈಲು ಯೋಜನೆ ಘೋಷಣೆಯಿಂದ ಕರ್ನಾಟಕದ ಪ್ರಮುಖ ಬೆಂಗಳೂರು ನಗರ, ತೆಲಂಗಾಣ ರಾಜ್ಯದ ಪ್ರಮುಖ, ಮಹಾರಾಷ್ಟ್ರದ ಮುಂಬೈ ಸೇರಿದಂತೆ ವಿವಿಧ ರಾಜ್ಯಗಳ ಮಹಾನಗರಗಳ ಮಧ್ಯ ರೈಲು ಸಾರಿಗೆ ಸುಧಾರಿಸಲಿದೆ. ಪ್ರಮುಖ ನಗರಗಳನ್ನು ಜೋಡಿಸುವ ಉದ್ದೇಶದಿಂದ ಈ ಏಳು ಹೈಸ್ಪೀಡ್ ರೈಲು ಯೋಜನೆ ಘೋಷಿಸಲಾಗಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದರು.

ಈ ಯೋಜನೆ ಮೂಲಕ ಪ್ರಮುಖ ಮಾರ್ಗಗಳ ಪ್ರಯಾಣ ಸಮಯ ಕಡಿಮೆ ಮಾಡಲಿದೆ. ಪ್ರಯಾಣಿಕರಿಗೆ ಆರಾಮದಾಯಕ ಅನುಭವ ನೀಡಲಿದೆ. ಮಹಾರಾಷ್ಟ್ರ ಜೊತೆಗೆ ದಕ್ಷಿಣ ಭಾರತದ ಪ್ರಮುಖ ರಾಜ್ಯಗಳಾದ ಕರ್ನಾಟದ ಬೆಂಗಳೂರು, ತಮಿಳುನಾಡಿನ ಚೆನ್ನೈ, ತೆಲಂಗಾಣದ ಹೈದರಾಬಾದ್, ದೆಹಲಿ ಹಾಗೂ ವಾರಣಾಸಿ ಮಧ್ಯೆ ಭವಿಷ್ಯದಲ್ಲಿ ಹೈಸ್ಪೀಡ್ ರೈಲುಗಳು ಸಂಚಾರ ಸೇವೆ ಸಿಗಲಿದೆ.
ಏಳು ಪ್ರಮುಖ ಹೈಸ್ಪೀಡ್ ರೈಲು ಕಾರಿಡಾರ್ ಮಾರ್ಗಗಳು/ನಗರ
1) ಮುಂಬೈ-ಪುಣೆ
2) ಪುಣೆ-ಹೈದರಾಬಾದ್
3) ಹೈದರಾಬಾದ್-ಬೆಂಗಳೂರು
4) ಹೈದರಾಬಾದ್-ಚನ್ನೈ
5) ಚೆನ್ನೈ-ಬೆಂಗಳೂರು
6) ದೆಹಲಿ-ವಾರಣಾಸಿ
7) ವಾರಣಾಸಿ-ಸಿಲಿಗುರಿ
ರೈಲ್ವೆ ಇಲಾಖೆಯಲ್ಲಿ ಕ್ರಾಂತಿಕಾರಕ ಸುಧಾರಣೆ
ರೈಲ್ವೆ ಇಲಾಖೆ ವ್ಯಾಪ್ತಿಯಲ್ಲಿ ಈಗಾಗಲೇ ಕ್ರಾಂತಿ ಸೃಷ್ಟಿಸಿದ್ದ ವಂದೇ ಭಾರತ್ ಎಕ್ಸ್ಪ್ರೆಸ್ ಹಾಗೂ ಅಮೃತ್ ಭಾರತ್ ರೈಲುಗಳ ಬೆನ್ನಲ್ಲೆ ದೇಶದ ಏಳು ನಗರಗಳು ಹೈಸ್ಪೀಡ್ ರೈಲು ಕಾರಿಡಾರ್ ಯೋಜನೆ ಪಡೆದಿವೆ. ಇದರಿಂದ ಸುದೀರ್ಘ ಪ್ರಯಾಣವು ಗಂಟೆಗಳಲ್ಲಿ ಕ್ರಮಿಸಬಹುದಾಗಿದೆ. ಇದಕ್ಕೆ ತಕ್ಕಂತೆ ಈಗಾಗಲೇ ವಂದೇ ಭಾರತ್ ಸ್ಲೀಪರ್ ರೈಲುಗಳ ಕಾರ್ಯಾಚರಣೆ ಆರಂಭಿಸಿದೆ. ಪೂರಕವಾಗಿ ರೈಲ್ವೆ ಹಳಿ, ದ್ವಿಪಥ ಕಾಮಗಾರಿ ಬಹುತೇಕ ಪೂರ್ಣಗೊಂಡಿದೆ. ಒಟ್ಟಾರೆ ರೈಲ್ವೆ ಮೂಲಸೌಕರ್ಯ ಸುಧಾರಿಸಲಾಗಿದೆ. ಅದರ ಬೆನ್ನಲ್ಲೆ ಹೊಸ ರೈಲ್ವೆ ಯೋಜನೆ ಘೋಷಣೆ ಆಗಿರುವುದು ದೇಶದ ಜನರಲ್ಲಿ ಸಂತಸ ಮೂಡಿಸಿದೆ.
ಉತ್ತರ ಭಾರತದ ಮೂರು ರಾಜ್ಯಗಳಿಗೆ ಬಂಪರ್
ದೆಹಲಿ-ವಾರಣಾಸಿ, ಪೂಣೇ ಹೈದರಾಬಾದ್ ಚೆನ್ನೈ ಮಹಾನಗರಳಿಗೆ ಡೆಡಿಕೇಟೆಡ್ ರೇರ್ ಅರ್ಥ್ ಕಾರಿಡಾರ್ ಆರಂಭಿಸುವುದಾಗಿ ವಿತ್ತ ಸಚಿವರು ಘೋಷಿಸಿದ್ದಾರೆ. ಉತ್ತರ ಭಾರತದ ಮೂರು ರಾಜ್ಯಗಳಿಗೆ ಹೊಸ ರೈಲ್ವೆ ಯೋಜನೆ ಸಿಕ್ಕಂತಾಗಿದೆ. ಹಿಮಾಚಲ ಪ್ರದೇಶ, ಉತ್ತರಾಖಂಡ ಹಾಗೂ ಜಮ್ಮು ಮತ್ತು ಕಾಶ್ಮೀರದಲ್ಲಿ ಈ ಹೊಸ ರೈಲು ಯೋಜನೆ ಜಾರಿ ಆಗಲಿದೆ. ಹಿಮ ಪ್ರದೇಶಗಳಲ್ಲಿ ಮೌಂಟೇನ್ ರೈಲು ಯೋಜನೆ ಘೋಷಣೆ ಮಾಡಲಾಗಿದ್ದು, ಇದರಿಂದ ಆ ಭಾಗದ ಜನರಿಗೆ ಸಾರಿಗೆ ಅನುಕೂಲ ಸಿಗಲಿದೆ ಎಂದು ಕೇಂದ್ರ ಸಚಿವೆ ಮಾಹಿತಿ ಕೊಟ್ಟರು.
ಕೇಂದ್ರ ಬಜೆಟ್ ಲೈವ್ ಜೊತೆಗೆ ವಿಶ್ಲೇಷಣೆಯೂ ಇಲ್ಲಿದೆ
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಭಾನುವಾರ (ಫೆ 1) ಸಂಸತ್ತಿನಲ್ಲಿ ಮಂಡಿಸಿದ ಬಜೆಟ್ ಭಾಷಣದ ಲೈವ್ ವಿಡಿಯೊ ಮತ್ತು ತಜ್ಞರ ವಿಶ್ಲೇಷಣೆಗಾಗಿ 'ಒನ್ ಇಂಡಿಯಾ ಕನ್ನಡ' ಯುಟ್ಯೂಬ್ ಚಾನೆಲ್ಗೆ ಭೇಟಿ ನೀಡಿ.
-
ಲಂಡನ್ ಮೆಟ್ರೋಗಿಂತ ಬೆಂಗಳೂರಿನ 'ನಮ್ಮ ಮೆಟ್ರೋ' ಬೆಸ್ಟ್: Viral ಪೋಸ್ಟ್ನಲ್ಲಿ ಅಚ್ಚರಿಯ ಸತ್ಯ ಬಿಚ್ಚಿಟ್ಟ ಯುವತಿ -
ಉನ್ನತ ಶಿಕ್ಷಣಕ್ಕೆ ಭಾರತದ ಯಾವ ನಗರ ಬೆಸ್ಟ್? QS ರ್ಯಾಂಕಿಂಗ್ ಪಟ್ಟಿಯಲ್ಲಿದೆ ಬೆಂಗಳೂರು ಸೇರಿದಂತೆ 4 ನಗರಗಳ ಹೆಸರು -
ಯುದ್ಧದ ಬಿಸಿ: ಬೆಂಗಳೂರಿಗೆ ಅರಬ್ ರಾಷ್ಟ್ರಗಳ ವಿಮಾನ ಸಂಚಾರ ಕಡಿತ; ರಾಜ್ಯ ಟ್ರಾವೆಲ್ಸ್ ಮಾಲೀಕರಲ್ಲಿ ಆತಂಕ -
ಕನ್ನಡದಲ್ಲಿ ರೈಲ್ವೆ ಪರೀಕ್ಷೆಗೆ ಆಗ್ರಹ; ರಾಜ್ಯದ ಎಲ್ಲ ಸಂಸದರಿಗೆ ಪುರುಷೋತ್ತಮ ಬಿಳಿಮಲೆ ಪತ್ರ -
Property Mutation: ಆಸ್ತಿ ನೋಂದಣಿ ನಂತರ ಶೇ.98ರಷ್ಟು ಖಾತೆಗಳು ಸ್ವಯಂ ಚಾಲಿತವಾಗಿ ಬದಲಾವಣೆ: ಸಚಿವ ಕೃಷ್ಣ ಬೈರೇಗೌಡ -
SSLC ಪರೀಕ್ಷೆ-1 ಆರಂಭ: ಮಲ್ಲೇಶ್ವರಂನ ಕೆಪಿಎಸ್ ಶಾಲೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ವಿದ್ಯಾರ್ಥಿಗಳಿಗೆ ಶುಭಹಾರೈಕೆ -
Karnataka: ಧಾರ್ಮಿಕ ಮೆರವಣಿಗೆ, ಜಯಂತಿಗಳಲ್ಲಿ DJ ಸದ್ದಿಗೆ ಬ್ರೇಕ್? 'ಐಟಂ ಸಾಂಗ್' ಬ್ಯಾನ್ ಮಾಡಲು ರಾಜ್ಯ ಸರ್ಕಾರ ಒಲವು -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
Gold Price Today: ಯುಗಾದಿಗೂ ಮೊದಲೇ ಚಿನ್ನದ ದರದಲ್ಲಿ ಭಾರೀ ಇಳಿಕೆ; ಆಭರಣ ಪ್ರಿಯರಿಗೆ ಇಂದೇ ಹಬ್ಬ












Click it and Unblock the Notifications