ಕೇಂದ್ರದಿಂದ ಸಿಹಿ ಸುದ್ದಿ: 157 ಹೊಸ ನರ್ಸಿಂಗ್ ಕಾಲೇಜು ಸ್ಥಾಪನೆಗೆ ಸಂಪುಟ ಸಭೆ ಅನುಮೋದನೆ
ನವದೆಹಲಿ, ಏಪ್ರಿಲ್ 26: ಕೇಂದ್ರ ಸಚಿವ ಸಂಪುಟ ವೈದ್ಯಕೀಯ ನರ್ಸಿಂಗ್ ಕೋರ್ಸ್ ಮಾಡುವವರಿಗೆ ಸಿಹಿ ಸುದ್ದಿಯೊಂದನ್ನು ನೀಡಿದೆ. ಮುಂದಿನ ಎರಡೇ ವರ್ಷದಲ್ಲಿ ದೇಶಾದ್ಯಂತ ಒಟ್ಟು 157 ಸರ್ಕಾರಿ ವೈದ್ಯಕೀಯ ನರ್ಸಿಂಗ್ ಕಾಲೇಜುಗಳು ಸ್ಥಾಪನೆಯಾಗಲಿವೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಸಚಿವ ಸಂಪುಟ ಸಭೆಯಲ್ಲಿ ಬುಧವಾರ, ಬಹುಕೋಟಿ ರೂಪಾಯಿ ವೆಚ್ಚದದ 157 ಸರ್ಕಾರಿ ವೈದ್ಯಕೀಯ ನರ್ಸಿಂಗ್ ಕಾಲೇಜುಗಳು ಸ್ಥಾಪನೆಯ ಪ್ರಸ್ತಾವನೆಗೆ ಒಪ್ಪಿಗೆ ಸೂಚಿಸಿದೆ. ಈ ಕುರಿತು ಸಂಚಿವ ಸಂಪುಟ ಸಭೆಯ ನಂತರ ಕೇಂದ್ರ ಆರೋಗ್ಯ ಸಚಿವ ಮನ್ಸೂಖ್ ಮಾಂಡವೀಯ ಅವರೇ ಸ್ವತಃ ತಿಳಿಸಿದ್ದಾರೆ ಎಂದು ಎಎನ್ಐ ವರದಿ ಮಾಡಿದ್ದಾರೆ.

ಈ ಪ್ರಸ್ತಾವನೆಯಲ್ಲಿ ದೇಶದ ವಿವಿಧ ರಾಜ್ಯಗಳಲ್ಲಿ ನಿರ್ಮಿಸಲು ಉದ್ದೇಶಿಸಲಾಗಿದ್ದ 157 ಸರ್ಕಾರಿ ವೈದ್ಯಕೀಯ ನರ್ಸಿಂಗ್ ಕಾಲೇಜುಗಳು ಸ್ಥಳೀಯವಾಗಿ ಅಸ್ತಿತ್ವದಲ್ಲಿರುವ ವೈದ್ಯಕೀಯ ಕಾಲೇಜುಗಳ ಸಹಕಾರದೊಂದಿಗೆ ತಲೆ ಎತ್ತಲಿವೆ. ಒಟ್ಟು 1570 ಕೋಟಿ ರೂಪಾಯಿ ಯೋಜನೆ ಇದಾಗಿದ್ದು, ಕೇವಲ ಮುಂದಿನ 24 ತಿಂಗಳಲ್ಲಿ ಈ ಯೋಜನೆ ಸಾಕಾರಗೊಳ್ಳಲಿದೆ. ಈ ಯೋಜನೆಗೆ ಸದ್ಯ ಕೇಂದ್ರ ಸಚಿವ ಸಂಪುಟ ಸಭೆಯ ಅನುಮೋದನೆ ನೀಡಿದೆ ಎಂದು ಅವರು ಮಾಹಿತಿ ನೀಡಿದರು.
ವಾರ್ಷಿಕ 15,700 ವಿದ್ಯಾರ್ಥಿಗಳಿಗೆ ಅನುಕೂಲ
ಕೇಂದ್ರ ಸರ್ಕಾರದ ಈ ನಿರ್ಧಾರದಿಂದ ದೇಶದಲ್ಲಿ ಹೊಸ ಸರ್ಕಾರಿ ವೈದ್ಯಕೀಯ ನರ್ಸಿಂಗ್ ಕಾಲೇಜುಗಳು ಸ್ಥಾಪನೆಯಾಗುತ್ತವೆ. ಅದರಿಂದ ವಾರ್ಷಿಕವಾಗಿ 15,700 ವಿದ್ಯಾರ್ಥಿಗಳು ಕಲಿಯಲು ಅನುಕೂಲವಾಗಲಿದೆ. ಪ್ರತಿ ವರ್ಷ ಇಷ್ಟು ಪ್ರಮಾಣದ ವಿದ್ಯಾರ್ಥಿಗಳು ಪದವಿ ಪಡೆಯುವುದರಿಂದ ಆರೋಗ್ಯ ವಲಯಕ್ಕು ಬಲ ಬಂದಂತಾಗಲಿದೆ ಎಂದರು.
ಕೇವಲ ವಿದ್ಯಾರ್ಥಿಗಳು ತಮ್ಮಿಷ್ಟಿದ ನಸಿಂಗ್ ಕೋರ್ಸ್ ಪಡೆಯಲು ಅನುಕೂಲವಾಗಲೆಂದು ಸ್ಥಾಪಿಸುತ್ತಿಲ್ಲ. ಬದಲಾಗಿ ಹೆಚ್ಚು ಹೆಚ್ಚು ವಿದ್ಯಾರ್ಥಿಗಳಿಗೆ ಗುಣಮಟ್ಟದ ವೃತ್ತಿಪರ ಶಿಕ್ಷಣ ನೀಡುವ ಉದ್ದೇಶ ಸರ್ಕಾರದ್ದಾಗಿದೆ. ಇದಕ್ಕೆ ಸ್ಥಳೀಯ ಲಭ್ಯ ಮೂಲ ಸಂಪನ್ಮೂಲಗಳನ್ನು ಬಳಸಿಕೊಳ್ಳಲಾಗುವುದು.

ಈ 157 ಹೊಸ ಕಾಲೇಜು ಸ್ಥಾಪನೆಗೆ ಅನುಮೋದನೆ ನೀಡಿರುವ ಕೇಂದ್ರ ಸಚಿವ ಸಂಪುಟ ಸಭೆಯ ಅದರೊಂದಿಗೆ ವೈದ್ಯಕೀಯ ಸಾಧನಗಳ ವಲಯದ ನೀತಿಗೂ ಸಂಪುಟ ಅನುಮೋದನೆ ನೀಡಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸೂಖ್ ಮಾಂಡವೀಯ ಅವರು ಹೇಳಿದರು.
-
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್: ಶಾಂತಿ ಸ್ಥಾಪನೆಗೆ ಭಾರತದ ಬೆಂಬಲ, ಮಹತ್ವ ಮಾತುಕತೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ












Click it and Unblock the Notifications