ವಿವಿಧತೆಯಲ್ಲಿ ಏಕತೆ ನಮ್ಮ ದೊಡ್ಡ ಶಕ್ತಿ: ಆರೆಸ್ಸೆಸ್ ಕಾರ್ಯಕ್ರಮದಲ್ಲಿ ಪ್ರಣಬ್
ನಾಗ್ಪುರ, ಜೂನ್ 7: ದೇಶದ ಜನರು ಬಹು ನಿರೀಕ್ಷೆಯಿಂದ ಕಾಯುತ್ತಿದ್ದ ಕಾರ್ಯಕ್ರಮ ಮುಗಿದಿದೆ. ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕ್ರಮದಲ್ಲಿ ತಮ್ಮ ಭಾಷಣ ಮಾಡಿದ್ದಾರೆ.
ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದ ಆರ್.ಎಸ್.ಎಸ್ ಮೂರನೇ ವರ್ಷದ 'ಶಿಕ್ಷಾ ವರ್ಗ್'ನಲ್ಲಿ ಮಾತನಾಡಿದ ಅವರು ಹೆಚ್ಚಿನ ಸಮಯವನ್ನು ಭಾರತದ ಘನ ಇತಿಹಾಸ ಮತ್ತು ರಾಷ್ಟ್ರೀಯತೆಯ ಪರಿಕಲ್ಪನೆಯನ್ನು ವಿವರಿಸಲು ಮೀಸಲಿಟ್ಟರು.
"ಭಾರತದ ವಿಷಯದಲ್ಲಿ ರಾಷ್ಟ್ರ, ರಾಷ್ಟ್ರೀಯತೆ ಮತ್ತು ದೇಶಭಕ್ತಿಯ ಪರಿಕಲ್ಪನೆ ಮತ್ತು ನಿಮ್ಮೊಂದಿಗೆ ನನ್ನ ತಿಳುವಳಿಕೆಯನ್ನು ಹಂಚಿಕೊಳ್ಳಲು ನಾನು ಇಲ್ಲಿದ್ದೇನೆ," ಎಂದು ಮುಖರ್ಜಿ ಭಾಷಣ ಆರಂಭಿಸಿದರು.

"ಸಂಘರ್ಷ ಮತ್ತು ಸಮೀಕರಣದ ದೀರ್ಘಕಾಲದ ಪ್ರಕ್ರಿಯೆಯ ನಂತರ ನಮ್ಮ ರಾಷ್ಟ್ರೀಯ ಗುರುತು ಹೊರಹೊಮ್ಮಿದೆ. ಅನೇಕ ಸಂಸ್ಕೃತಿಗಳು ಮತ್ತು ನಂಬಿಕೆಗಳು ನಮ್ಮನ್ನು ವಿಶೇಷವಾಗಿಸಿವೆ ಮತ್ತು ಸಹಿಷ್ಣುಗಳನ್ನಾಗಿಸಿದೆ," ಎಂದು ಅವರು ವಿವರಿಸಿದರು.
ಒಂದು ರೀತಿಯಲ್ಲಿ ಪ್ರಣಬ್ ಮಾತು ಆರ್.ಎಸ್.ಎಸ್ ನ ಕುಡಿ ಮೀಸೆಯ ಯುವಕರಿಗೆ ಪಾಠದಂತಿತ್ತು. "ತತ್ವಗಳು ಮತ್ತು ಗುರುತು ಅಥವಾ ಧರ್ಮ, ಪ್ರದೇಶ, ದ್ವೇಷ ಮತ್ತು ಅಸಹಿಷ್ಣುತೆಗಳ ವಿಷಯದಲ್ಲಿ ನಮ್ಮ ರಾಷ್ಡ್ರೀಯತೆಯನ್ನು ವಿವರಿಸುವ ಯಾವುದೇ ಪ್ರಯತ್ನ ನಮ್ಮ ಗುರುತನ್ನು ದುರ್ಬಲಗೊಳಿಸುತ್ತದೆ," ಎಂದು ಅವರು ಇದೇ ಸಂದರ್ಭದಲ್ಲಿ ಕಿವಿಮಾತು ಹೇಳಿದರು.

"'ರಾಷ್ಟ್ರೀಯತೆಯು ಹಿಂದೂ, ಮುಸ್ಲಿಮರು, ಸಿಖ್ಖರು ಮತ್ತು ಭಾರತದ ಇತರ ಗುಂಪುಗಳ ಸೈದ್ಧಾಂತಿಕ ಸಮ್ಮಿಳನದಿಂದ ಮಾತ್ರ ಸಾಧ್ಯವಿದೆ ಎಂದು ನನಗೆ ಮನವರಿಕೆಯಾಗಿದೆ' ಎಂಬುದಾಗಿ ರಾಷ್ಟ್ರೀಯತೆಯ ಬಗ್ಗೆ ಪಂಡಿತ್ ನೆಹರೂ ಅವರು ತಮ್ಮ 'ಡಿಸ್ಕವರಿ ಆಫ್ ಇಂಡಿಯಾ' ಎಂಬ ಪುಸ್ತಕದಲ್ಲಿ ಸ್ಪಷ್ಟವಾಗಿ ವಿವರಿಸಿದ್ದಾರೆ," ಎಂದು ಅವರು ತಿಳಿಸಿ ಹೇಳಿದರು.
"ಗಾಂಧಿಯವರು ವಿವರಿಸಿದಂತೆ ಭಾರತೀಯ ರಾಷ್ಟ್ರೀಯತೆಯು ಪ್ರತ್ಯೇಕವಾಗಿಲ್ಲ ಅಥವಾ ಆಕ್ರಮಣಕಾರಿ ಅಥವಾ ಹಾನಿಕಾರಕವಲ್ಲ," ಎಂದು ಅವರು ವಿವರಿಸಿದರು. ಒಟ್ಟಿನಲ್ಲಿ ವಿವಿಧತೆಯಲ್ಲಿ ಏಕತೆ ಹೊಂದಿರುವುದೇ ನಮ್ಮ ದೇಶದ ದೊಡ್ಡ ಶಕ್ತಿ ಎಂದು ತಮ್ಮ ಭಾಷಣದುದ್ದಕ್ಕೂ ಪ್ರತಿಪಾದಿಸಿದರು.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications