ವಿವಿಧತೆಯಲ್ಲಿ ಏಕತೆ ನಮ್ಮ ದೊಡ್ಡ ಶಕ್ತಿ: ಆರೆಸ್ಸೆಸ್ ಕಾರ್ಯಕ್ರಮದಲ್ಲಿ ಪ್ರಣಬ್
ನಾಗ್ಪುರ, ಜೂನ್ 7: ದೇಶದ ಜನರು ಬಹು ನಿರೀಕ್ಷೆಯಿಂದ ಕಾಯುತ್ತಿದ್ದ ಕಾರ್ಯಕ್ರಮ ಮುಗಿದಿದೆ. ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕ್ರಮದಲ್ಲಿ ತಮ್ಮ ಭಾಷಣ ಮಾಡಿದ್ದಾರೆ.
ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದ ಆರ್.ಎಸ್.ಎಸ್ ಮೂರನೇ ವರ್ಷದ 'ಶಿಕ್ಷಾ ವರ್ಗ್'ನಲ್ಲಿ ಮಾತನಾಡಿದ ಅವರು ಹೆಚ್ಚಿನ ಸಮಯವನ್ನು ಭಾರತದ ಘನ ಇತಿಹಾಸ ಮತ್ತು ರಾಷ್ಟ್ರೀಯತೆಯ ಪರಿಕಲ್ಪನೆಯನ್ನು ವಿವರಿಸಲು ಮೀಸಲಿಟ್ಟರು.
"ಭಾರತದ ವಿಷಯದಲ್ಲಿ ರಾಷ್ಟ್ರ, ರಾಷ್ಟ್ರೀಯತೆ ಮತ್ತು ದೇಶಭಕ್ತಿಯ ಪರಿಕಲ್ಪನೆ ಮತ್ತು ನಿಮ್ಮೊಂದಿಗೆ ನನ್ನ ತಿಳುವಳಿಕೆಯನ್ನು ಹಂಚಿಕೊಳ್ಳಲು ನಾನು ಇಲ್ಲಿದ್ದೇನೆ," ಎಂದು ಮುಖರ್ಜಿ ಭಾಷಣ ಆರಂಭಿಸಿದರು.

"ಸಂಘರ್ಷ ಮತ್ತು ಸಮೀಕರಣದ ದೀರ್ಘಕಾಲದ ಪ್ರಕ್ರಿಯೆಯ ನಂತರ ನಮ್ಮ ರಾಷ್ಟ್ರೀಯ ಗುರುತು ಹೊರಹೊಮ್ಮಿದೆ. ಅನೇಕ ಸಂಸ್ಕೃತಿಗಳು ಮತ್ತು ನಂಬಿಕೆಗಳು ನಮ್ಮನ್ನು ವಿಶೇಷವಾಗಿಸಿವೆ ಮತ್ತು ಸಹಿಷ್ಣುಗಳನ್ನಾಗಿಸಿದೆ," ಎಂದು ಅವರು ವಿವರಿಸಿದರು.
ಒಂದು ರೀತಿಯಲ್ಲಿ ಪ್ರಣಬ್ ಮಾತು ಆರ್.ಎಸ್.ಎಸ್ ನ ಕುಡಿ ಮೀಸೆಯ ಯುವಕರಿಗೆ ಪಾಠದಂತಿತ್ತು. "ತತ್ವಗಳು ಮತ್ತು ಗುರುತು ಅಥವಾ ಧರ್ಮ, ಪ್ರದೇಶ, ದ್ವೇಷ ಮತ್ತು ಅಸಹಿಷ್ಣುತೆಗಳ ವಿಷಯದಲ್ಲಿ ನಮ್ಮ ರಾಷ್ಡ್ರೀಯತೆಯನ್ನು ವಿವರಿಸುವ ಯಾವುದೇ ಪ್ರಯತ್ನ ನಮ್ಮ ಗುರುತನ್ನು ದುರ್ಬಲಗೊಳಿಸುತ್ತದೆ," ಎಂದು ಅವರು ಇದೇ ಸಂದರ್ಭದಲ್ಲಿ ಕಿವಿಮಾತು ಹೇಳಿದರು.

"'ರಾಷ್ಟ್ರೀಯತೆಯು ಹಿಂದೂ, ಮುಸ್ಲಿಮರು, ಸಿಖ್ಖರು ಮತ್ತು ಭಾರತದ ಇತರ ಗುಂಪುಗಳ ಸೈದ್ಧಾಂತಿಕ ಸಮ್ಮಿಳನದಿಂದ ಮಾತ್ರ ಸಾಧ್ಯವಿದೆ ಎಂದು ನನಗೆ ಮನವರಿಕೆಯಾಗಿದೆ' ಎಂಬುದಾಗಿ ರಾಷ್ಟ್ರೀಯತೆಯ ಬಗ್ಗೆ ಪಂಡಿತ್ ನೆಹರೂ ಅವರು ತಮ್ಮ 'ಡಿಸ್ಕವರಿ ಆಫ್ ಇಂಡಿಯಾ' ಎಂಬ ಪುಸ್ತಕದಲ್ಲಿ ಸ್ಪಷ್ಟವಾಗಿ ವಿವರಿಸಿದ್ದಾರೆ," ಎಂದು ಅವರು ತಿಳಿಸಿ ಹೇಳಿದರು.
"ಗಾಂಧಿಯವರು ವಿವರಿಸಿದಂತೆ ಭಾರತೀಯ ರಾಷ್ಟ್ರೀಯತೆಯು ಪ್ರತ್ಯೇಕವಾಗಿಲ್ಲ ಅಥವಾ ಆಕ್ರಮಣಕಾರಿ ಅಥವಾ ಹಾನಿಕಾರಕವಲ್ಲ," ಎಂದು ಅವರು ವಿವರಿಸಿದರು. ಒಟ್ಟಿನಲ್ಲಿ ವಿವಿಧತೆಯಲ್ಲಿ ಏಕತೆ ಹೊಂದಿರುವುದೇ ನಮ್ಮ ದೇಶದ ದೊಡ್ಡ ಶಕ್ತಿ ಎಂದು ತಮ್ಮ ಭಾಷಣದುದ್ದಕ್ಕೂ ಪ್ರತಿಪಾದಿಸಿದರು.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications