ಆಟೋ ಬಿಡಿಭಾಗ; ಸ್ವಾವಲಂಬನೆ ಸಾಧಿಸಲು ಉದ್ಯಮಕ್ಕೆ ಸಲಹೆ ನೀಡಿದ ಹೆಚ್.ಡಿ.ಕುಮಾರಸ್ವಾಮಿ
ನವದೆಹಲಿ, ಸೆಪ್ಟೆಂಬರ್ 09: ಆಟೋ ಬಿಡಿಭಾಗಗಳ ಮೇಲೆ ಇತರೆ ದೇಶಗಳ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡಿಕೊಳ್ಳಬೇಕು ಎಂದು ಅಟೋ ಉದ್ಯಮಕ್ಕೆ ಸಲಹೆ ನೀಡಿದ ಕೇಂದ್ರ ಭಾರೀ ಕೈಗಾರಿಕಾ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು; ಈ ನಿಟ್ಟಿನಲ್ಲಿ ಸ್ವಾವಲಂಬನೆ ಸಾಧಿಸಲು ದೊಡ್ಡ ಹೆಜ್ಜೆ ಇಡಬೇಕು ಎಂದು ಕರೆ ನೀಡಿದರು.
ನವದೆಹಲಿಯಲ್ಲಿ ACMA (The Automotive Component Manufacturers Association of India) 64ನೇ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು; ಅಟೋ ಉದ್ಯಮ ಬಿಡಿಭಾಗಗಳನ್ನು ಹೊರ ದೇಶಗಳಿಂದ ಆಮದು ಮಾಡಿಕೊಳ್ಳುವುದನ್ನು ಕಡಿಮೆ ಮಾಡಲೇಬೇಕು, ಹಾಗೂ ಫೇಮ್ 3 (FAME-III) ಜಾರಿಗೆ ಬರುವ ತನಕ EMPS (Electric Mobility Promotion Scheme) ಯೋಜನೆಯನ್ನು ಮುಂದುವರಿಸಲಾಗುವುದು ಎಂದರು.

ಸದ್ಯಕ್ಕೆ ಆಟೋ ಬಿಡಿಭಾಗ ತಯಾರಿಕಾ ಘಟಕಗಳು ಜಿಡಿಪಿಗೆ 2.7%ರಷ್ಟು ಕೊಡುಗೆ ನೀಡುತ್ತಿವೆ ಹಾಗೂ ಐದು ದಶಲಕ್ಷಕ್ಕೂ ಹೆಚ್ಚು ಜನರಿಗೆ ಉದ್ಯೋಗಾವಕಾಶ ಕಲ್ಪಿಸಿವೆ ಎಂದ ಅವರು; ಈ ಕ್ಷೇತ್ರದಲ್ಲಿ ಇನ್ನೂ ಉತ್ತಮ ಸಾಧನೆ ಮಾಡಲು ಅವಕಾಶ ಇದೆ. ಪ್ರಧಾನ ಮಂತ್ರಿಗಳ ಆತ್ಮನಿರ್ಭರ್ ಭಾರತ್ ಹಾಗೂ ಮೆಕ್ ಇನ್ ಇಂಡಿಯಾ ಪರಿಕಲ್ಪನೆಗಳ ಪ್ರಕಾರ ನಾವು ವಿಕಸಿತ್ ಭಾರತ್ 2047 ಗುರಿಯನ್ನು ಮುಟ್ಟಲು ಸಾಧ್ಯವಿದೆ ಎಂದು ಅವರು ಹೇಳಿದರು.
ಜಾಗತಿಕ ಮಟ್ಟದಲ್ಲಿ ದೇಶೀಯ ಆಟೋ ಬಿಡಿಭಾಗ ಉದ್ಯಮ ಅನೇಕ ಸವಾಲುಗಳನ್ನು ಎದುರಿಸುತ್ತಿದೆ. ಅಲ್ಲದೆ, ದುಬಾರಿ ಸಾರಿಗೆ, ವೆಚ್ಚಗಳ ಒತ್ತಡಕ್ಕೆ ಸಿಲುಕಿದೆ. ಇಷ್ಟಾದರೂ ಪ್ರಸಕ್ತ ಹಣಕಾಸು ವರ್ಷದಲ್ಲಿ ಈ ಕ್ಷೇತ್ರದ ರಪ್ತು ವಹಿವಾಟು ಬೆಳವಣಿಗೆಯನ್ನು ಕಂಡಿದೆ ಇಂದು ಅವರು ಹೇಳಿದರು.
ಈ ಉದ್ಯಮವನ್ನು ಉತ್ತೇಜಿಸುವ ಸಲುವಾಗಿ ಕೇಂದ್ರ ಸರ್ಕಾರ, ಉತ್ಪಾದನಾ ಸಂಪರ್ಕ ಉಪಕ್ರಮ (PLI) ಗಳನ್ನು ಸಾಕಷ್ಟು ಕೈಗೊಂಡಿದೆ. ಈ ಮೂಲಕ ₹74,850 ಕೋಟಿ ಹೂಡಿಕೆಯನ್ನು ಉತ್ತೇಜಿಸಲಾಗಿದೆ. ಈ ಪೈಕಿ ₹17,836 ಮೊತ್ತ 2024 ಮಾರ್ಚ್ ಹೊತ್ತಿಗೆ ಹೂಡಿಕೆ ಆಗಿದೆ. ಇದರ ಪರಿಣಾಮವಾಗಿ 30,500 ಉದ್ಯೋಗ ಅವಕಾಶಗಳು ಸೃಷ್ಟಿಯಾಗಿವೆ. ಇದು ಉದ್ಯಮಕ್ಕೆ ದೊಡ್ಡ ಶಕ್ತಿಯನ್ನು ತುಂಬಿದೆ ಎಂದು ಸಚಿವರು ಹೇಳಿದರು.
ಫೇಮ್ 3 ಯೋಜನೆಯನ್ನು ಶೀಘ್ರವೇ ಜಾರಿಗೆ ತರಲಾಗುವುದು. ಅದುವರೆಗೂ ಆಟೋ ಕ್ಷೇತ್ರಕ್ಕೆ ಉತ್ತಜನ ನೀಡಲು EMPS ಯೋಜನೆಯನ್ನು ಮುಂದುವರಿಸಲಾಗುವುದು ಎಂದು ಅವರು ತಿಳಿಸಿದರು. ಸಮಾವೇಶದಲ್ಲಿ ACMA ಅಧ್ಯಕ್ಷೆ ಶ್ರದ್ಧಾ ಸೂರಿ ಮರ್ವಾಹ್, SIAM ಅಧ್ಯಕ್ಷ ವಿನೋದ ಅಗರ್ವಾಲ್, CII ಅಧ್ಯಕ್ಷ ಮತ್ತು ITC ವ್ಯವಸ್ಥಾಪಕ ನಿರ್ದೇಶಕ ಸಂಜೀವ ಪೂರಿ, ಮಾರುತಿ ಸುಜುಕಿ ಇಂಡಿಯಾ ವ್ಯವಸ್ಥಾಪಕ ನಿರ್ದೇಶಕ ಹಿಸಾಶಿ ತಕೇಚಿ ಮತ್ತು SCALE ಅಧ್ಯಕ್ಷ ಡಾ. ಪವನ್ ಗೋಯಂಕ ಸೇರಿದಂತೆ ಉದ್ಯಮದ ಗಣ್ಯರು ಹಾಜರಿದ್ದರು.
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications