ಗೋಡ್ಸೆ ಭಾರತದ ಮಗ ಎಂದು ಉದ್ಧಟತನ ಮೆರೆದ ಕೇಂದ್ರ ಸಚಿವ ಗಿರಿರಾಜ್ ಸಿಂಗ್
ನವದೆಹಲಿ, ಜೂನ್ 10: ಔರಂಗಜೇಬ್ ಮತ್ತು ಟಿಪ್ಪು ಸುಲ್ತಾನ್ ಕುರಿತ ಸಾಮಾಜಿಕ ಮಾಧ್ಯಮ ಪೋಸ್ಟ್ಗಳ ಕುರಿತು ಮಹಾರಾಷ್ಟ್ರದಲ್ಲಿ ನಡೆಯುತ್ತಿರುವ ವಿವಾದಕ್ಕೆ ತುಪ್ಪ ಸುರಿದಿರುವ ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಮಹಾತ್ಮ ಗಾಂಧಿಯವರ ಹಂತಕ ಗೋಡ್ಸೆಯನ್ನು ಈ ದೇಶದ 'ಸಪೂತ್' (ಮಗ) ಎಂದು ಉದ್ಧಟತನ ಮೆರೆದಿದ್ದಾರೆ.
ಮಹಾತ್ಮ ಗಾಂಧಿಯವರ ಹಂತಕ ನಾಥೂರಾಮ್ ಗೋಡ್ಸೆ ಮೊಘಲ್ ದೊರೆಗಳಾದ ಬಾಬರ್ ಮತ್ತು ಔರಂಗಜೇಬ್ ಅವರಂತೆ ಆಕ್ರಮಣಕಾರರಲ್ಲ. ಏಕೆಂದರೆ ಅವರು ಭಾರತದಲ್ಲಿ ಜನಿಸಿದರು ಎಂದು ಮಾಧ್ಯಮ ಪ್ರತಿನಿಧಿಗಳನ್ನು ಉದ್ದೇಶಿಸಿ ಹೇಳಿದರು.

ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಅವರು ಔರಂಗಜೇಬ್ ಕುರಿತು ಮಹಾರಾಷ್ಟ್ರದ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರ ಹೇಳಿಕೆಗೆ ಪ್ರತಿಕ್ರಿಯಿಸುವಾಗ ಗೋಡ್ಸೆಗೆ ಸಂಬಂಧಿಸಿದ ಹೇಳಿಕೆಯ ಕುರಿತ ಪ್ರಶ್ನೆಗೆ ಸಿಂಗ್ ಅವರು ಉತ್ತರಿಸಿದರು. ಬಾಬರ್ನ ವಂಶಸ್ಥರು ಎಂದು ಹೆಮ್ಮೆಪಡುವ ವ್ಯಕ್ತಿಗಳನ್ನು ಭಾರತದ ನಿಜವಾದ ಪುತ್ರರೆಂದು ಪರಿಗಣಿಸಲಾಗುವುದಿಲ್ಲ ಎಂದು ಅವರು ಹೇಳಿದರು.
ಇದಲ್ಲದೆ, ಛತ್ತೀಸ್ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್ ವಿರುದ್ಧ ವಾಗ್ದಾಳಿ ನಡೆಸಿದ ಗಿರಿರಾಜ್ ಸಿಂಗ್ ಅವರು ದೇಶದ ಒಕ್ಕೂಟ ವ್ಯವಸ್ಥೆಯನ್ನು ಹಾನಿಗೊಳಿಸಿದ್ದಾರೆ. ಈ ಸರ್ಕಾರ ಮತಾಂತರಕ್ಕೆ ಉತ್ತೇಜನ ನೀಡುತ್ತಿದೆ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಈ ನಿಟ್ಟಿನಲ್ಲಿ ಕಠಿಣ ಕಾನೂನು ರಚಿಸಲಾಗುವುದು ಮತ್ತು ಕಾನೂನಿಗೆ ವಿರುದ್ಧವಾಗಿ ಮತಾಂತರ ಮಾಡುವವರು ಜೈಲಿಗೆ ಹೋಗುತ್ತಾರೆ. ರಾಜ್ಯದಲ್ಲಿ ಬಾಘೇಲ್ ನೇತೃತ್ವದ ಸರ್ಕಾರವು ಭಯೋತ್ಪಾದನೆಯನ್ನು ಹರಡುತ್ತಿದೆ ಮತ್ತು ಜನರನ್ನು ಮತಾಂತರಕ್ಕೆ ಒತ್ತಾಯಿಸುತ್ತಿದೆ ಎಂದು ಅವರು ಆರೋಪಿಸಿದರು.
ಕೊಲ್ಹಾಪುರ ಹಿಂಸಾಚಾರದ ನಂತರ ಔರಂಗಜೇಬ್ನ ಪ್ರತಿಕೃತಿಯನ್ನು ಸುಟ್ಟಿದ್ದಕ್ಕಾಗಿ ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್ಎಸ್) ನಾಯಕ ಸಂದೀಪ್ ದೇಶಪಾಂಡೆ ಮತ್ತು ಇತರ 8 ಜನರ ವಿರುದ್ಧ ಮಹಾರಾಷ್ಟ್ರ ಪೊಲೀಸ್ ಕಾಯ್ದೆ 37, 135 ರ ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ.
ಎರಡು ಗುಂಪುಗಳ ನಡುವೆ ನಡೆದ ಹಿಂಸಾತ್ಮಕ ಘರ್ಷಣೆಯ ನಂತರ ಕೊಲ್ಹಾಪುರದಲ್ಲಿ ಬುಧವಾರ ಕರ್ಫ್ಯೂ ವಿಧಿಸಲಾಗಿತ್ತು. ನಂತರ ಪೊಲೀಸರು ಗುಂಪನ್ನು ಚದುರಿಸಲು ಮತ್ತು ಪರಿಸ್ಥಿತಿಯನ್ನು ಹತೋಟಿಗೆ ತರಲು ಲಾಠಿ ಚಾರ್ಜ್ ಮಾಡಿದರು. ಮಹಾರಾಷ್ಟ್ರದ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಹಿಂದಿನ ಮೊಘಲ್ ದೊರೆ ಔರಂಗಜೇಬ್ ಬೆಂಬಲಿಗರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಇದ್ದಕ್ಕಿದ್ದಂತೆ ಮಹಾರಾಷ್ಟ್ರದ ಕೆಲವು ಜಿಲ್ಲೆಗಳಲ್ಲಿ ಔರಂಗಜೇಬನ ಮಕ್ಕಳು ಹುಟ್ಟಿದ್ದಾರೆ. ಔರಂಗಜೇಬನ ಸ್ಟೇಟಸ್ ಇಟ್ಟುಕೊಂಡು ಪೋಸ್ಟರ್ಗಳನ್ನು ತೋರಿಸುತ್ತಿದ್ದಾರೆ. ಇದರಿಂದ ಉದ್ವಿಗ್ನತೆ ಉಂಟಾಗಿದೆ. ಈ ಔರಂಗಜೇಬನ ಮಕ್ಕಳು ಎಲ್ಲಿಂದ ಬರುತ್ತಾರೆ? ಇದರ ಹಿಂದೆ ಯಾರಿದ್ದಾರೆ? ? ನಾವು ಇದನ್ನು ಕಂಡುಹಿಡಿಯುತ್ತೇವೆ ಎಂದು ಫಡ್ನವಿಸ್ ನಾಗ್ಪುರದಲ್ಲಿ ಹೇಳಿದ್ದಾರೆ.
-
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್: ಶಾಂತಿ ಸ್ಥಾಪನೆಗೆ ಭಾರತದ ಬೆಂಬಲ, ಮಹತ್ವ ಮಾತುಕತೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು












Click it and Unblock the Notifications