ಸುರಕ್ಷಿತ ಪ್ರಯಾಣ: ದಂಡಂ ದಶಗುಣಂ ಎಂದ ಕೇಂದ್ರ ಸರ್ಕಾರ
ನವದೆಹಲಿ, ಆಗಸ್ಟ್, 04: ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವವರಿಗೆ 10,000 ರು. ದಂಡ, ವಿಮೆ ಇಲ್ಲದೆ ವಾಹನ ಚಲಾಯಿಸಿದರೆ 2,000 ರು. ದಂಡ, 3 ತಿಂಗಳ ಜೈಲು ಅಥವಾ ಎರಡೂ ಶಿಕ್ಷೆ, ಹೆಲ್ಮೆಟ್ ಇಲ್ಲದೆ ಬೈಕ್ ಸಂಚಾರಕ್ಕೆ 1,000 ರು. ದಂಡ, 3 ತಿಂಗಳು ಲೈಸನ್ಸ್ ಅಮಾನತು, ಹೌದು ಇಂಥ ಕಠಿಣ ನಿಯಮಗಳನ್ನೊಳಗೊಂಡ ವಿಧೇಯಕಕ್ಕೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ.
ರಸ್ತೆ ಅಪಘಾತಗಳನ್ನು ತಡೆಯುವ ಉದ್ದೇಶದಿಂದ ಮೋಟಾರು ಕಾಯ್ದೆ (ತಿದ್ದುಪಡಿ) ಮಸೂದೆ 2016ಕ್ಕೆ ಬುಧವಾರ ಅನುಮೋದನೆ ನೀಡಿದೆ. ದಂಡದ ಹೆಸರಿನಲ್ಲಿ ಜನರಿಗೆ ರಸ್ತೆ ಸುರಕ್ಷತಾ ಜಾಗೃತಿಯನ್ನು ಮೂಡಿಸಲು ಮುಂದಾಗಿದೆ.[ನವದಂಪತಿಗೆ ಇದಕ್ಕಿಂತ ಉತ್ತಮ ಉಡುಗೊರೆ ಕೊಡಲು ಸಾಧ್ಯವಿಲ್ಲ]

ಗುದ್ದೋಡು ಪ್ರಕರಣಕ್ಕೂ ಸಂಬಂಧಿಸಿ ಮಹತ್ವದ ತಿದ್ದುಪಡಿ ಮಾಡಲಾಗಿದೆ. ಗುದ್ದೋಡು ಪ್ರಕರಣದ ಸಂತ್ರಸ್ತರಿಗೆ 2 ಲಕ್ಷ ರು.. ಪರಿಹಾರ, ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದವರಿಗೆ 10 ಲಕ್ಷ ರು. ಪರಿಹಾರ ನೀಡಬೇಕು ಎಂಬ ಅಂಶಗಳು ಹೊಸ ಕಾಯಿದೆಯಲ್ಲಿವೆ.[ಹೆಲ್ಮೆಟ್ ಕಡ್ಡಾಯ: ಜನರ ಪ್ರಶ್ನೆಗೆ ಸರ್ಕಾರ ಏನು ಹೇಳುತ್ತೆ?]
ಮೋಟಾರು ಕಾಯ್ದೆ (ತಿದ್ದುಪಡಿ) ಮಸೂದೆ 2016ರ ಇತರ ಅಂಶಗಳು
* ವಾಹನ ಚಲಾವಣೆಗೆ ಶೈಕ್ಷಣಿಕ ಹಿನ್ನೆಲೆ ಕಡ್ಡಾಯ ಎಂಬ ನಿಯಮ ರದ್ದು
* ವಾಹನ ಚಲಾವಣೆಗೆ ನೀಡಿದ ಲೈಸನ್ಸ್ ಅವಧಿ ಹೆಚ್ಚಳ
* ವಾಹನ ತಾತ್ಕಾಲಿಕ ನೋಂದಣಿ ವ್ಯವಸ್ಥೆ ಸಂಪೂರ್ಣ ರದ್ದು
* ಅಪ್ರಾಪ್ತರು ವಾಹನ ಚಲಾಯಿಸಿ ಅಪಘಾತ ಮಾಡಿದರೆ ಅದಕ್ಕೆ ಅವರ ಪಾಲಕರೇ ನೇರ ಹೊಣೆ, ವಾಹನದ ನೋಂದಣಿ ರದ್ದು
* ಸಂಚಾರ ನಿಯಮ ಉಲ್ಲಂಘನೆಗೆ ಚಾಲ್ತಿಯಲ್ಲಿದ್ದ 100 ರು. ದಂಡದ ಬದಲಾಗಿ 500 ರು. ದಂಡ
* ಲೈಸನ್ಸ್ ಇಲ್ಲದೆ ವಾಹನ ಚಲಾಯಿಸಿದರೆ ಮತ್ತು ಅನಧಿಕೃತವಾಗಿ ವಾಹನ ಚಲಾಯಿಸಿದರೆ 5,000 ರು. ದಂಡ
* ವಾಹನ ಚಾಲನೆ ಮಾಡದಂತೆ ಶಿಕ್ಷೆ ವಿಧಿಸಿದ್ದರೂ ವಾಹನ ಚಲಾಯಿಸಿದರೆ ಅಂಥ ಸಂದರ್ಭ ಕನಿಷ್ಠ 10,000 ರೂ. ದಂಡ.
* ಅಪಾಯಕಾರಿ ವಾಹನ ಚಾಲನೆಗೆ ಮೊದಲಿದ್ದ 1,000 ರು. ದಂಡದ ಬದಲಾಗಿ 5,000 ರು. ದಂಡ
*ಮಿತಿ ಮೀರಿ ಸರಕು ಸಾಗಿಸುವ ವಾಹನಗಳಿಗೆ 20,000 ರು. ದಂಡ,
* ಸೀಟ್ ಬೆಲ್ಟ್ ಹಾಕಿಕೊಳ್ಳದೆ ವಾಹನ ಚಲಾಯಿಸಿದರೆ 1,000 ರು. ದಂಡ.
-
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ, ಸಂಗೀತ ರಾಣಿ ಎಂದೇ ಖ್ಯಾತಿ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Vijay: ನಟ, ರಾಜಕಾರಣಿ ವಿಜಯ್ ಮಹತ್ವದ ಟ್ವೀಟ್ - ಅಪ್ರಬುದ್ಧ ರಾಜಕಾರಣಿ ಎಂದ ಡಿ.ಕೆ ಶಿವಕುಮಾರ್ Tamil Nadu Assembly Election -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು?












Click it and Unblock the Notifications