ದೇಶದಲ್ಲಿ ಕೋವಿಡ್ ಲಸಿಕೆಗೆ ಕೊರತೆ ಉಂಟಾಗಿಲ್ಲ: ಕೇಂದ್ರ ಸರ್ಕಾರ
ನವದೆಹಲಿ, ಏಪ್ರಿಲ್ 7: ಕೋವಿಡ್-19 ಲಸಿಕೆಗಳು ಖಾಲಿಯಾಗುತ್ತಿದ್ದು, ಕೆಲವೇ ದಿನಗಳಲ್ಲಿ ಕೊರತೆ ಸನ್ನಿವೇಶ ಎದುರಾಗುವ ಸಾಧ್ಯತೆ ಇದೆ. ಹೀಗಾಗಿ ಸಾಕಷ್ಟು ಪ್ರಮಾಣದಲ್ಲಿ ಲಸಿಕೆಗಳನ್ನು ರವಾನಿಸುವಂತೆ ಕೇಂದ್ರ ಸರ್ಕಾರವನ್ನು ಮಹಾರಾಷ್ಟ್ರ ಮತ್ತು ಆಂಧ್ರಪ್ರದೇಶ ಸರ್ಕಾರಗಳು ಕೋರಿಕೊಂಡಿವೆ. ಈ ಹಿನ್ನೆಲೆಯಲ್ಲಿ ದೇಶದಲ್ಲಿನ ಕೊರೊನಾ ವೈರಸ್ ಲಸಿಕೆ ಸಂಗ್ರಹದಲ್ಲಿ ಕೊರತೆ ಉಂಟಾಗಿದೆಯೇ ಎಂಬು ಅನುಮಾನ ವ್ಯಕ್ತವಾಗಿದ್ದು, ಅದನ್ನು ಕೇಂದ್ರ ಸರ್ಕಾರ ತಳ್ಳಿಹಾಕಿದೆ.
ಎಲ್ಲ ರಾಜ್ಯಗಳಿಗೂ ಅವುಗಳಿಗೆ ಅಗತ್ಯವಿರುವಷ್ಟು ಪ್ರಮಾಣದಲ್ಲಿ ಲಸಿಕೆ ಲಭ್ಯವಾಗಲಿದೆ ಎಂದು ತಿಳಿಸಲಾಗಿದೆ. ಯಾವುದೇ ರಾಜ್ಯ ಲಸಿಕೆ ಕೊರತೆ ಎದುರಿಸಲು ಕೇಂದ್ರ ಸರ್ಕಾರ ಬಿಡುವುದಿಲ್ಲ ಎಂದು ಆರೋಗ್ಯ ಸಚಿವ ಹರ್ಷವರ್ಧನ್ ತಿಳಿಸಿದ್ದಾರೆ.
'ನಮ್ಮಲ್ಲಿ 14 ಲಕ್ಷ ಡೋಸ್ನಷ್ಟು ಲಸಿಕೆ ಮಾತ್ರ ಉಳಿದಿದ್ದು, ಅದು ಮೂರು ದಿನಗಳಿಗಷ್ಟೇ ಸಾಲುತ್ತದೆ. ನಮಗೆ ಪ್ರತಿ ವಾರ 40 ಲಕ್ಷ ಡೋಸ್ನಷ್ಟು ಲಸಿಕೆಯ ಸಂಗ್ರಹದ ಅಗತ್ಯವಿದೆ. ಈಗಾಗಲೇ ಲಸಿಕೆ ಇಲ್ಲದೆ ಕೆಲವು ಲಸಿಕೆ ಕೇಂದ್ರಗಳನ್ನು ಸ್ಥಗಿತಗೊಳಿಸಲಾಗಿದೆ. ಬಾಕಿ ಉಳಿದ ಲಸಿಕೆಗಳು ಮುಗಿದರೆ ರಾಜ್ಯದಲ್ಲಿ ಲಸಿಕೆ ಕಾರ್ಯಕ್ರಮವೇ ನಿಂತುಹೋಗಲಿದೆ. ಈ ಬಗ್ಗೆ ಕೇಂದ್ರ ಆರೋಗ್ಯ ಸಚಿವರೊಂದಿಗೆ ನಡೆದ ಸಭೆಯಲ್ಲಿ ಕಳವಳ ಹಂಚಿಕೊಳ್ಳಲಾಗಿದೆ' ಎಂದು ಮಹಾರಾಷ್ಟ್ರ ಆರೋಗ್ಯ ಸಚಿವ ರಾಜೇಶ್ ತೋಪೆ ತಿಳಿಸಿದ್ದರು.

ಇದಕ್ಕೆ ಪ್ರತಿಕ್ರಿಯೆ ನೀಡಿರುವ ಹರ್ಷವರ್ಧನ್, ಮಂಗಳವಾರ ನಡೆದ ಸಭೆಯಲ್ಲಿ ಅವರ ಕಳವಳವನ್ನು ಪರಿಗಣಿಸಲಾಗಿದೆ. ಯಾವುದೇ ರಾಜ್ಯವು ಲಸಿಕೆ ಕೊರತೆ ಎದುರಿಸುವುದಿಲ್ಲ. ಕೊರತೆ ಉಂಟಾಗಲು ನಾವು ಅವಕಾಶ ನೀಡುವುದಿಲ್ಲ. ಪ್ರತಿ ರಾಜ್ಯಕ್ಕೂ ಅವುಗಳ ಅಗತ್ಯಕ್ಕೆ ಅನುಗುಣವಾಗಿ ಲಸಿಕೆಗಳನ್ನು ಪೂರೈಕೆ ಮಾಡಲಾಗುತ್ತಿದೆ ಎಂದಿದ್ದಾರೆ.
-
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ












Click it and Unblock the Notifications