ಬಿಜೆಪಿ ಹಿರಿಯ ನಾಯಕ ಅಡ್ವಾಣಿ ಮಾತನ್ನೇ ಪುನರುಚ್ಚರಿಸಿದ ನಿತಿನ್ ಗಡ್ಕರಿ
ನವದೆಹಲಿ, ಏಪ್ರಿಲ್ 11: ತನ್ನ ಟೀಕಾಕಾರರನ್ನು ಬಿಜೆಪಿ ಎಂದಿಗೂ ದೇಶವಿರೋಧಿಗಳು ಎಂದು ಕರೆದಿಲ್ಲ ಎಂಬುದನ್ನು ಎಲ್.ಕೆ.ಅಡ್ವಾಣಿ ತಮ್ಮ ಬ್ಲಾಗ್ ಮೂಲಕ ಹೇಳಿದ ಕೆಲ ದಿನಗಳಲ್ಲೇ ಅಂಥದ್ದೇ ಸಂದೇಶವನ್ನು ಧ್ವನಿಸುವಂಥ ಮಾತನಾಡಿದ್ದಾರೆ ಕೇಂದ್ರ ಸಚಿವ ನಿತಿನ್ ಗಡ್ಕರಿ. "ಭಿನ್ನವಾದ ಅಭಿಪ್ರಾಯಗಳನ್ನೂ ನಾವು ಗೌರವಿಸಬೇಕು. ಏಕೆಂದರೆ ಇದು ನಿಜವಾದ, ಸತ್ಯವಾದ ಪ್ರಜಾತಂತ್ರ ವ್ಯವಸ್ಥೆಗೆ ಸ್ಫೂರ್ತಿ" ಎಂದಿದ್ದಾರೆ.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಬಿಜೆಪಿ ಶುರುವಾದ ದಿನದಿಂದಲು ರಾಜಕೀಯವಾಗಿ ನಮ್ಮ ನಿಲುವಿಗೆ ವಿರುದ್ಧವಾಗಿ ಇರುವವರನ್ನು "ಶತ್ರುಗಳು" ಅಂತ ನೋಡಿಲ್ಲ. ಆದರೆ ಕೇವಲ ಭಿನ್ನ ನಿಲುವಿರುವವರು ಅಷ್ಟೇ. ನಮ್ಮ ದೃಷ್ಟಿಯಲ್ಲಿ ಭಾರತೀಯ ರಾಷ್ಟ್ರೀಯತೆ ಅಂದಾಗ, ರಾಜಕೀಯವಾಗಿ ನಮಗೆ ವಿರುದ್ಧವಾದ ನಿಲುವಿರುವವರನ್ನು ದೇಶವಿರೋಧಿಗಳು ಎಂದು ಯಾವತ್ತಿಗೂ ಪರಿಗಣಿಸಿಲ್ಲ ಎಂದು ನಿತಿನ್ ಗಡ್ಕರಿ ಹೇಳಿದ್ದಾರೆ.
ನಮ್ಮ ಜತೆ ಇಲ್ಲ ಅನ್ನೋ ಕಾರಣಕ್ಕೆ ದೇಶ ವಿರೋಧಿಗಳು ಎಂದು ಕರೆಯಲು ಬಯಸಲ್ಲ. ಅದು ಆವರ ಅಭಿಪ್ರಾಯ ವ್ಯಕ್ತಪಡಿಸುವ ಹಕ್ಕು. ನಮಗೆ ಅದರಲ್ಲಿ ಯಾವ ಸಮಸ್ಯೆಯೂ ಇಲ್ಲ. ಏಕೆಂದರೆ ನಾವು ಯಾವಾಗಲೂ ಹೇಳುತ್ತಾ ಇರುತ್ತೇವೆ: ಪ್ರಜಾತಂತ್ರ ವ್ಯವಸ್ಥೆಯಲ್ಲಿ ಭಿನ್ನವಾದ ಅಭಿಪ್ರಾಯಗಳು ಇರುತ್ತವೆ ಎಂದಿದ್ದಾರೆ.

ಸದ್ಯಕ್ಕೆ ನಿತಿನ್ ಗಡ್ಕರಿ ಅವರು ಮಹಾರಾಷ್ಟ್ರದ ನಾಗ್ಪುರ್ ನಿಂದ ಲೋಕಸಭಾ ಅಭ್ಯರ್ಥಿಯಾಗಿ ಕಣದಲ್ಲಿ ಇದ್ದಾರೆ. ಕಳೆದ ಬಾರಿಯ ಲೋಕಸಭಾ ಚುನಾವಣೆಯಲ್ಲಿ ತಮ್ಮ ಮೊದಲ ಗೆಲುವನ್ನು ಇದೇ ಕ್ಷೇತ್ರದಿಂದ ಅವರು ದಾಖಲಿಸಿದ್ದರು.
ಒಂದು ವೇಳೆ ಬಿಜೆಪಿ ಮತ್ತು ಮಿತ್ರ ಪಕ್ಷಕ್ಕೆ ಬಹುಮತ ಬಾರದೆ ದೊಡ್ಡ ಹುದ್ದೆ ನಿಭಾಯಿಸಬೇಕಾದ ಜವಾಬ್ದಾರಿ ಎದುರಾದರೆ ಏನು ಮಾಡ್ತೀರಿ ಎಂದು ಗಡ್ಕರಿ ಅವರನ್ನು ಪ್ರಶ್ನಿಸಿದರೆ, ನಾನೀಗಾಗಲೇ ಸ್ಪಷ್ಟ ಪಡಿಸಿದ್ದೇನೆ. ನಮ್ಮ ಪಕ್ಷಕ್ಕೆ ಬಹುಮತ ಸಿಕ್ಕೇ ಸಿಗುತ್ತದೆ. ಮತ್ತು ಮೋದಿಜೀ ನಮ್ಮ ಪ್ರಧಾನಿ. ನನಗೆ ಅಂತ ಯಾವ ಕಾರ್ಯಸೂಚಿಯೂ ಇಲ್ಲ ಮತ್ತು ಅಂಥ ಯಾವ ತಂಡವೂ ನನ್ನ ಜತೆ ಇಲ್ಲ ಎಂದಿದ್ದಾರೆ.
-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್












Click it and Unblock the Notifications