ನಾಗರಿಕ ಸೇವಾ ವಲಯದ ಸುಧಾರಣೆಗೆ ಮಿಷನ್ ಕರ್ಮಯೋಗಿ ಯೋಜನೆ ಜಾರಿ
ನವದೆಹಲಿ, ಸೆಪ್ಟೆಂಬರ್ 2: ಸರ್ಕಾರಿ ಸೇವೆಗಳಲ್ಲಿ ನೇಮಕಾತಿ ನಂತರದ ಸುಧಾರಣೆಗಳನ್ನು ತರುವ ಸಲುವಾಗಿ ಮಿಷನ್ ಕರ್ಮಯೋಗಿ ಎಂಬ ರಾಷ್ಟ್ರೀಯ ಕಾರ್ಯಕ್ರಮವನ್ನು ಕೇಂದ್ರ ಸಂಪುಟ ಬುಧವಾರ ಪ್ರಕಟಿಸಿದೆ.
ದೇಶದಲ್ಲಿನ ನಾಗರಿಕ ಸೇವಾ ಅಧಿಕಾರಿಗಳಿಗೆ ಭದ್ರ ಬುನಾದಿ ಹಾಕಲು ನೆರವಾಗುವ ಉದ್ದೇಶದಿಂದ ಈ ವಿಶಿಷ್ಟ ಕಾರ್ಯಕ್ರಮ ಆರಂಭಿಸಲಾಗಿದೆ. ಈ ಯೋಜನೆಯು ನಾಗರಿಕ ಸೇವಕರು ಮತ್ತು ಸಾಂಸ್ಥಿಕ ಸಾಮರ್ಥ್ಯ ವೃದ್ಧಿಯ ಮೇಲೆ ಗಮನ ಹರಿಸುತ್ತದೆ. ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ತಜ್ಞರನ್ನು ಒಳಗೊಂಡಿರುವ ಪ್ರಧಾನಿಯವರ ಎಚ್ ಆರ್ ಸಮಿತಿಯು ಪ್ರಧಾನಿಯ ಅಧ್ಯಕ್ಷತೆಯಲ್ಲಿ ಇದರ ಮೇಲೆ ಇರಲಿದೆ.
ನಾಗರಿಕ ಸೇವೆಯಲ್ಲಿರುವ ವ್ಯಕ್ತಿಯು ಸಮಾಜದ ಸವಾಲುಗಳನ್ನು ಎದುರಿಸಲು ಕಾಲ್ಪನಿಕ ಮತ್ತು ಹೊಸತನದ ತುಡಿತ, ಚುರಕಿನ ವ್ಯಕ್ತಿತ್ವ ಮತ್ತು ವಿಧೇಯತೆ, ವೃತ್ತಿಪರತೆ ಮತ್ತು ಪ್ರಗತಿಪರತೆ, ಉತ್ಸಾಹಿ ಮತ್ತು ಚಟುವಟಿಕೆಯ, ಪಾರದರ್ಶಕತೆ ಮತ್ತು ತಾಂತ್ರಿಕ ಜ್ಞಾನ, ರಚನಾತ್ಮಕ ಹಾಗೂ ಸೃಜನಶೀಲತೆಗಳನ್ನು ಹೊಂದಿರಬೇಕು ಎಂದು ಕಾರ್ಯದರ್ಶಿ ಸಿ. ಚಂದ್ರಮೌಳಿ ತಿಳಿಸಿದ್ದಾರೆ.

ಸಾಮರ್ಥ್ಯವೃದ್ಧಿಯ ಆಯೋಗವವನ್ನು ಸ್ಥಾಪಿಸಲಾಗುತ್ತಿದ್ದು, ಅದು ನಾಗರಿಕ ಸೇವೆಗಳ ತರಬೇತಿಯ ಗುಣಮಟ್ಟವನ್ನು ಸುಧಾರಿಸಲಿದೆ. ಭಾರತದ ಮಹತ್ವಾಕಾಂಕ್ಷೆಗಳು ಮತ್ತು ಅಭಿವೃದ್ಧಿ ಗುರಿಗಳ ಬಗ್ಗೆ ಒಂದೇ ರೀತಿಯ ಸಾಮಾನ್ಯ ತಿಳಿವಳಿಕೆಗಳನ್ನು ಮೂಡಿಸಲು ಅಗತ್ಯವಾದ ಎಲ್ಲ ತರಬೇತಿ ಸಂಸ್ಥೆಗಳನ್ನು ನಿರ್ವಹಿಸುವ ಹಾಗೂ ಸಂಪನ್ಮೂಲ ಮತ್ತು ಸಿಬ್ಬಂದಿಯನ್ನು ಒದಗಿಸುವ ಕೆಲಸವನ್ನು ಇದು ಮಾಡಲಿದೆ ಎಂದು ಅವರು ಹೇಳಿದ್ದಾರೆ.
ಎಲ್ಲ ಇಲಾಖೆ ಮತ್ತು ಸೇವೆಗಳಿಗೆ ವಾರ್ಷಿಕ ಸಾಮರ್ಥ್ಯ ವೃದ್ಧಿ ಯೋಜನೆಯನ್ನು ಸೂಚಿಸಲಿದೆ. ಈ ಯೋಜನೆಯ ಜಾರಿಯ ಮೇಲೆ ನಿಗಾವಹಿಸಲಿದ್ದು, ಸೇವೆಯಲ್ಲಿನ ದಕ್ಷತೆ ಹೆಚ್ಚಿಸುವ ಬಗ್ಗೆ ಗಮನ ಹರಿಸಲಿದೆ. ಕಲಿಕೆಯಲ್ಲಿ ತಂತ್ರಜ್ಞಾನದ ಬಳಕೆಯ ಜತೆಗೆ ಸಾರ್ವಜನಿಕ ಸೇವೆಗಳ ಕಲಿಕೆಗೆ ಸೂಕ್ತ ತಳಹದಿ ನಿರ್ಮಿಸಲಿದೆ ಎಂದು ಹೇಳಲಾಗಿದೆ.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications