5ಲಕ್ಷ ತೆರಿಗೆ ಮಿತಿ ಏರಿಕೆ: ವಿಧಿಯಿಲ್ಲದೆ 1ನಿಮಿಷ ಬಜೆಟ್ ಭಾಷಣ ನಿಲ್ಲಿಸಿದ ಪಿಯೂಶ್
ಚುನಾವಣೆ ಹತ್ತಿರ ಬರುತ್ತಿರುವುದರಿಂದ ಯಾವುದೇ ಪಕ್ಷದ ಸರಕಾರ ಇದ್ದರೂ ಜನಪರ ಬಜೆಟ್ ಮಂಡಿಸುವುದು ಸಾಮಾನ್ಯ. ಅಂತೆಯೇ, ನರೇಂದ್ರ ಮೋದಿ ಸರಕಾರ ಕೂಡಾ ಅದನ್ನೇ ಮಾಡಿದೆ. ಅದರಲ್ಲಿ ಪ್ರಮುಖವಾದದ್ದು, ತೆರಿಗೆ ಮಿತಿ ಏರಿಕೆ.
ಇದನ್ನು ಕುಮಾರಸ್ವಾಮಿ ಬಾಂಬೆ ಮಿಠಾಯಿ ಎಂದಾದರೂ ಹೇಳಲಿ, ಸರಕಾರ ಮತದಾರರಿಗೆ ಲಂಚ ನೀಡುತ್ತಿದೆ ಎಂದು ಖರ್ಗೆ ಸಾಹೇಬ್ರಾದರೂ ಹೇಳಲಿ, ಮೋದಿ ಬಳಗದ ಕೊನೆಯ ನಾಟಕ ಎಂದು ರಾಹುಲ್ ಗಾಂಧಿ ಅಣಕವಾಡಿದರೂ, ಒಟ್ಟಿನಲ್ಲಿ ಚುನಾವಣೆಯ ಹೆಸರಿನಲ್ಲಾದರೂ ಮಧ್ಯಮವರ್ಗ ಕೊಂಚ ನಿಟ್ಟುಸಿರು ಬಿಡುವಂತಾಗಿದ್ದಂತೂ ಹೌದು.

ಮೂಲತಃ ಸಿಎ ರ್ಯಾಂಕ್ ಪಡೆದಿರುವ, ಹಣಕಾಸು ಸಚಿವ ಸ್ಥಾನವನ್ನೂ ನಿಭಾಯಿಸುತ್ತಿರುವ ಪಿಯೂಶ್ ಗೋಯಲ್, ಐದು ಲಕ್ಷದ ವರೆಗೆ ತೆರಿಗೆ ವಿನಾಯತಿ ಎಂದು ಬಜೆಟ್ ಪ್ರಸ್ತಾವನೆ ಸಲ್ಲಿಸುತ್ತಿದ್ದಂತೆಯೇ, ಅದು ಲೋಕಸಭೆಯೋ ಅಥವಾ ಸಾರ್ವಜನಿಕ ಸಭೆಯೋ ಎನ್ನುವ ರೀತಿಯಲ್ಲಿ ಬೆಂಬಲ ವ್ಯಕ್ತವಾಯಿತು. ಅದು ಎಷ್ಟರ ಮಟ್ಟಿಗೆ ಎಂದರೆ ಸುಮಾರು ಒಂದು ನಿಮಿಷ, ಪಿಯೂಶ್ ತಮ್ಮ ಬಜೆಟ್ ಭಾಷಣವನ್ನೇ ನಿಲ್ಲಿಸಬೇಕಾಯಿತು.
ಆಡಳಿತ ಪಕ್ಷದ ಸದಸ್ಯರು ಮೇಜುತಟ್ಟಿ ಸ್ವಾಗತಿಸುತ್ತಿದ್ದರೆ, ಪ್ರಧಾನಿ ಮೋದಿ ಕೂಡಾ ತಮ್ಮ ಸಂಸದರನ್ನು ಹುರಿದುಂಬಿಸಲು ತಾನೂ ಮೇಜು ತಟ್ಟಲಾರಂಭಿಸಿದರು. ಇದರಿಂದ ಇನ್ನಷ್ಟು ಉತ್ತೇಜಿತರಾದ ಎನ್ಡಿಎ ಮೈತ್ರಿಕೂಟದ ಸಂಸದರು, ಚಪ್ಪಾಳೆಯ ಜೊತೆ, 'ಮೋದಿ..ಮೋದಿ'' ಎಂದು ಘೋಷಣೆ ಕೂಗಲಾರಂಭಿಸಿದರು.
ಸುಮಾರು ಒಂದು ನಿಮಿಷ, ಪಿಯೂಶ್ ನಗುತ್ತಾ ಬಜೆಟ್ ಭಾಷಣವನ್ನು ಮುಂದುವರಿಸದೇ ಹಾಗೆಯೇ ನಿಂತಿದ್ದರು. ರಾಹುಲ್ ಗಾಂಧಿಯಾದಿಯಾಗಿ ವಿರೋಧ ಪಕ್ಷದ ಸದಸ್ಯರು ಮುಖದ ಮೇಲೆ ಕೈಯಿಟ್ಟುಕೊಂಡು ಗಂಭೀರವಾಗಿ ಕೂತಿದ್ದರು.
ಒಂದು ನಿಮಿಷದ ನಂತರವೂ ಸಂಸದರ ಕರತಾಡನ ಕಮ್ಮಿಯಾಗಿರಲಿಲ್ಲ, ಆದರೆ, ಪಿಯೂಶ್ ಗೋಯಲ್ ಇದರ ಮಧ್ಯೆಯೇ ಬಜೆಟ್ ಭಾಷಣ ಮುಂದುವರಿಸಲು ಆರಂಭಿಸಿದ್ದರಿಂದ, ಎಲ್ಲರೂ ಬಜೆಟ್ ಭಾಷಣ ಕೇಳಲಾರಂಭಿಸಿದರು.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications