ಮಂಗಳಮುಖಿಯರು ಇನ್ಮೇಲೆ ಸೀರೆ ಉಡಬಾರದಂತೆ!
ಮಂಗಳಮುಖಿಯರು ಗಂಡಸರು ಉಡುವ ಬಟ್ಟೆಯನ್ನು ತೊಡಬೇಕು, ಸೀರೆಯನ್ನು ಮಾತ್ರ ಉಟ್ಟುಕೊಳ್ಳಬಾರದು ಎಂದು ಕೇಂದ್ರ ಸಚಿವ ರಾಮದಾಸ ಅಠಾವಳೆ ಹೇಳಿದ್ದಾರೆ.
ನವದೆಹಲಿ, ಆ 1 (ಪಿಟಿಐ): ಕೇಂದ್ರ ಪಂಚಾಯತ್ ರಾಜ್ ಇಲಾಖೆ ಆಯೋಜಿಸಿದ್ದ ಸಮ್ಮೇಳನದಲ್ಲಿ ಕೇಂದ್ರ ಸಚಿವ ರಾಮದಾಸ ಅಠವಲೆ , ಮಂಗಳಮುಖಿಯರ ಬಗ್ಗೆ ನೀಡಿದ ಹೇಳಿಕೆ ಹೊಸ ಚರ್ಚೆಗೆ ನಾಂದಿ ಹಾಡುವ ಸಾಧ್ಯತೆಯಿದೆ.
ಮಂಗಳಮುಖಿಯರು ಗಂಡಸರು ಉಡುವ ಬಟ್ಟೆಯನ್ನು ತೊಡಬೇಕು, ಸೀರೆಯನ್ನು ಮಾತ್ರ ಉಟ್ಟುಕೊಳ್ಳಬಾರದು ಎನ್ನುವುದು ನನ್ನ ಸಲಹೆ. ಆದರೆ ಅವರು ಯಾವ ಬಟ್ಟೆಯನ್ನು ಧರಿಸಬೇಕು ಎನ್ನುವುದು ಅವರ ವಿವೇಚನೆಗೆ ಬಿಟ್ಟ ವಿಚಾರ ಎಂದು ಅಠವಲೆ ಹೇಳಿದ್ದಾರೆ.

ಕೇಂದ್ರ ಸರಕಾರ ಮಂಗಳಮುಖಿಯರ ಹಿತರಕ್ಷಣೆಗೆ ಬದ್ದವಾಗಿದೆ, ಈ ಸಂಬಂಧ ಮಸೂದೆಯೊಂದನ್ನು ಈಗಾಗಲೇ ಮಂಡಿಸಲಾಗಿದ್ದು ಎಲ್ಲಾ ಪಕ್ಷಗಳ ಸಹಕಾರ ಪಡೆದು ಅನುಮೋದನೆ ಪಡೆಯಲಾಗುವುದು ಎಂದು ಅಠವಲೆ ಹೇಳಿದ್ದಾರೆ.
ಮಂಗಳಮುಖಿಯರು ಉಡುವ ಬಟ್ಟೆಯ ಬಗ್ಗೆ ಆಪಸ್ವರ ಎತ್ತುವುದು ನನ್ನ ಉದ್ದೇಶವಲ್ಲ, ಆದರೂ ಸೀರೆಯನ್ನು ಮಾತ್ರ ಉಟ್ಟುಕೊಳ್ಳಬಾರದು ಎನ್ನುವುದು ನನ್ನ ವೈಯಕ್ತಿಕ ಅಭಿಪ್ರಾಯ ಎಂದು ಅಠವಲೆ ಹೇಳಿದ್ದಾರೆ.
ವಂದೇ ಮಾತರಂ ಅನ್ನು ಎಲ್ಲರೂ ಪಠಿಸಬೇಕು, ಒಂದು ವೇಳೆ ಪಠಿಸದಿದ್ದರೆ ಅದರಿಂದಾಗುವ ತೊಂದರೆಯೇನು ಎಂದು ಅಠವಲೆ ಹೇಳಿದ್ದರು. ಜೊತೆಗೆ, ಭಾರತೀಯ ಕ್ರಿಕೆಟ್ ತಂಡದ ಆಯ್ಕೆಯಲ್ಲೂ ಮೀಸಲಾತಿ ಜಾರಿಗೆ ತರಬೇಕು ಎನ್ನುವ ವಿವಾದಕಾರಿ ಹೇಳಿಕೆಯನ್ನು ಅಠವಲೆ ನೀಡಿದ್ದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದಾಗಿದೆ.
-
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್












Click it and Unblock the Notifications