ಚೀನಾದಲ್ಲಿ ಮತ್ತೆ ಹೆಚ್ಚಾಯ್ತು ಅನಾರೋಗ್ಯ: ಭಾರತದ ರಾಜ್ಯಗಳಿಗೆ ನೀಡಿದ ಸೂಚನೆಗಳೇನು?
ಬೆಂಗಳೂರು, ನವೆಂಬರ್ 26: ಚೀನಾದಲ್ಲಿ ಉಸಿರಾಟ ಸಮಸ್ಯೆಯಂತಹ ಅನಾರೋಗ್ಯ ಪ್ರಕರಣಗಳು ವರದಿ ಆಗುತ್ತಲೇ ಇವೆ. ಈ ಸಂಬಂಧ ಭಾರತೀಯ ಅರೋಗ್ಯ ಸಚಿವಾಯವು ಇನ್ಫ್ಲುಯೆಂಜಾ ನಂತಹ ಅನಾರೋಗ್ಯ (ILI) ಮತ್ತು ತೀವ್ರ ಉಸಿರಾಟದ ಕಾಯಿಲೆ (SARI) ಪ್ರವೃತ್ತಿ ಕುರಿತು ನಿಗಾ ಇಡುವ ವಿಶೇಷವಾಗಿ ಮಕ್ಕಳು ಮತ್ತು ಹದಿಹರೆಯದವರ ಕಣ್ಗಾವಲು ಘಟಕಗಳನ್ನು ನಿಕಟವಾಗಿ ಮೇಲ್ವಿಚಾರಣೆ ಮಾಡುವಂತೆ ಭಾನುವಾರ ಎಲ್ಲ ರಾಜ್ಯ ಸರ್ಕಾರಗಳಿಗೆ ನಿರ್ದೇಶನ ನೀಡಿದೆ.
ಕಳೆದ ಕೆಲವು ವಾರಗಳಲ್ಲಿ ಉತ್ತರ ಚೀನಾದಲ್ಲಿ ಮಕ್ಕಳಲ್ಲಿ ಉಸಿರಾಟದ ಕಾಯಿಲೆಯು ಉಲ್ಬಣಗೊಂಡಿದೆ. ಚೀನಾದಲ್ಲಿ ವಿಶೇಷವಾಗಿ ಮಕ್ಕಳು ಮತ್ತು ಹದಿಹರೆಯದವರಿಗೆ, ಉಸಿರಾಟದಲ್ಲಿ ಏರುಪೇರು ಕಾಣಿಸಿಕೊಂಡಿದೆ. ಇದರ ಬೆನ್ನಲ್ಲೆ ಎಚ್ಚೆತ್ತುಕೊಂಡಿರುವ ಭಾರತ ILI/SARI ಹೊಂದಿರುವ ರೋಗಿಗಳ ಮೂಗು ಮತ್ತು ಗಂಟಲಿನ ಸ್ವ್ಯಾಬ್ ಮಾದರಿಗಳ ಪರೀಕ್ಷಿಸಲು ರಾಜ್ಯಗಳಲ್ಲಿರುವ ವೈರಸ್ ಸಂಶೋಧನೆ ಮತ್ತು ರೋಗನಿರ್ಣಯದ ಪ್ರಯೋಗಾಲಯಗಳಿಗೆ ಕಳುಹಿಸುವಂತೆ ಸೂಚನೆ ನೀಡಿದೆ.

ಕೇಂದ್ರ ಆರೋಗ್ಯ ಸಚಿವಾಲಯವು ತನ್ನ ನಿರ್ದೇಶನದ ಪತ್ರದಲ್ಲಿ, ಸಾರ್ವಜನಿಕ ಆರೋಗ್ಯ ಮತ್ತು ಆಸ್ಪತ್ರೆಯ ಸನ್ನದ್ಧತೆಯ ಕ್ರಮಗಳನ್ನು ತಕ್ಷಣವೇ ಪರಿಶೀಲಿಸುವಂತೆ ತಿಳಿಸಿದೆ. ಆಸ್ಪತ್ರೆಯ ಹಾಸಿಗೆಗಳು, ಇನ್ಫ್ಲುಯೆಂಜಾಕ್ಕೆ ಔಷಧಗಳು ಮತ್ತು ಲಸಿಕೆಗಳ ಲಭ್ಯತೆ, ವೈದ್ಯಕೀಯ ಆಮ್ಲಜನಕ, ಪ್ರತಿಜೀವಕಗಳು, ವೈಯಕ್ತಿಕ ರಕ್ಷಣಾ ಸಾಧನಗಳು, ಪರೀಕ್ಷಾ ಕಿಟ್ಗಳು ಮತ್ತು ಕಾರಕಗಳು, ಆಮ್ಲಜನಕ ಸಸ್ಯಗಳು ಮತ್ತು ವೆಂಟಿಲೇಟರ್ಗಳ ಕಾರ್ಯನಿರ್ವಹಣೆ, ಆರೋಗ್ಯ ಸೌಲಭ್ಯಗಳಲ್ಲಿ ಸೋಂಕು ನಿಯಂತ್ರಣ ಅಭ್ಯಾಸಗಳು ಮೇಲ್ವಿಚಾರಣೆ ಮಾಡಲು ಸೂಚಿಸಿದೆ.
ಕೋವಿಡ್ ಮಾರ್ಗಸೂಚಿ ತರಲು ಚಿಂತನೆ
ದೇಶದ ಕೇಂದ್ರಾಡಳಿತ ಪ್ರದೇಶಗಳು ಸೇರಿದಂತೆ ಎಲ್ಲ ರಾಜ್ಯಗಳಲ್ಲಿ ಕೊರೊನಾ ವೇಳೆ ಜಾರಿಗೆ ತಂದಿದ್ದ ಪರಿಷ್ಕೃತ ಕಣ್ಗಾವಲು ಕಾರ್ಯತಂತ್ರ, ಮಾರ್ಗಸೂಚಿಗಳನ್ನು ಜಾರಿಗೆ ತರಲು ಚಿಂತನೆ ನಡೆಸಿದೆ. ಇದರಿಂದ ಐಎಲ್ಐ ಮತ್ತು ಸಾರಿ ಪ್ರಕರಣ ವರದಿ ಆಗದಂತೆ ಎಚ್ಚರಿಕೆ ವಹಿಸುತ್ತಿದೆ.
ಸದ್ಯ ಚಳಿಗಾಳ ಸಂದರ್ಭದಲ್ಲಿ ನಾವು ಇರುವುದರಿಂದ ಇನ್ಫ್ಲುಯೆನ್ಸ ಹರಡದಂತೆ ಹೆಚ್ಚು ಗಮನವಹಿಸಬೇಕಾಗಿದೆ. ಇದು ಉಸಿರಾಟದ ಕಾಯಿಲೆಯ ಪ್ರಕರಣಗಳಲ್ಲಿ ಹೆಚ್ಚಳಕ್ಕೆ ಕಾರಣವಾಗುತ್ತದೆ. ಭಾರತ ಸರ್ಕಾರವು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದು, ಆತಂಕ ಪಡುವ ಅಗತ್ಯವಿಲ್ಲ ಎಚ್ಚರಿಕೆ ಅಗತ್ಯ. ಅನಾರೋಗ್ಯದ ಸ್ಥಿತಿ ಎದುರಾದರೆ ಸಿದ್ಧತೆ ಮುಖ್ಯ ಎಂದು ಆರೋಗ್ಯ ಸಚಿವಾಲಯದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ILI/SARI ಪ್ರಕರಣ ಅಪ್ಲೋಡ್ಗೆ ಸೂಚನೆ
ಒಂದು ವೇಳೆ ನಿಮ್ಮ ನಿಮ್ಮ ರಾಜ್ಯಗಳಲ್ಲಿ ILI/SARI ಪ್ರಕರಣಗಳು ವರದಿ ಆದರೆ ಅದನ್ನು ವಿಶೇಷವಾಗಿ ವೈದ್ಯಕೀಯ ಕಾಲೇಜು ಆಸ್ಪತ್ರೆಗಳು ಸೇರಿದಂತೆ ಸಾರ್ವಜನಿಕ ಆರೋಗ್ಯ ಸಂಸ್ಥೆಗಳಿಂದ ಕೇಂದ್ರ 'ಪೋರ್ಟಲ್'ನಲ್ಲಿ ಅಪ್ಲೋಡ್ ಮಾಡುವಂತೆ ಸಚಿವಾಲಯ ತನ್ನ ಪತ್ರದಲ್ಲಿ ಉಲ್ಲೇಖಿಸಿದೆ.
ಚೀನಾದ ಉತ್ತರ ಭಾಗಗಳಲ್ಲಿ ಉಸಿರಾಟದ ಕಾಯಿಲೆಗೆ ತುತ್ತಾಗಿರುತ್ತಿವವರ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ (WHO) ಹಂಚಿಕೊಂಡ ಮಾಹಿತಿ ನೀಡಿದೆ. ಇದಕ್ಕೆ ಇನ್ಫ್ಲುಯೆನ್ಸ, ಮೈಕೋಪ್ಲಾಸ್ಮಾ ನ್ಯುಮೋನಿಯಾ, ಸಾರ್ಸ್ ವೈರಸ್ ಗಳು ಕಾರಣ ಎಂದು ತಿಳಿಸಿದೆ.
ಚೀನಾದ ಸ್ಥಿತಿಗತಿ ಕುರಿತು ಮಾಹಿತಿ ಕೇಳಿದ ಭಾರತ
ವಿಶ್ವಸಂಸ್ಥೆ (WHO) ಹೇಳುವ ಪ್ರಕಾರ, ಮೈಕೋಪ್ಲಾಸ್ಮಾ ನ್ಯುಮೋನಿಯಾದಂತಹ ಉಸಿರಾಟಕ್ಕೆ ತೊಂದರೆ ಉಂಟು ಮಾಡು ಕಾಯಿಲೆಗಳು ಚಳಿಗಾಲದ ಸಂದರ್ಭದಲ್ಲಿ ಹೆಚ್ಚಾಗುತ್ತವೆ. ಈ ಅನಾರೋಗ್ಯ ಹರುಡುವಿಕೆ, ಲಕ್ಷಣ, ಹೊಸತೇನಾದರೂ ಕಂಡು ಕೊಳ್ಳುವ ದೃಷ್ಟಿಯಿಂದ ಭಾರತ ಆರೋಗ್ಯಾಧಿಕಾರಿಗಳು ಚೀನೀ ಅಧಿಕಾರಿಗಳಿಂದ ಹೆಚ್ಚುವರಿ ಮಾಹಿತಿ ಕೇಳಿದೆ. ದೇಶದ ಜನರು ಆರೋಗ್ಯ ವಿಚಾರದಲ್ಲಿ ಆತಂಕ ಪಡುವ ಅಗತ್ಯವಿಲ್ಲ ಎಂದು ಸಚಿವಾಲಯ ಅಭಯ ನೀಡಿದೆ.
-
ಮಾರ್ನಿಂಗ್ ವಾಕ್ vs ಈವಿನಿಂಗ್ ವಾಕ್: ಯಾವುದು ಉತ್ತಮ? -
ಮನೆಯಲ್ಲಿ ಕಸದ ಬುಟ್ಟಿ ಎಲ್ಲಿ ಇಡಬೇಕು? ಈ ವಾಸ್ತು ನಿಯಮಗಳು ತಿಳಿದುಕೊಳ್ಳಿ -
ವಾಸ್ತು ಅನುಸರಿಸುವುದು ಏಕೆ ಮುಖ್ಯ? ತಿಳಿಯಿರಿ ಕಾರಣಗಳು -
Pomegranate Juice Benefits: 6 ದಿನಗಳಲ್ಲಿ ಕಾಣುವ ಆರೋಗ್ಯ ಬದಲಾವಣೆಗಳು -
ಮುದ್ದೇನಹಳ್ಳಿಯಲ್ಲಿ ಪೋಷಕರ ಹರ್ಷ: 27 ಮಕ್ಕಳಿಗೆ ಹೊಸ ಬದುಕು ನೀಡಿದ ಉಚಿತ ಹೃದಯ ಚಿಕಿತ್ಸೆ ಶಿಬಿರ -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ












Click it and Unblock the Notifications