HD Kumaraswamy : ಗರಿಗೆದರಿದ ವೈಜಾಗ್ ಸ್ಟೀಲ್ ಕಾರ್ಖಾನೆಯ ಪುನಶ್ಚೇತನದ ಕನಸು: ಹೆಚ್ ಡಿ ಕುಮಾರಸ್ವಾಮಿ ಏನಂದ್ರು?
ನವದೆಹಲಿ, ಜುಲೈ 11: ದೇಶಕ್ಕೆ ಕಳಸಪ್ರಾಯದಂತಿರುವ ಹಲವು ಕಾರ್ಖಾನೆಗಳ ಪುನಶ್ಚೇತನದ ಬಗ್ಗೆ ಗಂಭೀರ ಹೆಜ್ಜೆಯನ್ನು ಇಟ್ಟಿರುವ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಈಗ ಆಂಧ್ರ ಪ್ರದೇಶದ ವಿಶಾಖಪಟ್ಟದಲ್ಲಿ ವೈಜಾಗ್ ಸ್ಟೀಲ್ ಕಾರ್ಖಾನೆಗೆ ಭೇಟಿ ನೀಡಲಿದ್ದಾರೆ.ಅಲ್ಲದೇ ಹಲವು ವಿಷಯಗಳ ಕುರಿತು ಕಾರ್ಖಾನೆಯ ಅಧಿಕಾರಿಗಳ ಜೊತೆ ಕೇಂದ್ರ ಸಚಿವರಾದ ಹೆಚ್ ಡಿ ಕುಮಾರಸ್ವಾಮಿ ಮಾತುಕತೆ ನಡೆಸಲಿದ್ದಾರೆ.
ಕೇಂದ್ರ ಭಾರೀ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಗುರುವಾರ ವೈಜಾಗ್ ಸ್ಟೀಲ್ ಕಾರ್ಖಾನೆ (RNIL)ಗೆ ಭೇಟಿ ನೀಡಲಿದ್ದಾರೆ. ಬುಧವಾರ ಸಂಜೆಯೇ ವಿಶಾಖಪಟ್ಟಣಕ್ಕೆ ಆಗಮಿಸಿರುವ ಸಚಿವರು, ಗುರುವಾರ ಬೆಳಗ್ಗೆ ತಮ್ಮ ಖಾತೆಯ ಸಹಾಯಕ ಸಚಿವರು, ಆಂಧ್ರ ಪ್ರದೇಶದವರೇ ಆದ ಭೂಪತಿರಾಜು ಶ್ರೀನಿವಾಸ ವರ್ಮ ಹಾಗೂ ಉನ್ನತ ಅಧಿಕಾರಿಗಳ ಜತೆಗೆ ಕಾರ್ಖಾನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.

ಈಗಾಗಲೇ ಕಂಪನಿಯನ್ನು ಪುನಶ್ಚೇತನಗೊಳಿಸುವ ನಿಟ್ಟಿನಲ್ಲಿ ನವದೆಹಲಿಯ ತಮ್ಮ ಸಚಿವಾಲಯದಲ್ಲಿ ಹಲವಾರು ಸಭೆಗಳನ್ನು ನಡೆಸಿರುವ ಸಚಿವರು, ತಾವೇ ಖುದ್ದು ವಿಶಾಖಪಟ್ಟಣಕ್ಕೆ ಬಂದು ಉಕ್ಕು ಕಾರ್ಖಾನೆಯನ್ನು ವೀಕ್ಷಿಸುತ್ತಿದ್ದಾರೆ. ಆರ್ಥಿಕವಾಗಿ ಹಾಗೂ ಇನ್ನಿತರೆ ಕಾರಣಗಳಿಂದ ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿರುವ ಕಂಪನಿಯನ್ನು ಮೇಲೆತ್ತುವ ಬಗ್ಗೆ ಪ್ರಯತ್ನ ನಡೆಸಿರುವ ಸಚಿವರು; ಭೂಪತಿರಾಜು ಅವರ ಜತೆಯೂ ಹಲವು ಬಾರಿ ಚರ್ಚೆ ನಡೆಸಿದ್ದಾರೆ.
ಕುಮಾರಸ್ವಾಮಿ ಅವರು ಉಕ್ಕು ಸಚಿವರಾಗಿ ಅಧಿಕಾರ ವಹಿಸಿಕೊಂಡ ನಂತರ ಅವರನ್ನು ಸಚಿವಾಲಯದಲ್ಲಿ ಭೇಟಿಯಾಗಿದ್ದ ಆಂಧ್ರ ಪ್ರದೇಶದ ಸಂಸದರು, ಬಿಜೆಪಿ ಹಿರಿಯ ನಾಯಕಿಯಾದ ಪುರಂದೇಶ್ವರಿ ಅವರು, ಹೇಗಾದರೂ ಮಾಡಿ ವೈಜಾಗ ಸ್ಟೀಲ್ ಕಂಪನಿಯನ್ನು ಪುನಶ್ಚೇತನಗೊಳಿಸಬೇಕು ಎಂದು ಮನವಿ ಮಾಡಿದ್ದರು.
ಬಳಿಕ ಉಕ್ಕು ಸಚಿವಾಲಯದಲ್ಲಿ ಕಾರ್ಯದರ್ಶಿ ನಾಗೇಂದ್ರ ನಾಥ ಸಿನ್ಹಾ, ವೈಜಾಗ್ ಸ್ಟೀಲ್ ಚೇರಮನ್ ಅತುಲ್ ಭಟ್ ಸೇರಿ ಹಿರಿಯ ಅಧಿಕಾರಿಗಳ ಜತೆ ಸರಣಿ ಸಭೆಗಳನ್ನು ನಡೆಸಿದ್ದರು ಸಚಿವರು. ಅಲ್ಲದೆ; ಮಂಗಳವಾರ ಸಚಿವಾಲಯದಲ್ಲಿ ಕಂಪನಿಗೆ ಸಾಲ ನೀಡಿರುವ ಬ್ಯಾಂಕುಗಳ ಜತೆಯೂ ಮಹತ್ವದ ಸಮಾಲೋಚನೆ ನಡೆಸಿದ್ದರು.
ಈ ಬಗ್ಗೆ ಮಾತನಾಡಿರುವ ಕೇಂದ್ರ ಸಚಿವರು; ಪ್ರಧಾನಿ ನರೇಂದ್ರ ಮೋದಿ ಅವರ ಆತ್ಮನಿರ್ಬರ್ ಭಾರತ ಪರಿಕಲ್ಪನೆ ಸಂಕಷ್ಟದಲ್ಲಿರುವ ಕೈಗಾರಿಗಳ ಪುನಶ್ಚೇತನಕ್ಕೆ ಸಂಜೀವಿನಿಯಾಗಿದೆ. ಆ ನಿಟ್ಟಿನಲ್ಲಿ ನಾವು ಕೆಲಸ ಮಾಡುತ್ತಿದ್ದೇವೆ ಹಾಗೂ ಕಾರ್ಖಾನೆಗೆ ಭೇಟಿ ನೀಡುತ್ತಿದ್ದೇನೆ ಎಂದು ಹೇಳಿದ್ದಾರೆ.
-
ದಾವಣಗೆರೆ ಉಪಚುನಾವಣೆ: ಕಣದಿಂದ ಹಿಂದೆ ಸರಿದ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್, ಕಾಂಗ್ರೆಸ್ ಬೆಂಬಲಕ್ಕೆ ನಿರ್ಧಾರ -
SSLC Hindi Exam: ಮಾರ್ಚ್ 30ರ ಎಸ್ಎಸ್ಎಲ್ಸಿ ಹಿಂದಿ ಪರೀಕ್ಷೆಗೆ ಹೊಸ ಸಮಸ್ಯೆ: ಪರೀಕ್ಷಾ ಮಂಡಳಿ ಹೇಳಿದ್ದೇನು -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL 2026: ಆರ್ಸಿಬಿ ಫ್ಯಾನ್ಸ್ ಗಮನಿಸಿ; ಮ್ಯಾಚ್ ದಿನ ನಮ್ಮ ಮೆಟ್ರೋ ತಡರಾತ್ರಿವರೆಗೂ ಸಂಚಾರ -
ವಂದೇ ಭಾರತ್ ರೈಲಿನ ಊಟದಲ್ಲಿ ಹುಳು: 'ಅದು ಕೇಸರಿ' ಎಂದ ಸಿಬ್ಬಂದಿ, IRCTCಗೆ 10 ಲಕ್ಷ ದಂಡ -
ಭಾರತದ ಸ್ಪೈಸ್ ಗಾರ್ಡನ್ ಕೇರಳ: ಇತಿಹಾಸ ಮತ್ತು ಪ್ರಕೃತಿಯ ಸುಂದರ ಕಥೆ -
ಮುದ್ದೇನಹಳ್ಳಿಯಲ್ಲಿ ಪೋಷಕರ ಹರ್ಷ: 27 ಮಕ್ಕಳಿಗೆ ಹೊಸ ಬದುಕು ನೀಡಿದ ಉಚಿತ ಹೃದಯ ಚಿಕಿತ್ಸೆ ಶಿಬಿರ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
RCB ಮ್ಯಾಚ್ ನೋಡಲು ಬರುವವರ ಗಮನಕ್ಕೆ: 44 ಮೆಟ್ರೋ ನಿಲ್ದಾಣಗಳಲ್ಲಿದೆ ಪಾರ್ಕಿಂಗ್ ವ್ಯವಸ್ಥೆ -
IPL ಟಿಕೆಟ್ ಕೇಳಿದ ಶಾಸಕರಿಗೆ ಸರ್ಕಾರ ಸಿಹಿಸುದ್ದಿ: ಆರ್ಸಿಬಿ ಮೊದಲ ಪಂದ್ಯ ವೀಕ್ಷಣೆಗೆ ಸಿಗಲಿದೆ ತಲಾ 2 ಟಿಕೆಟ್








Click it and Unblock the Notifications