ಓಲಾ ಮಾದರಿಯಲ್ಲಿ ಕೇಂದ್ರ ಸರ್ಕಾರದಿಂದ ಟ್ಯಾಕ್ಸಿ ಸೇವೆ, ವಿವರ
ನವದೆಹಲಿ, ಮಾರ್ಚ್ 27: ಖಾಸಗಿ ಕಂಪನಿಗಳ ಅಪ್ಲಿಕೇಶನ್ ಆಧಾರಿತ ಟ್ಯಾಕ್ಸಿ ಸೇವೆಗಳು ಜನರನ್ನು ಸುಲಿಗೆ ಮಾಡುತ್ತವೆ ಎಂಬ ಆರೋಪಗಳಿವೆ. ಈ ಹಿನ್ನಲೆಯಲ್ಲಿ ವಿವಿಧ ನಗರದಲ್ಲಿ ಹಲವು ಬಾರಿ ಟ್ಯಾಕ್ಸಿ ಚಾಲಕರು, ಪ್ರಯಾಣಿಕರ ನಡುವೆ ಮಾತಿನ ಚಕಮಕಿ ನಡೆಯುತ್ತದೆ. ಈಗ ಕೇಂದ್ರ ಸರ್ಕಾರ ಟ್ಯಾಕ್ಸಿ ಸೇವೆಯನ್ನು ಆರಂಭಿಸಲು ತೀರ್ಮಾನಿಸಿದೆ. ಈ ಕುರಿತು ಲೋಕಸಭೆಯಲ್ಲಿ ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಮಾಹಿತಿ ನೀಡಿದ್ದಾರೆ.
ಲೋಕಸಭೆ ಕಲಾಪದಲ್ಲಿ ಮಾತನಾಡಿದ ಅಮಿತ್ ಶಾ, ಭಾರತದ ಮೊದಲ ಸಹಕಾರಿ ವಿಶ್ವವಿದ್ಯಾಲಯ ಸ್ಥಾಪನೆ, ಶೀಘ್ರದಲ್ಲಿಯೇ 'ಸಹಕಾರಿ ಟ್ಯಾಕ್ಸಿ' ಸೇವೆಯನ್ನು ಆರಂಭಿಸಲಾಗುತ್ತದೆ ಎಂದು ಹೇಳಿದರು. ಓಲಾ ಮತ್ತು ಉಬರ್ ಮಾದರಿಯಲ್ಲಿಯೇ ಸಹಕಾರಿ ಟ್ಯಾಕ್ಸಿಗಳು ಕಾರ್ಯ ನಿರ್ವಹಣೆ ಮಾಡಲಿವೆ.

ಈ ಟ್ಯಾಕ್ಸಿ ಸೇವೆಯಿಂದ ಚಾಲಕರಿಗೆ ಅನುಕೂಲವಾಗಲಿದೆ. ಈ ಟ್ಯಾಕ್ಸಿ ಸೇವೆಯಲ್ಲಿ ಆಟೋ, ಬೈಕ್ ಮತ್ತು ಕಾರುಗಳು ಸೇರಿರಲಿವೆ ಎಂದು ಅಮಿತ್ ಶಾ ವಿವರಣೆ ನೀಡಿದ್ದಾರೆ. ಸಹಕಾರಿ ಟ್ಯಾಕ್ಸಿ ಸೇವೆಯಿಂದ ಬರುವ ಲಾಭ ಯಾವುದೇ ಖಾಸಗಿ ವ್ಯಕ್ತಿಗೆ ಹೋಗುವುದಿಲ್ಲ. ನೇರವಾಗಿ ಇದು ಚಾಲಕನ ಕೈ ಸೇರಲಿದೆ ಎಂದು ಸಚಿವರು ಸ್ಪಷ್ಟಪಡಿಸಿದರು.
ಸಹಕಾರಿ ಟ್ಯಾಕ್ಸಿ ಸೇವೆ: ಅಮಿತ್ ಶಾ ಲೋಕಸಭೆಯಲ್ಲಿ ತ್ರಿಭುವನ್ ಸಹಕಾರಿ ವಿಶ್ವವಿದ್ಯಾಲಯ ಸ್ಥಾಪನೆ ಕುರಿತ ಮಸೂದೆಯ ಮೇಲೆ ಮಾತನಾಡುವಾಗ 'ಸಹಕಾರಿ ಟ್ಯಾಕ್ಸಿ' ಕುರಿತು ವಿಷಯವನ್ನು ಪ್ರಸ್ತಾಪಿಸಿದರು. ಓಲಾ ಮತ್ತು ಉಬರ್ ಮಾದರಿಯಲ್ಲಿಯೇ ಸಹಕಾರಿ ಟ್ಯಾಕ್ಸಿಗಳು ಕಾರ್ಯ ನಿರ್ವಹಿಸಲಿವೆ ಎಂದರು.
ಆದರೆ ಸಹಕಾರಿ ಟ್ಯಾಕ್ಸಿ ಸೇವೆ ಎಲ್ಲಿ ಮೊದಲು ಪ್ರಾರಂಭವಾಗಲಿದೆ?, ಇದರ ಸೇವೆ ಹೇಗಿರಲಿದೆ? ಎಂಬ ಬಗ್ಗೆ ಇನ್ನೂ ಸಹ ಖಚಿತವಾದ ಮಾಹಿತಿ ಸಿಕ್ಕಿಲ್ಲ. ತ್ರಿಭುವನ್ ಸಹಕಾರಿ ವಿಶ್ವವಿದ್ಯಾಲಯ ಮಸೂದೆ ಅಂಗೀಕಾರವಾದರೆ ಅದರಲ್ಲಿ ಈ ಟ್ಯಾಕ್ಸಿ ಸೇವೆ ಕುರಿತು ಹೆಚ್ಚಿನ ಮಾಹಿತಿಯನ್ನು ನಿರೀಕ್ಷೆ ಮಾಡಲಾಗಿದೆ.
ರಾಷ್ಟ್ರೀಯ ಮಟ್ಟದಲ್ಲಿಯೇ 'ಸಹಕಾರಿ ಟ್ಯಾಕ್ಸಿ' ಸೇವೆಯನ್ನು ಆರಂಭಿಸಲಾಗುತ್ತದೆ. ಈ ಟ್ಯಾಕ್ಸಿ ಸೇವೆಯಲ್ಲಿ ಆಟೋ, ಬೈಕ್ ಮತ್ತು ಕಾರುಗಳು ಸೇರಿವೆ ಎಂದು ಸಚಿವರು ಲೋಕಸಭೆಯಲ್ಲಿ ವಿವರಣೆಯನ್ನು ನೀಡಿದ್ದಾರೆ.
ಗುಜರಾತ್ ರಾಜ್ಯದಲ್ಲಿ ದೇಶದ ಮೊದಲ ತ್ರಿಭುವನ್ ಸಹಕಾರಿ ವಿಶ್ವವಿದ್ಯಾಲಯ ಸ್ಥಾಪನೆ ಮಾಡಲಾಗುತ್ತದೆ ಎಂದು ಅಮಿತ್ ಶಾ ವಿವರಣೆ ನೀಡಿದ್ದಾರೆ. ಗುಜರಾತ್ ರಾಜ್ಯ ಸರ್ಕಾರ ವಿವಿ ಸ್ಥಾಪನೆಗೆ ಭೂಮಿಯನ್ನು ನೀಡಿದೆ. ವಿಶ್ವವಿದ್ಯಾಲಯ ಗುಜರಾತ್ನಲ್ಲಿದ್ದರೂ ಕಾರ್ಯ ಕ್ಷೇತ್ರ ಇಡೀ ದೇಶದಲ್ಲಿ ಇರಲಿದೆ ಎಂದು ಸಚಿವರು ಸ್ಪಷ್ಟಪಡಿಸಿದರು.
ಸಹಕಾರಿ ವಿಶ್ವವಿದ್ಯಾಲಯ ಡಿಪ್ಲೊಮಾ, ಪದವಿ, ಪಿಎಚ್ಡಿ, ಸರ್ಟಿಫಿಕೇಟ್ ಕೋರ್ಸ್ಗಳನ್ನು ನೀಡಲಿದೆ. ವಾರ್ಷಿಕ 8 ಲಕ್ಷ ವಿದ್ಯಾರ್ಥಿಗಳು ವ್ಯಾಸಂಗ ಮಾಡುವಂತೆ ವಿವಿಯನ್ನು ನಿರ್ಮಾಣ ಮಾಡಲಾಗುತ್ತದೆ ಎಂದು ಅಮಿತ್ ಶಾ ಹೇಳಿದ್ದಾರೆ.
ಲೋಕಸಭೆಯಲ್ಲಿ ಅಮಿತ್ ಶಾ ದೇಶದಲ್ಲಿ ಸಹಕಾರಿ ಸಂಸ್ಥೆ ವೇಗವಾಗಿ ಅಭಿವೃದ್ಧಿ ಹೊಂದುತ್ತಿವೆ. ಆದ್ದರಿದ ಈ ಮಾದರಿ ವಿಶ್ವವಿದ್ಯಾಲಯಗಳು ಅಗತ್ಯವಾಗಿವೆ. ಈ ವಿವಿಯಲ್ಲಿ ತರಬೇತಿ ಪಡೆದವರ ಅಗತ್ಯವಿದೆ. ಸಹಕಾರಿ ಸಂಸ್ಥೆಗಳ ಅಗತ್ಯಗಳಿವೆ ಅನುಗುಣವಾಗಿ ವಿವಿಯಲ್ಲಿ ವಿವಿಧ ಕೋರ್ಸ್ಗಳನ್ನು ವಿನ್ಯಾಸಗೊಳಿಸಲಾಗುತ್ತದೆ ಎಂದರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications