ಉತ್ತರಪ್ರದೇಶ ಚುನಾವಣಾ ಪ್ರಚಾರ: ಅಡ್ವಾಣಿ, ಜೋಷಿಗೆ ಹಿನ್ನಡೆ
ಬಿಜೆಪಿ ಪಾಲಿಗೆ ನಿರ್ಣಾಯಕವಾಗಿರುವ ಉತ್ತರ ಪ್ರದೇಶ ಚುನಾವಣೆಗಾಗಿ ಬಿಜೆಪಿ ಬಿಡುಗಡೆ ಮಾಡಿರುವ ಪ್ರಚಾರಕರ ಪಟ್ಟಿಯಿಂದ ಪಕ್ಷದ ಹಿರಿಯ ಮುಖಂಡರಾದ ಅಡ್ವಾಣಿ ಮತ್ತು ಮುರುಳಿ ಮನೋಹರ್ ಜೋಷಿ ಅವರ ಹೆಸರನ್ನು ಕೈಬಿಡಲಾಗಿದೆ.
ನವದೆಹಲಿ, ಜ 22 (ಪಿಟಿಐ): ಬಹು ನಿರೀಕ್ಷಿತ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಭಾರತೀಯ ಜನತಾ ಪಕ್ಷ ತನ್ನ ಸ್ಟಾರ್ ಕ್ಯಾಂಪೇನರ್ (ತಾರಾ ಪ್ರಚಾರಕರು) ಪಟ್ಟಿಯನ್ನು ಬಿಡುಗಡೆ ಮಾಡಿದ್ದು ಹಿರಿಯ ಮುಖಂಡರಿಬ್ಬರನ್ನು ಮತ್ತೆ ಕಡೆಗಣಿಸಲಾಗಿದೆ.
ಅಪನಗದೀಕರಣದ ನಂತರ ಬಿಜೆಪಿ ಪಾಲಿಗೆ ನಿರ್ಣಾಯಕವಾಗಿರುವ ಉತ್ತರ ಪ್ರದೇಶ ಚುನಾವಣೆಗಾಗಿ ಬಿಜೆಪಿ ಬಿಡುಗಡೆ ಮಾಡಿರುವ ಪ್ರಚಾರಕರ ಪಟ್ಟಿಯಿಂದ ಪಕ್ಷದ ಹಿರಿಯ ಮುಖಂಡರಾದ ಲಾಲ್ ಕೃಷ್ಣ ಅಡ್ವಾಣಿ ಮತ್ತು ಮುರುಳಿ ಮನೋಹರ್ ಜೋಷಿ ಅವರ ಹೆಸರನ್ನು ಕೈಬಿಡಲಾಗಿದೆ. (ಎಸ್ ಪಿ-ಕಾಂಗ್ರೆಸ್ ಮಧ್ಯೆ ಸೀಟು ಹಂಚಿಕೆ ಚೌಕಾಶಿ)

ಇನ್ನೊಂದು ಆಶ್ಚರ್ಯಕರ ನಿರ್ಧಾರದಲ್ಲಿ ಫೈರ್ ಬ್ರಾಂಡ್ ಖ್ಯಾತಿಯ, ಸಂಸದ ವರುಣ್ ಗಾಂಧಿ ಹೆಸರು ಕೂಡಾ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಇಲ್ಲದೇ ಇರುವುದು. ಉತ್ತರಪ್ರದೇಶದ ಸಿಎಂ ಅಭ್ಯರ್ಥಿಗಳ ಸಂಭಾವ್ಯ ಪಟ್ಟಿಯಲ್ಲಿ ವರುಣ್ ಹೆಸರು ಕೂಡಾ ಕೇಳಿ ಬರುತ್ತಿತ್ತು.
ಜೊತೆಗೆ, ರಾಮ ಮಂದಿರ ನಿರ್ಮಾಣದ ಚಳುವಳಿಯಲ್ಲಿ ಮಂಚೂಣಿಯಲ್ಲಿ ಕೇಳಿ ಬರುತ್ತಿದ್ದ ಹೆಸರಾದ ವಿನಯ್ ಕಟಿಯಾರ್ ಹೆಸರನ್ನು ಕೈಬಿಟ್ಟಿದ್ದರೆ, ಪಕ್ಷದ ವಿವಾದಾತ್ಮಕ ಮುಖಂಡ ಯೋಗಿ ಆದಿತ್ಯನಾಥ್ ಮತ್ತು ಸಚಿವೆ ಮನೇಕಾ ಗಾಂಧಿ ಹೆಸರು ಪಟ್ಟಿಯಲ್ಲಿದೆ.

34 ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ, ರಾಜನಾಥ್ ಸಿಂಗ್, ಅರುಣ್ ಜೇಟ್ಲಿ, ನಿತಿನ್ ಗಡ್ಕರಿ, ವೆಂಕಯ್ಯ ನಾಯ್ಡು, ಸ್ಮೃತಿ ಇರಾನಿ, ಉಮಾ ಭಾರತಿ ಮುಂತಾದವರ ಹೆಸರಿದೆ.
ಏಳು ಹಂತದಲ್ಲಿ ನಡೆಯುವ ಉತ್ತರ ಪ್ರದೇಶ ಚುನಾವಣೆ ಫೆಬ್ರವರಿ 11, 15, 19, 23, 27 ಮತ್ತು ಮಾರ್ಚ್ 4 ಮತ್ತು 8ರಂದು ನಡೆಯಲಿದೆ. ಮಾರ್ಚ್ 11ರಂದು ಫಲಿತಾಂಶ ಹೊರಬೀಳಲಿದೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications