ಭಾರತರತ್ನ ಪುರಸ್ಕೃತರಿಂದ ಈ ಬಾರಿಯೂ ಮತದಾನ ಸಾಧ್ಯವಿಲ್ಲ!
ನವಾಬರ ನಗರಿ ಲಕ್ನೋ ಲೋಕಸಭಾ ಕ್ಷೇತ್ರದಿಂದ ಸತತ ಐದು ಬಾರಿ ಆಯ್ಕೆಯಾಗಿ, ಲಕ್ನೋ ಸೆಂಟ್ರಲ್ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ 141ನೇ ಸಂಖ್ಯೆ ಹೊಂದಿರುವ 'ಭಾರತ ರತ್ನ' ಈ ಬಾರಿಯೂ ಮತದಾನ ಮಾಡಲು ಸಾಧ್ಯವಾಗುತ್ತಿಲ್ಲ.
ಲಕ್ನೋ, ಫೆಬ್ರವರಿ 17: ನವಾಬರ ನಗರಿ ಲಕ್ನೋ ಲೋಕಸಭಾ ಕ್ಷೇತ್ರದಿಂದ ಸತತ ಐದು ಬಾರಿ ಆಯ್ಕೆಯಾಗಿ, ಲಕ್ನೋ ಸೆಂಟ್ರಲ್ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ 141ನೇ ಸಂಖ್ಯೆ ಹೊಂದಿರುವ 'ಭಾರತ ರತ್ನ' ಈ ಬಾರಿಯೂ ಮತದಾನ ಮಾಡಲು ಸಾಧ್ಯವಾಗುತ್ತಿಲ್ಲ.
ಹೌದು, ಭಾರತದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಮತದಾರರ ಗುರುತಿನ ಸಂಖ್ಯೆ141. ಅನಾರೋಗ್ಯ ಪೀಡಿತರಾಗಿ ಸಾರ್ವಜನಿಕವಾಗಿ ಕಾಣಿಸಿಕೊಳ್ಳುವುದನ್ನು ನಿಲ್ಲಿಸಿರುವ ವಾಜಪೇಯಿ ಅವರು 2004ರ ಲೋಕಸಭಾ ಚುನಾವಣೆಯಲ್ಲಿ ಕೊನೆ ಬಾರಿ ಮತದಾನ ಮಾಡಿದ್ದರು. ನಂತರ ಮತದಾನ ಮಾಡಿಲ್ಲ.

1991,1996,1998,1999 ಮತ್ತು 2004ರ ಲೋಕಸಭಾ ಚುನಾವಣೆಗಳಲ್ಲಿ ಲಕ್ನೋ ಕ್ಷೇತ್ರದಿಂದ ವಾಜಪೇಯಿ ಆಯ್ಕೆಯಾಗಿದ್ದರು. 2009 ಮತ್ತು 2014ರಲ್ಲಿ ಬಿಜೆಪಿ ಅಭ್ಯರ್ಥಿಯೇ ಗೆದ್ದುಕೊಂಡಿದ್ದಾರೆ.
2007 ಮತ್ತು 2012ರ ವಿಧಾನಸಭಾ ಚುನಾವಣೆಗಳು ಹಾಗೂ 2009 ಮತ್ತು 2014ರ ಲೋಕಸಭಾ ಚುನಾವಣೆಗಳಲ್ಲಿ ಮತದಾನ ಮಾಡಲು ಅವರಿಗೆ ಸಾಧ್ಯವಾಗಿಲ್ಲ.
ಫೆಬ್ರವರಿ 19ರಂದು ವಿಧಾನಸಭಾ ಚುನಾವಣೆಯಲ್ಲಿಯೂ ಮತ ಚಲಾಯಿಸಲು ಅವರಿಗೆ ಸಾಧ್ಯವಾಗುವುದಿಲ್ಲ ಎಂದು ವಾಜಪೇಯಿ ಅವರ ನಿಕಟ ಸಹಾಯಕ ಶಿವಕುಮಾರ್ ತಿಳಿಸಿದರು. ವಾಜಪೇಯಿಯವರು ಮತದಾನ ಮಾಡಬೇಕಾಗಿರುವ ಮತಗಟ್ಟೆ ಲಕ್ನೋ ಮಹಾನಗರ ಪಾಲಿಕೆ ಕಚೇರಿಯಲ್ಲಿ ಸ್ಥಾಪನೆಗೊಂಡಿದೆ.
-
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ -
ಖಾಸಗಿ ಬಸ್ಗಳಿಗಾಗಿ ಹುಬ್ಬಳ್ಳಿ-ಮುಂಬೈ ಮಾರ್ಗದಲ್ಲಿ NWKRTC ಸಂಚಾರ ಸ್ಥಗಿತ? ನೆಟ್ಟಿಗರ ಆಕ್ರೋಶ












Click it and Unblock the Notifications