ಯುಪಿ ಸರ್ಕಾರ ಉದ್ಯೋಗದಲ್ಲಿ ತಾರತಮ್ಯ ರಹಿತ ವ್ಯವಸ್ಥೆ ಸ್ಥಾಪಿಸಿದೆ: ಸಿಎಂ ಯೋಗಿ

ಲಕ್ನೋ, ಜುಲೈ 14: ಉದ್ಯೋಗ ನೀಡುವಲ್ಲಿ ಜನರ ನಡುವೆ ಸರ್ಕಾರ ಮಾಡುವ ತಾರತಮ್ಯ ದೊಡ್ಡ ಪಾಪವಾಗಿದೆ. ಹೀಗಾಗಿ ರಾಜ್ಯದ ಪ್ರತಿಭೆಗಳ ಪ್ರಗತಿಗೆ ಅಡ್ಡಿಪಡಿಸಿದ ಸರ್ಕಾರಗಳಿಗೆ ಜನರು ತಕ್ಕ ಪಾಠ ಕಲಿಸಿದ್ದಾರೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.

ಉತ್ತರ ಪ್ರದೇಶ ಲೋಕಸೇವಾ ಆಯೋಗ ಮತ್ತು ಉತ್ತರ ಪ್ರದೇಶ ಅಧೀನ ಸೇವೆಗಳ ಆಯ್ಕೆ ಆಯೋಗದ ಪರೀಕ್ಷೆಗಳ ಮೂಲಕ ಆಯ್ಕೆಯಾದ ನೂತನ ಅಧಿಕಾರಿಗಳಿಗೆ ನೇಮಕಾತಿ ಪತ್ರ ವಿತರಿಸಲು ಲೋಕಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ತಮ್ಮ ಸರ್ಕಾರ ಆಯ್ಕೆಯ ಹಂತದಲ್ಲಿ ಅಥವಾ ಅಂತಿಮ ನೇಮಕಾತಿಯಲ್ಲಿ ತಾರತಮ್ಯಕ್ಕೆ ಅವಕಾಶ ನೀಡಿಲ್ಲ ಎಂದರು.

Chief Minister Yogi Adityanath

ಇಂದು ಉತ್ತರ ಪ್ರದೇಶದಲ್ಲಿ ನಡೆಯುತ್ತಿರುವ ನೇಮಕಾತಿ ಪ್ರಕ್ರಿಯೆಯತ್ತ ಯಾರೂ ಬೆರಳು ತೋರಿಸಲು ಸಾಧ್ಯವಿಲ್ಲ. ಕಳೆದ ಆರು ವರ್ಷಗಳಲ್ಲಿ, ಆರು ಲಕ್ಷ ಯುವಕರಿಗೆ ಸರ್ಕಾರಿ ಉದ್ಯೋಗಗಳನ್ನು ಒದಗಿಸುವಲ್ಲಿ ನಾವು ಯಶಸ್ವಿಯಾಗಿದ್ದೇವೆ. 2021 ರಿಂದ 2023 ರ ನಡುವೆ ರಾಜ್ಯ ಸರ್ಕಾರವು ಒಂದೂವರೆ ವರ್ಷಗಳಲ್ಲಿ 16 ನೇಮಕಾತಿ ಪತ್ರ ಕಾರ್ಯಕ್ರಮಗಳನ್ನು ಪೂರ್ಣಗೊಳಿಸಿದ್ದು, ಇದರಲ್ಲಿ ಸುಮಾರು 55,000 ಯುವಕರು ನೇಮಕಾತಿ ಪತ್ರಗಳನ್ನು ಸ್ವೀಕರಿಸಿದ್ದಾರೆ ಎಂದು ಯೋಗಿ ಆದಿತ್ಯನಾಥ್ ಹೇಳಿದರು.

ನೂತನವಾಗಿ ನೇಮಕಗೊಂಡಿರುವ ಅಧಿಕಾರಿಗಳಿಗೆ ಹಾಲಿ ಸರ್ಕಾರದ ಕಾರ್ಯವೈಖರಿ ಬಗ್ಗೆ ಮಾಹಿತಿ ನೀಡಿದ ಸಿಎಂ ಯೋಗಿ, "ಇಡೀ ರಾಜ್ಯಕ್ಕೆ ಸಂಬಂಧಿಸಿದ ಸಮಸ್ಯೆಗಳು ಒಂದಲ್ಲ ಒಂದು ರೀತಿಯಲ್ಲಿ ನಿಮಗೆ ಬರುತ್ತವೆ. ಒಂದು ಫೈಲ್ ಮೂರು ದಿನಗಳಿಗಿಂತ ಹೆಚ್ಚು ಕಾಲ ಮೇಜಿನ ಮೇಲೆ ಇರಬಾರದು ಎಂಬುದು ನಮ್ಮ ಪ್ರಯತ್ನವಾಗಿದೆ ಎಂದರು.

2017 ರ ಮೊದಲು, ಉತ್ತರ ಪ್ರದೇಶದಲ್ಲಿ ನಿರುದ್ಯೋಗ ದರವು ಶೇಕಡಾ 19 ಕ್ಕಿಂತ ಹೆಚ್ಚಿತ್ತು, ಆದರೆ ಕಳೆದ ಆರು ವರ್ಷಗಳಲ್ಲಿ, ರಾಜ್ಯ ಸರ್ಕಾರವು ರಾಜ್ಯದಲ್ಲಿ ನಿರುದ್ಯೋಗ ದರವನ್ನು ಯಶಸ್ವಿಯಾಗಿ ಕಡಿಮೆ ಮಾಡಿದೆ. ನಾವು ಎರಡು ಕೋಟಿಗೂ ಹೆಚ್ಚು ಯುವಕರನ್ನು ಸ್ವಯಂ ಉದ್ಯೋಗದೊಂದಿಗೆ ಸಂಪರ್ಕಿಸುವ ನಿಟ್ಟಿನಲ್ಲಿ ಕೆಲಸ ಮಾಡಿದ್ದೇವೆ. ಈಗ ನಮ್ಮ ಸರ್ಕಾರವು ಶಿಕ್ಷಣ ಆಯೋಗವನ್ನು ಸ್ಥಾಪಿಸಲು ಯೋಜಿಸುತ್ತಿದೆ, ಇದು ಉನ್ನತ ಶಿಕ್ಷಣ, ಮಾಧ್ಯಮಿಕ ಶಿಕ್ಷಣ ಮತ್ತು ಮೂಲಭೂತ ಶಿಕ್ಷಣ ಆಯ್ಕೆ ಆಯೋಗದ ಪ್ರಕ್ರಿಯೆಗಳನ್ನು ಸಂಯೋಜಿಸುತ್ತದೆ ಎಂದು ಅವರು ಹೇಳಿದರು.

ಸಂವಿಧಾನ ನೀಡಿರುವ ಮೀಸಲಾತಿಯ ಲಾಭ ಸಮಾಜದ ಪ್ರತಿಯೊಂದು ವರ್ಗಕ್ಕೂ ದೊರೆಯುತ್ತಿದೆ. ದೇಶದ ಆರ್ಥಿಕತೆಯನ್ನು ಐದು ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗಿ ಪರಿವರ್ತಿಸಲು ಪ್ರಧಾನಿ ನರೇಂದ್ರ ಮೋದಿ ಸಂಕಲ್ಪ ಮಾಡಿದ್ದಾರೆ ಮತ್ತು ಈ ಪ್ರಯತ್ನದಲ್ಲಿ ಉತ್ತರ ಪ್ರದೇಶದ ಪಾತ್ರ ನಿರ್ಣಾಯಕವಾಗಿದೆ ಎಂದು ಅವರು ಹೇಳಿದರು.

ಪಶ್ಚಿಮ ಬಂಗಾಳದಲ್ಲಿ ಪಂಚಾಯತಿ ಚುನಾವಣೆಯ ಸಮಯದಲ್ಲಿ ಮತದಾನ ಮತ್ತು ಮತ ಎಣಿಕೆಯ ದಿನಗಳಲ್ಲಿ ಹಿಂಸಾಚಾರ ನಡೆದಿದ್ದು, ಅಮಾಯಕರ ಜೀವಗಳನ್ನು ಕಳೆದುಕೊಂಡಿದೆ. ಇಂದು ಪ್ರಜಾಪ್ರಭುತ್ವದ ಬಗ್ಗೆ ಅಳಲು ತೋಡಿಕೊಳ್ಳುತ್ತಿರುವ ಜನರು ವಾಸ್ತವವಾಗಿ ಪ್ರಜಾಪ್ರಭುತ್ವಕ್ಕೆ ಗರಿಷ್ಠ ಹಾನಿ ಮಾಡುತ್ತಿದ್ದಾರೆ. ಮತ್ತೊಂದೆಡೆ, ಉತ್ತರ ಪ್ರದೇಶದಲ್ಲಿ ಪಂಚಾಯತ್ ಚುನಾವಣೆಯಾಗಲಿ, ನಾಗರಿಕ ಸಂಸ್ಥೆಗಳ ಚುನಾವಣೆಯಾಗಲಿ, ಅಸೆಂಬ್ಲಿ ಚುನಾವಣೆಯಾಗಲಿ ಅಥವಾ ಯಾವುದೇ ರೀತಿಯ ಚುನಾವಣೆಯಾಗಲಿ ಯಾವುದೇ ಹಿಂಸಾಚಾರ ನಡೆದಿಲ್ಲ ಎಂಬುದನ್ನು ನೀವು ನೋಡಿರಬೇಕು ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+