ತ್ರಿವಳಿ ತಲಾಖ್ ಮಸೂದೆಗೆ ಕೇಂದ್ರ ಸಂಪುಟದ ಸಭೆಯಲ್ಲಿ ಅಂಗೀಕಾರ
ನವದೆಹಲಿ, ಡಿಸೆಂಬರ್ 15: ತ್ರಿವಳಿ ತಲಾಖ್ ಗೆ ಕಾನೂನು ಬಾಹಿರ, ಅಸಂವಿಧಾನಿಕ ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿದ ಬಳಿಕ, ಇದೀಗ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತ ಮಸೂದೆಗೆ ಸರ್ವಾನುಮತದ ಒಪ್ಪಿಗೆ ಸಿಕ್ಕಿದೆ.
ಸುಪ್ರಿಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಜೆ.ಎಸ್ ಖೇಹರ್ ನೇತೃತ್ವದ ಪಂಚ ಸದಸ್ಯರ ನ್ಯಾಯಪೀಠವು ತ್ರಿವಳಿ ತಲಾಖ್ ಮಾನ್ಯತೆ ರದ್ದು ಮಾಡಿ ಆಗಸ್ಟ್ 27ರಂದು ತೀರ್ಪಿ ನೀಡಿದ್ದನ್ನು ಇಲ್ಲಿ ಸ್ಮರಿಸಬಹುದು.
ಜಮ್ಮು-ಕಾಶ್ಮೀರಕ್ಕೆ ಅನ್ವಯವಾಗುವುದಿಲ್ಲ: 370ನೇ ವಿಧಿ ಅಡಿಯಲ್ಲಿ ಜಮ್ಮು-ಕಾಶ್ಮೀರಕ್ಕೆ ವಿಶೇಷ ರಾಜ್ಯ ಸ್ಥಾನಮಾನ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ನರೇಂದ್ರ ಮೋದಿ ಸರ್ಕಾರ ಜಾರಿಗೆ ತರಲಿರುವ ಹೊಸ ಕಾಯ್ದೆ ಜಮ್ಮು-ಕಾಶ್ಮೀರಕ್ಕೆ ಅನ್ವಯವಾಗುವುದಿಲ್ಲ.

ಕರಡು ಮಸೂದೆಯಲ್ಲೇನಿದೆ: ತ್ರಿವಳಿ ತಲಾಖ್ ಜಾಮೀನು ರಹಿತ ಅಪರಾಧ ಎಂದು ಪರಿಗಣನೆ, ಗರಿಷ್ಠ 3 ವರ್ಷ ಶಿಕ್ಷೆ, ಜಮ್ಮು-ಕಾಶ್ಮೀರಕ್ಕೆ ಅನ್ಯವಿಲ್ಲ, ಲಿಖಿತ, ಮಾತಿನ ಮೂಲಕ ಅಥವಾ ಎಲೆಕ್ಟ್ರಾನಿಕ್ ವಿಧಾನದಲ್ಲಿ ತಲಾಖ್ ನೀಡುವುದು ಮಸೂದೆಯಲ್ಲಿ ತಿಳಿಸಲಾಗಿದೆ.
ತ್ರಿವಳಿ ತಲಾಖ್ : ವಿವಾಹಿತ ಮಹಿಳೆಗೆ ವಿವಾಹ ವಿಚ್ಛೇದನ ನೀಡುವ ಒಂದು ರೀತಿಯ ಪದ್ಧತಿಯಾಗಿದೆ. ಈ ಪದ್ಧತಿಯಂತೆ ವಿವಾಹಿತ ಮುಸ್ಲಿಂ ವ್ಯಕ್ತಿಯು ತನ್ನ ಪತ್ನಿಗೆ ಕಾನೂನು ಮಾನ್ಯ ವಿಚ್ಛೇದನ ನೀದಿದ್ದೇನೆ ಎಂದು ಘೋಷಿಸಬಹುದಾಗಿದೆ.
ಇದು ಮೌಖಿಕವಾಗಿರಬಹುದು ಅಥವಾ ಲಿಖಿತರೂಪದಲ್ಲಿರಬಹುದು ಅಥವಾ ಇ ಮಾಧ್ಯಮದ ಮೂಲಕ ಎಸ್ಎಂಎಸ್, ಟೆಲಿಫೋನ್ ಕಾಲ್, ಇಮೇಲ್ ಅಥವಾ ಫೇಸ್ ಬುಕ್, ವಾಟ್ಸಪ್ ಮೂಲಕ ಕೂಡಾ ತಲಾಖ್ ತಲಾಖ್ ತಲಾಖ್ ಎಂದು ಮೂರು ಬಾರಿ ಕಳಿಸಿ ವಿಚ್ಛೇದನ ನೀಡಿದ ಉದಾಹರಣೆಗಳಿವೆ.
ವಿಚ್ಛೇದನ ನೀಡುವ ವ್ಯಕ್ತಿಯು ಯಾವುದೇ ಕಾರಣ ನೀಡುವ ಅಗತ್ಯವಿಲ್ಲ. ವಿಚ್ಛೇದನ ನೀಡುವ ಸಮಯದಲ್ಲಿ ಹಾಜರಿರಬೇಕು ಎಂಬ ನಿಯಮವಿಲ್ಲ. ಇದ್ದಾತ್ ಅವಧಿಯ ನಂತರ ಪತ್ನಿಯು ಗರ್ಭಿಣಿಯಾಗಿದ್ದಾರೆ ವಿಚ್ಛೇದನದ ವಿಧಾನ ಬದಲಾಗಲಿದೆ.
ಈ ಸಂದರ್ಭದಲ್ಲಿ ದಂಪತಿಗೆ ಸಲಹಾ ಸಮಿತಿಯ ಮುಂದೆ ಹಾಜರಾಗಿ, ಮತ್ತೆ ಒಂದಾಗುವ ಅವಕಾಶವಿರುತ್ತದೆ. ಆದರೆ, ಒಂದೇ ಬಾರಿ ಮೂರು ತಲಾಖ್ ಹೇಳುವ ಪ್ರಕ್ರಿಯೆ ಇನ್ನೂ ಜಾರಿಯಲ್ಲಿದೆ. ಇದಕ್ಕೆ ಯಾವುದೇ ನಿರ್ಬಂಧ ಹೇರಲಾಗಿಲ್ಲ.
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications