ಬಾಡಿಗೆ ತಾಯ್ತನ(ತಿದ್ದುಪಡಿ) ಕಾಯ್ದೆಗೆ ಅಸ್ತು ಎಂದ ಕೇಂದ್ರ ಸಚಿವ ಸಂಪುಟ
ನವದೆಹಲಿ, ಫೆಬ್ರವರಿ 26: ಬಾಡಿಗೆ ತಾಯ್ತನ(ತಿದ್ದುಪಡಿ) ಕಾಯ್ದೆ 2020ಗೆ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಬುಧವಾರದಂದು ಸಮ್ಮತಿ ಸೂಚಿಸಿದೆ. ಸರಿ ಸುಮಾರು 15ಕ್ಕೂ ಅಧಿಕ ಬದಲಾವಣೆಗಳಿಗೆ ಒಪ್ಪಿಗೆ ಸಿಕ್ಕಿದೆ. ಈ ಪೈಕಿ ಯಾವುದೇ ಮಹಿಳೆಯು ಸ್ವಇಚ್ಛೆಯಿಂದ ಬಾಡಿಗೆ ತಾಯ್ತನ ಆಯ್ಕೆ ಮಾಡಿಕೊಳ್ಳಬಹುದು, ವಿಧವೆ, ವಿವಾಹ ವಿಚ್ಛೇದಿತರಿಗೂ ಆಯ್ಕೆ ಸ್ವಾತಂತ್ರ್ಯ ನೀಡಲಾಗಿದೆ.
"ಬಾಡಿಗೆ ತಾಯ್ತನವನ್ನು ವಾಣಿಜ್ಯ ಉದ್ದೇಶಕ್ಕೆ ಬಳಸುವುದನ್ನು ನಿರ್ಬಂಧಿಸುವುದು ಈ ಕಾಯ್ದೆಯಿಂದ ಸಾಧ್ಯವಾಗಲಿದೆ. ರಾಜ್ಯಸಭೆಯ ಆಯ್ಕೆ ಸಮಿತಿ ಶಿಫಾರಸ್ಸಿನ ಅನ್ವಯ ಕಾಯ್ದೆಗೆ ತಿದ್ದುಪಡಿ ತರಲಾಗಿದ್ದು, ಕೇಂದ್ರ ಸಚಿವ ಸಂಪುಟದ ಒಪ್ಪಿಗೆ ಸಿಕ್ಕಿದೆ" ಎಂದು ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಪ್ರಕಾಶ್ ಜಾವಡೇಕರ್ ಹೇಳಿದರು.
ಕಾಯ್ದೆ ತಿದ್ದುಪಡಿ ಬಗ್ಗೆ ಮಾತನಾಡಿದ ಮಹಿಳಾ ಮತ್ತು ಕಲ್ಯಾಣ ಸಚಿವೆ ಸ್ಮೃತಿ ಇರಾನಿ, ಬಾಡಿಗೆ ತಾಯಿಯರಿಗೆ ನೀಡುವ ವಿಮೆ ಅವಧಿ 16 ತಿಂಗಳುಗಳಿಂದ 36 ತಿಂಗಳಿಗೆ ವಿಸ್ತರಿಸಲಾಗಿದೆ. ಭಾರತೀಯ ವಿವಾಹಿತ ದಂಪತಿ, ಭಾರತೀಯ ಮೂಲದ ದಂಪತಿ, ವಿಧವೆ, ವಿಚ್ಛೇದಿತೆ ಎಲ್ಲರಿಗೂ ಈ ಸೌಲಭ್ಯ ಬಳಕೆಗೆ ಅರ್ಹತೆ ಸಿಗಲಿದೆ ಎಂಡು ಹೇಳಿದರು.

ಬಾಡಿಗೆ ತಾಯಿ ಎಂದರೆ ಮಹಿಳೆ ಯೊಬ್ಬಳು ಕೃತಕ ಗರ್ಭಧಾರಣೆ ಮೂಲಕ ಯಾವುದೇ ವ್ಯಕ್ತಿ ಅಥವಾ ದಂಪತಿಗಾಗಿ ಮಗುವನ್ನು ಹೆತ್ತುಕೊಡುವುದು.
ಭಾರತದಲ್ಲಿ ಬಾಡಿಗೆ ತಾಯ್ತನ ಮಾರುಕಟ್ಟೆಯು 1,000 ದಿಂದ 5,000 ಕೋಟಿ ರು. ವಹಿವಾಟು ಕಾಣುತ್ತಿದೆ. ಜರ್ಮನಿ, ಫ್ರಾನ್ಸ್, ಪೋಲೆಂಡ್, ಜೆಕ್ ಗಣರಾಜ್ಯ, ಇಟಲಿ, ನೆದರ್ಲೆಂಡ್, ಬೆಲ್ಜಿಯಂ ಮತ್ತು ಸ್ಪೇನ್ ರಾಷ್ಟ್ರಗಳ ದೂತಾವಾಸ ನಿರ್ದೇಶನಾಲಯಗಳು ಭಾರತದಲ್ಲಿರುವ ತನ್ನ ನಾಗರಿಕರಿಗೆ ಬಾಡಿಗೆ ತಾಯ್ತನ ನೆರವು ನೀಡದಂತೆ ಸೂಚಿಸಿದೆ' ಎಂದು ಗರ್ಭಧಾರಣೆಯೊಂದರ ವೈದ್ಯರು ತಿಳಿಸಿದ್ದಾರೆ.
ಮಕ್ಕಳ ಭವಿಷ್ಯದ ಹಿತದೃಷ್ಟಿಯಿಂದ ಇಂತಹ ತಾಯ್ತನ ಒಪ್ಪಂದ ಅನೇಕ ಯುರೋಪ್ ರಾಷ್ಟ್ರಗಳಲ್ಲೂ ಕಾನೂನುಬಾಹಿರವಾಗಿದೆ. ಗಮನಾರ್ಹವೆಂದರೆ ಭಾರತದಲ್ಲಿಯೂ ಇದರ ಬಗ್ಗೆ ಯಾವುದೇ ಕಾನೂನು ಸ್ಪಷ್ಟವಾಗಿರಲಿಲ್ಲ. 2019ರಲ್ಲಿ ಲೋಕಸಭೆಯಲ್ಲಿ ಬಾಡಿಗೆ ತಾಯ್ತನ(ತಿದ್ದುಪಡಿ) ಮಸೂದೆ ಮಂಡನೆಯಾಗಿತ್ತು. ವಾಣಿಜ್ಯ ಉದ್ದೇಶಿತ ಬಾಡಿಗೆ ತಾಯ್ತನ ನಿಯಂತ್ರಿಸುವುದು, ಬಾಡಿಗೆ ತಾಯಂದಿರ ವೈದ್ಯಕೀಯ ವೆಚ್ಚ, ವಿಮೆ ಸೌಲಭ್ಯ ನೀಡುವುದು ಸರ್ಕಾರದ ಉದ್ದೇಶ. 2020ರ ತಿದ್ದುಪಡಿ ಮಸೂದೆ ಪ್ರಸ್ತುತ ಬಜೆಟ್ ಅಧಿವೇಶನದಲ್ಲಿ ಚರ್ಚೆಗೆ ಬರಲಿದೆ.
-
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ












Click it and Unblock the Notifications