ಝಿಕಾ ವೈರಾಣು ತಡೆಗೆ ಕೇಂದ್ರದ ಮಾರ್ಗಸೂಚಿ
ನವದೆಹಲಿ, ಫೆಬ್ರವರಿ 02 : ಝಿಕಾ ವೈರಾಣು ಜಾಗತಿಕ ಆತಂಕ ಸೃಷ್ಟಿಸುತ್ತಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಮಂಗಳವಾರ ಘೋಷಿಸಿರುವ ಹಿನ್ನೆಲೆಯಲ್ಲಿ, ಝಿಕಾ ವೈರಾಣು ಹರಡುವುದನ್ನು ತಡೆಗಟ್ಟಲು ಕೇಂದ್ರ ಸರಕಾರ ಮಾರ್ಗದರ್ಶಿಯನ್ನು ಬಿಡುಗಡೆ ಮಾಡಿದೆ.
2015ರಲ್ಲಿ ದಕ್ಷಿಣ ಅಮೆರಿಕಾ ಖಂಡದ ಬ್ರಜಿಲ್ ನಲ್ಲಿ ಮೊದಲು ಕಾಣಿಸಿಕೊಂಡ ಝಿಕಾ ವೈರಸ್ ಈಗಾಗಲೆ 24 ರಾಷ್ಟ್ರಗಳಲ್ಲಿ ತನ್ನ ಅಸ್ತಿತ್ವವನ್ನು ಕಂಡುಕೊಂಡಿದೆ. ಭಾರತಕ್ಕೆ ಅಧಿಕೃತವಾಗಿ ಈ ಸೋಂಕು ಕಂಡುಬರದಿದ್ದರೂ ಎಚ್ಚರಿಕೆಯಿಂದ ಇರಬೇಕು ಮತ್ತು ತಡೆಗಟ್ಟಲು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆರೋಗ್ಯ ಸಚಿವಾಲಯ ತಿಳಿಸಿದೆ.
ಸೋಂಕು ತಗುಲಿದ ಸೊಳ್ಳೆ ಕಡಿತದಿಂದ ಹಬ್ಬುವ ಈ ರೋಗ ಡೆಂಗ್ಯೂ ಮತ್ತು ಚಿಕೂನ್ಗೂನ್ಯಾದೊಂದಿಗೆ ಸಾಮ್ಯತೆ ಹೊಂದಿದೆ. ಇದರಿಂದ ಸಾವು ಸಂಭವಿಸದಿದ್ದರೂ ಜಾಗತಿಕವಾಗಿ ಹಾವಳಿ ಎಬ್ಬಿಸುತ್ತಿರುವುದು ಖಚಿತವಾಗಿದೆ. ಸದ್ಯಕ್ಕೆ ಈ ಸೋಂಕಿಗೆ ಯಾವುದೇ ನಿಖರವಾದ ಚಿಕಿತ್ಸೆ ಅಥವಾ ಔಷಧಿ ಕಂಡುಹಿಡಿದಿರದಿರುವುದು ತಲೆನೋವಾಗಿ ಪರಿಣಮಿಸಿದೆ. [ಝಿಕಾ ವೈರಾಣು ಪತ್ತೆ ಕಿಟ್ ಗಾಗಿ ಮನವಿ: ಖಾದರ್]

ಜಿಕಾ ವೈರಾಣಿ ತಡೆಗೆ ಕೇಂದ್ರದ ಮಾರ್ಗದರ್ಶಿ
* ಈ ರೋಗ ಗರ್ಭಿಣಿಯರಿಗೆ ತಗಲುತ್ತಿರುವ ಹಿನ್ನೆಲೆಯಲ್ಲಿ ಗರ್ಭಿಣಿಯರು ಸೋಂಕು ತಗುಲಿದ ದೇಶಕ್ಕೆ ಅಥವಾ ಪ್ರದೇಶಕ್ಕೆ ಪ್ರಯಾಣಿಸುವುದನ್ನು ಮುಂದೂಡಬೇಕು ಅಥವಾ ಕ್ಯಾನ್ಸಲ್ ಮಾಡಬೇಕು.
* ಈ ರೋಗದ ಲಕ್ಷಣಗಳ ಬಗ್ಗೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ಬಂದರುಗಳಲ್ಲಿ ವಿವರಣೆ ನೀಡಿರಬೇಕು. [ಡೆಂಗ್ಯೂ ತಡೆಗೆ ಯಾವ ಮುಂಜಾಗ್ರತಾ ಕ್ರಮ ಬೇಕು?]
* ಸೋಂಕು ತಗುಲಿದ ದೇಶದಿಂದ ಮರಳುವವರು ಮತ್ತು ಸೋಂಕಿಗೆ ತುತ್ತಾದವರು ಕೂಡಲೆ ಕಸ್ಟಮ್ಸ್ ಅಧಿಕಾರಿಗಳಿಗೆ ವರದಿ ಮಾಡಬೇಕು.
* ಆರೋಗ್ಯ ಸೇವಾ ಮಹಾ ನಿರ್ದೇಶನಾಲಯದ ಅಡಿಯಲ್ಲಿ ತಂಡವನ್ನು ಕಟ್ಟಲಾಗಿದ್ದು, ಪರಿಸ್ಥಿತಿಯ ಅಧ್ಯಯನ ನಡೆಸಲು ಸೂಚಿಸಲಾಗಿದೆ. ಈ ಕುರಿತು ಸಂಶೋಧನೆ ನಡೆಸಲು ಮತ್ತು ತಕ್ಕ ಕ್ರಮ ತೆಗೆದುಕೊಳ್ಳಲು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಗೂ ತಿಳಿಸಲಾಗಿದೆ.
* ಅಲ್ಲದೆ, ಎಪಿಡಮಿಯಾಲಜಿಸ್ಟ್ ಅಥವಾ ಸಾರ್ವಜನಿಕ ಆರೋಗ್ಯ ತಜ್ಞ, ಮೈಕ್ರೊಬಯಾಲಜಿಸ್ಟ್ ಮತ್ತು ವೈದ್ಯಕೀಯ ತಜ್ಞರನ್ನೊಳಗೊಂಡ ತಂಡ ಕಟ್ಟಿ, ಝಿಕಾ ವೈರಾಣು ಹರಡದಂತೆ ಕ್ರಮ ತೆಗೆದುಕೊಳ್ಳಬೇಕೆಂದು ಪ್ರತಿ ರಾಜ್ಯಗಳಿಗೆ ಸೂಚಿಸಿದೆ.
* ಈ ರೋಗದಿಂದ ಸಾವು ಸಂಭವಿಸದಿದ್ದರೂ, ಸೋಂಕು ತಗುಲಿದ ತಾಯಂದಿರಿಗೆ ಹುಟ್ಟುವ ಮಕ್ಕಳಲ್ಲಿ ನರದೌರ್ಬಲ್ಯ ಕಂಡುಬಂದಿದ್ದು, ಸಹಜಕ್ಕಿಂತ ತಲೆ ಚಿಕ್ಕದಿರುವ ಮಕ್ಕಳು ಹುಟ್ಟುತ್ತಿರುವುದು ಕಂಡುಬಂದಿದೆ. ಈ ಕಾರಣದಿಂದಾಗಿ ಗರ್ಭಿಣಿಯರು ಹೆಚ್ಚು ಎಚ್ಚರದಿಂದ ಇರಬೇಕೆಂದು ಸೂಚನೆ ನೀಡಲಾಗಿದೆ.
-
ಶಾಲಾ ಮಕ್ಕಳ ಮೊಬೈಲ್ ಬಳಕೆ ನಿರ್ಬಂಧ: 'ಡಿಜಿಟಲ್ ಕರಡು ನೀತಿ' ಬಿಡುಗಡೆಗೊಳಿಸಿದ ರಾಜ್ಯ ಸರ್ಕಾರ -
Vastu Tips for Kitchen: ವಾಸ್ತು ಪ್ರಕಾರ ಅಡುಗೆ ಮನೆಯಲ್ಲಿ ಇವು ಇರಬಾರದು.. ಒಮ್ಮೆ ನೋಡಿ! -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ











Click it and Unblock the Notifications