ತ್ರಿವಳಿ ತಲಾಖ್ ಮಸೂದೆಗೆ ಕೇಂದ್ರ ಸಂಪುಟದ ಸಭೆಯಲ್ಲಿ ಅಂಗೀಕಾರ
ನವದೆಹಲಿ, ಡಿಸೆಂಬರ್ 15: ತ್ರಿವಳಿ ತಲಾಖ್ ಗೆ ಕಾನೂನು ಬಾಹಿರ, ಅಸಂವಿಧಾನಿಕ ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿದ ಬಳಿಕ, ಇದೀಗ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತ ಮಸೂದೆಗೆ ಸರ್ವಾನುಮತದ ಒಪ್ಪಿಗೆ ಸಿಕ್ಕಿದೆ.
ಸುಪ್ರಿಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಜೆ.ಎಸ್ ಖೇಹರ್ ನೇತೃತ್ವದ ಪಂಚ ಸದಸ್ಯರ ನ್ಯಾಯಪೀಠವು ತ್ರಿವಳಿ ತಲಾಖ್ ಮಾನ್ಯತೆ ರದ್ದು ಮಾಡಿ ಆಗಸ್ಟ್ 27ರಂದು ತೀರ್ಪಿ ನೀಡಿದ್ದನ್ನು ಇಲ್ಲಿ ಸ್ಮರಿಸಬಹುದು.
ಜಮ್ಮು-ಕಾಶ್ಮೀರಕ್ಕೆ ಅನ್ವಯವಾಗುವುದಿಲ್ಲ: 370ನೇ ವಿಧಿ ಅಡಿಯಲ್ಲಿ ಜಮ್ಮು-ಕಾಶ್ಮೀರಕ್ಕೆ ವಿಶೇಷ ರಾಜ್ಯ ಸ್ಥಾನಮಾನ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ನರೇಂದ್ರ ಮೋದಿ ಸರ್ಕಾರ ಜಾರಿಗೆ ತರಲಿರುವ ಹೊಸ ಕಾಯ್ದೆ ಜಮ್ಮು-ಕಾಶ್ಮೀರಕ್ಕೆ ಅನ್ವಯವಾಗುವುದಿಲ್ಲ.

ಕರಡು ಮಸೂದೆಯಲ್ಲೇನಿದೆ: ತ್ರಿವಳಿ ತಲಾಖ್ ಜಾಮೀನು ರಹಿತ ಅಪರಾಧ ಎಂದು ಪರಿಗಣನೆ, ಗರಿಷ್ಠ 3 ವರ್ಷ ಶಿಕ್ಷೆ, ಜಮ್ಮು-ಕಾಶ್ಮೀರಕ್ಕೆ ಅನ್ಯವಿಲ್ಲ, ಲಿಖಿತ, ಮಾತಿನ ಮೂಲಕ ಅಥವಾ ಎಲೆಕ್ಟ್ರಾನಿಕ್ ವಿಧಾನದಲ್ಲಿ ತಲಾಖ್ ನೀಡುವುದು ಮಸೂದೆಯಲ್ಲಿ ತಿಳಿಸಲಾಗಿದೆ.
ತ್ರಿವಳಿ ತಲಾಖ್ : ವಿವಾಹಿತ ಮಹಿಳೆಗೆ ವಿವಾಹ ವಿಚ್ಛೇದನ ನೀಡುವ ಒಂದು ರೀತಿಯ ಪದ್ಧತಿಯಾಗಿದೆ. ಈ ಪದ್ಧತಿಯಂತೆ ವಿವಾಹಿತ ಮುಸ್ಲಿಂ ವ್ಯಕ್ತಿಯು ತನ್ನ ಪತ್ನಿಗೆ ಕಾನೂನು ಮಾನ್ಯ ವಿಚ್ಛೇದನ ನೀದಿದ್ದೇನೆ ಎಂದು ಘೋಷಿಸಬಹುದಾಗಿದೆ.
ಇದು ಮೌಖಿಕವಾಗಿರಬಹುದು ಅಥವಾ ಲಿಖಿತರೂಪದಲ್ಲಿರಬಹುದು ಅಥವಾ ಇ ಮಾಧ್ಯಮದ ಮೂಲಕ ಎಸ್ಎಂಎಸ್, ಟೆಲಿಫೋನ್ ಕಾಲ್, ಇಮೇಲ್ ಅಥವಾ ಫೇಸ್ ಬುಕ್, ವಾಟ್ಸಪ್ ಮೂಲಕ ಕೂಡಾ ತಲಾಖ್ ತಲಾಖ್ ತಲಾಖ್ ಎಂದು ಮೂರು ಬಾರಿ ಕಳಿಸಿ ವಿಚ್ಛೇದನ ನೀಡಿದ ಉದಾಹರಣೆಗಳಿವೆ.
ವಿಚ್ಛೇದನ ನೀಡುವ ವ್ಯಕ್ತಿಯು ಯಾವುದೇ ಕಾರಣ ನೀಡುವ ಅಗತ್ಯವಿಲ್ಲ. ವಿಚ್ಛೇದನ ನೀಡುವ ಸಮಯದಲ್ಲಿ ಹಾಜರಿರಬೇಕು ಎಂಬ ನಿಯಮವಿಲ್ಲ. ಇದ್ದಾತ್ ಅವಧಿಯ ನಂತರ ಪತ್ನಿಯು ಗರ್ಭಿಣಿಯಾಗಿದ್ದಾರೆ ವಿಚ್ಛೇದನದ ವಿಧಾನ ಬದಲಾಗಲಿದೆ.
ಈ ಸಂದರ್ಭದಲ್ಲಿ ದಂಪತಿಗೆ ಸಲಹಾ ಸಮಿತಿಯ ಮುಂದೆ ಹಾಜರಾಗಿ, ಮತ್ತೆ ಒಂದಾಗುವ ಅವಕಾಶವಿರುತ್ತದೆ. ಆದರೆ, ಒಂದೇ ಬಾರಿ ಮೂರು ತಲಾಖ್ ಹೇಳುವ ಪ್ರಕ್ರಿಯೆ ಇನ್ನೂ ಜಾರಿಯಲ್ಲಿದೆ. ಇದಕ್ಕೆ ಯಾವುದೇ ನಿರ್ಬಂಧ ಹೇರಲಾಗಿಲ್ಲ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications