ಉನ್ನಾವೋ ಅತ್ಯಾಚಾರ ಆರೋಪಿಗೆ 'ಮಾನನೀಯ' ಎಂದ ಪೊಲೀಸ್!
ಲಕ್ನೋ, ಏಪ್ರಿಲ್ 12: "ಮಾನನೀಯ ಬಿಜೆಪಿ ಶಾಸಕ ಕುಲ್ದೀಪ್ ಸಿಂಗ್ ಸೆನ್ಗಾರ್..." ಎಂದು ಅತ್ಯಾಚಾರ ಆರೋಪಿಯನ್ನು 'ಮಾನನೀಯ' ಎಂದು ಕರೆದ ಉತ್ತರ ಪ್ರದೇಶ ಡಿಜಿಪಿ ಒಪಿ ಸಿಂಗ್ ಅವರ ಕುರಿತು ಆಕ್ರೋಶ ವ್ಯಕ್ತವಾಗಿದೆ.
ದೇಶದಾದ್ಯಂತ ಸದ್ದು ಮಾಡಿರುವ ಉನ್ನಾವೋ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜಂಟಿ ಪತ್ರಿಕಾಗೋಷ್ಠಿ ನಡೆಸಿದ ಒಪಿ ಸಿಂಗ್ ಮತ್ತು ಗೃಹಸಚಿವಾಲಯದ ಮುಖ್ಯ ಕಾರ್ಯದರ್ಶಿ ಅರವಿಂದ್ ಕುಮಾರ್ ಪ್ರಕರಣದ ಬೆಳವಣಿಗೆಯ ಕುರಿತು ಮಾತನಾಡುತ್ತಿದ್ದರು.
ಈ ಸಂದರ್ಭದಲ್ಲಿ ಒಪಿ ಸಿಂಗ್, 'ಮಾನನೀಯ ಕುಲ್ದೀಪ್ ಸಿಂಗ್' ಎಂದು ಸಂಬೋಧಿಸಿದ್ದರು. ಅತ್ಯಾಚಾರ ಆರೋಪ ಎದುರಿಸುತ್ತಿರುವ ವ್ಯಕ್ತಿಯನ್ನು 'ಮಾನನೀಯ' ಎಂದು ಕರೆಯುವುದು ಸರಿಯೇ ಎಂದು ಪತ್ರಕರ್ತರು ಕೇಳಿದ್ದಕ್ಕೆ, 'ಅವರೊಬ್ಬ ಶಾಸಕ. ಅವರ ಮೇಲೆ ಆರೋಪ ಹೊರಿಸಲಾಗಿದೆ, ಅದಿನ್ನೂ ಸಾಬೀತಾಗಿಲ್ಲ. ಹೀಗಿರುವಾಗ ಅವರನ್ನು ಮಾನನೀಯ ಎಂದು ಕರೆದರೆ ತಪ್ಪೇನು ಎಂದು ಅವರು ಪ್ರಶ್ನಿಸಿದ್ದಾರೆ.

ದೇಶದ ನ್ಯಾಯಾಂಗ ವ್ಯವಸ್ಥೆಯಲ್ಲಿ ಎಲ್ಲರೂ ಸಮಾನರು. ಶಾಸಕರೇ ಆಗಿದ್ದರೂ ಅವರೊಬ್ಬ ಆರೋಪಿ. ಆರೋಪಿ ಸ್ಥಾನದಲ್ಲಿರುವವರನ್ನು 'ಗೌರವಾನ್ವಿತರು' ಎಂದು ಕರೆಯುವುದು ಸರಿಯೇ ಎಂಬುದು ಪತ್ರಕರ್ತರ ಪ್ರಶ್ನೆ.
ಕಳೆದ ವರ್ಷ ಜೂನ್ ನಲ್ಲಿ ಉನ್ನಾವೋದ ಅಪ್ರಾಪ್ತೆಯೊಬ್ಬರ ಮೇಲೆ ಅತ್ಯಾಚಾರ ನಡೆಸಿದ ಆರೋಪ ಎದುರಿಸುತ್ತಿರುವ ಕುಲ್ದೀಪ್ ವಿರುದ್ಧ ಈಗಾಗಲೇ ಎಫ್ ಐಆರ್ ದಾಖಲಿಸಲಾಗಿದೆ. ಈ ಪ್ರಕರಣವನ್ನು ಉತ್ತರ ಪ್ರದೇಶ ಸರ್ಕಾರ ಸಿಬಿಐ ಗೆ ವಹಿಸಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications