ಕಾಂಗ್ರೆಸ್ ನಾಯಕನನ್ನು ಹಾಡಿ ಹೊಗಳಿದ ಕೇಂದ್ರ ಸಚಿವ ನಿತೀನ್ ಗಡ್ಕರಿ- ಯಾರು ತಿಳಿಯಿರಿ
ಪುಣೆ, ಜೂನ್ 30: ಪುಣೆ ನಗರದ ಸಮೀಪ ನಡೆದ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಹಿರಿಯ ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್ ಅವರೊಂದಿಗೆ ವೇದಿಕೆ ಹಂಚಿಕೊಂಡಿದ್ದಾರೆ. ಮಹಾರಾಷ್ಟ್ರದ ದೇವಸ್ಥಾನ ಪಟ್ಟಣವಾದ ಪಂಢರಪುರಕ್ಕೆ ದಿಗ್ವಿಜಯ ಸಿಂಗ್ ಅವರ ವಾರ್ಷಿಕ ತೀರ್ಥಯಾತ್ರೆಯನ್ನು ಗಡ್ಕರಿ ಶ್ಲಾಘಿಸಿದ್ದಾರೆ.
ಸೋಲಾಪುರ ಜಿಲ್ಲೆಯ ವಿಠ್ಠಲ ಮತ್ತು ರುಕ್ಮಿಣಿ ದೇವಿಯ ಪ್ರಸಿದ್ಧ ದೇವಾಲಯವಿರುವ ಪಂಢರಪುರಕ್ಕೆ ದಿಗ್ವಿಜಯ ಸಿಂಗ್ ಪ್ರತಿ ವರ್ಷ ಆಷಾಢ ಏಕಾದಶಿಯಂದು ದೇವರಿಗೆ ಪ್ರಾರ್ಥನೆ ಸಲ್ಲಿಸಲು ಭೇಟಿ ನೀಡುತ್ತಾರೆ. ಈ ಸಂದರ್ಭದಲ್ಲಿ ಸಂತ ತುವಾಕ್ರಂ ಮತ್ತು ಸಂತ ಜ್ಞಾನೇಶ್ವರರ ಪವಿತ್ರ ಪಾದುಕೆಗಳನ್ನು ಹೊತ್ತ ಪಲ್ಲಕ್ಕಿಗಳು ನಗರವನ್ನು ತಲುಪುತ್ತವೆ.

ಪುಣೆ ಬಳಿಯ ಪಿಂಪ್ರಿ ಚಿಂಚ್ವಾಡ್ನಲ್ಲಿ ದಿವಂಗತ ಕಾಂಗ್ರೆಸ್ ನಾಯಕ ರಾಮಕೃಷ್ಣ ಮೋರ್ ಅವರ ಪುಸ್ತಕವನ್ನು ಬಿಡುಗಡೆ ಮಾಡಲು ನಿತೀನ್ ಗಡ್ಕರಿ ಮತ್ತು ದಿಗ್ವಿಜಯ್ ಸಿಂಗ್ ಗುರುವಾರ ಒಂದೇ ವೇದಿಕೆಯಲ್ಲಿ ಕಂಡಬಂದರು.
ನಿತಿನ್ ಗಡ್ಕರಿ ಅವರು ತಮ್ಮ ಭಾಷಣದಲ್ಲಿ ದಿಗ್ವಿಜಯ ಸಿಂಗ್ ಅವರು ಗುರುವಾರ ಆಚರಿಸಲಾದ ಆಷಾಢ ಏಕಾದಶಿಯಂದು ಪಂಢರಪುರಕ್ಕೆ ವಾರ್ಷಿಕ ತೀರ್ಥಯಾತ್ರೆ ಕೈಗೊಂಡಿದ್ದಕ್ಕಾಗಿ ಶ್ಲಾಘಿಸಿದರು.
'ನಾನು ನಿಮಗಿಂತ ಚಿಕ್ಕವನಾಗಿದ್ದರೂ (ನಡೆಯಲು) ನನಗೆ ಅಂತಹ ಧೈರ್ಯ ಬರುವುದಿಲ್ಲ. ಆದರೆ ನೀವು (ತೀರ್ಥಯಾತ್ರೆಯ ಸಮಯದಲ್ಲಿ) ತುಂಬಾ ನಡೆದಿದ್ದೀರಿ. ನಾನು ನಿಮಗೆ ಅಭಿನಂದನೆಗಳು ಮತ್ತು ಧನ್ಯವಾದಗಳನ್ನು ಅರ್ಪಿಸುತ್ತೇನೆ' ಎಂದು ಗಡ್ಕರಿ ಹೇಳಿದರು.

ಮಹಾರಾಷ್ಟ್ರದ ರಾಜಕೀಯ ಸಂಸ್ಕೃತಿಯನ್ನು ಶ್ಲಾಘಿಸಿದರು ಮತ್ತು ರಾಜ್ಯದಲ್ಲಿ ವಿವಿಧ ಪಕ್ಷಗಳಿದ್ದರೂ ಅವರಲ್ಲಿ ಯಾವುದೇ ಕಹಿ ಇಲ್ಲ ಎಂದು ಗಡ್ಕರಿ ತಿಳಿಸಿದರು.
ಸರ್ಕಾರ ₹ 12,000 ಕೋಟಿ ವೆಚ್ಚದಲ್ಲಿ ಪಾಲ್ಕಿ ಮಾರ್ಗವನ್ನು (ಪಲ್ಲಕ್ಕಿ ಮಾರ್ಗ) ಅಭಿವೃದ್ಧಿಪಡಿಸುತ್ತಿದೆ ಎಂದು ಸಚಿವರು ಹೇಳಿದರು.
ಈ ವೇಳೆ ಮಾತನಾಡಿದ ದಿಗ್ವಿಜಯ ಸಿಂಗ್ ಗಡ್ಕರಿ ಅವರು ಫಂಡರಿಪುರಕ್ಕೆ ಪಾದಯಾತ್ರೆಯಲ್ಲಿ ಬರುವುದನ್ನು ಪ್ರಯತ್ನಿಸಬೇಕು ಎಂದು ತಿಳಿಸಿದರು.
ನಿತಿನ್ ಗಡ್ಕರಿ ಅವರು 2012 ರಲ್ಲಿ ದಿಗ್ವವಿಜಯ ಸಿಂಗ್ ವಿರುದ್ಧ ಕಲ್ಲಿದ್ದಲು ನಿಕ್ಷೇಪಗಳ ಹಂಚಿಕೆಯಲ್ಲಿನ ಅಕ್ರಮಗಳಿಗೆ ತಮ್ಮ ಹೆಸರನ್ನು ಎಳೆದು ತಂದ ಆರೋಪದ ಮೇಲೆ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video












Click it and Unblock the Notifications