ಉತ್ತರಪ್ರದೇಶ ಸಿಎಂ ಟ್ವಿಟ್ಟರ್ ತೊಳೆದ ಸಮಾಜವಾದಿಗಳು
ಉತ್ತರಪ್ರದೇಶದ ಸಿಎಂ ಕಚೇರಿ ಬಿಡುವ ಮುನ್ನ ಯಾವುದೇ ಕುರುಹು ಇಲ್ಲದಂತೆ ಮಾಡಲು ಸಮಾಜವಾದಿ ಪಕ್ಷ ನಿರ್ಧರಿಸಿದ ಹಾಗೆ ತೋರುತ್ತದೆ. ಸಾಮಾಜಿಕ ಜಾಲ ತಾಣ ಟ್ವಿಟ್ಟರ್ ನಲ್ಲಿರುವ ಎರಡು ಅಧಿಕೃತ ಖಾತೆಗಳನ್ನು ಫುಲ್ ಕ್ಲೀನ್ ಮಾಡಲಾಗಿದೆ.
ಲಕ್ನೋ, ಮಾರ್ಚ್ 14: ಉತ್ತರಪ್ರದೇಶದ ಸಿಎಂ ಕಚೇರಿ ಬಿಡುವ ಮುನ್ನ ಯಾವುದೇ ಕುರುಹು ಇಲ್ಲದಂತೆ ಮಾಡಲು ಸಮಾಜವಾದಿ ಪಕ್ಷ ನಿರ್ಧರಿಸಿದ ಹಾಗೆ ತೋರುತ್ತದೆ. ಸಾಮಾಜಿಕ ಜಾಲ ತಾಣ ಟ್ವಿಟ್ಟರ್ ನಲ್ಲಿರುವ ಎರಡು ಅಧಿಕೃತ ಖಾತೆಗಳನ್ನು ಫುಲ್ ಕ್ಲೀನ್ ಮಾಡಲಾಗಿದೆ. ಉತ್ತರಪ್ರದೇಶದ ಸರ್ಕಾರ ಹಾಗೂ ಮುಖ್ಯಮಂತ್ರಿಗಳ ಟ್ವಿಟ್ಟರ್ ಖಾತೆ ಈಗ ಬರಿದಾಗಿದೆ.
ಸಾಮಾನ್ಯವಾಗಿ ಈ ಎರಡು ರೀತಿ ಖಾತೆಗಳು ಎಲ್ಲಾ ರಾಜ್ಯಗಳಲ್ಲೂ ಬಳಸಲಾಗುತ್ತದೆ. ಆದರೆ, ಸರ್ಕಾರ ಬದಲಾದ ತಕ್ಷಣ ಹಳೆ ಸರ್ಕಾರದ ಟ್ವೀಟ್ ಗಳನ್ನು ಏಕಾಏಕಿ ಡಿಲೀಟ್ ಮಾಡುವುದಿಲ್ಲ. ಮಾಡಿದರೂ ಎಲ್ಲವನ್ನು ಬ್ಯಾಕ್ ಅಪ್ ತೆಗೆದುಕೊಂಡು ನಂತರ ಹೊಸ ಸರ್ಕಾರದ ಸುಪರ್ದಿಗೆ ನೀಡಲಾಗುತ್ತದೆ.

@CMOfficeUP ಹಾಗೂ @UPGovt ಅಧಿಕೃತ ಟ್ವಿಟ್ಟರ್ ಖಾತೆಗಳ ಟ್ವೀಟ್ಸ್ ಡಿಲೀಟ್ ಆಗಿರುವ ಬಗ್ಗೆ ಪ್ರಶ್ನೆಗಳು ಏಳತೊಡಗಿತು. ಈ ಹಿಂದಿನ ಟ್ವೀಟ್ ಗಳನ್ನು ಶೇಖರಿಸಲಾಗಿದೆಯೇ? ಇಲ್ಲವೇ ಎಂಬ ಅನುಮಾನ ಕಾಡತೊಡಗಿತು.
ಹಿರಿಯ ಪತ್ರಕರ್ತರೊಬ್ಬರು ಟ್ವೀಟ್ ಮಾಡಿ ಈ ಬಗ್ಗೆ ಪ್ರಶ್ನೆ ಮಾಡಿದ್ದಾರೆ. ಸುಮ್ಮನೆ ಡಿಲೀಟ್ ಮಾಡಿದರೆ ಐಟಿ ನಿಯಮದ ಪ್ರಕಾರ ಅಪರಾಧವಾಗುತ್ತದೆ ಎಂದು ಎಚ್ಚರಿಸಿದ್ದಾರಂತೆ.

ನಂತರ ಎಚ್ಚೆತ್ತುಕೊಂಡ ಸಿಎಂ ಕಚೇರಿಯ ನಿರ್ವಾಹಕರು, ಹಳೆ ಟ್ವೀಟ್ ಎಲ್ಲವೂ ಆರ್ಕೈವ್ ಆಗಿದೆ ಎಂದು ಟ್ವೀಟ್ ಮಾಡಿದ್ದಾರೆ. ಹಳೆ ಟ್ವೀಟ್ ಗಳಿರುವ ಲಿಂಕ್ ಸದ್ಯದಲ್ಲೆ ಪ್ರಕಟಿಸಲಾಗುವುದು ಎಂದು ಹೇಳಿದ್ದಾರೆ.
Today @CMOfficeUP and @UPGovt deleted tweets
— Brajesh Misra (@brajeshlive) March 14, 2017
it should be archive, if deleted then its against IT policy
whats reason and why deleted ?
ಇದಲ್ಲದೆ ಮಾಹಿತಿ ಮತ್ತು ಸಾರ್ವಜನಿಕರ ಸಂಪರ್ಕ ಇಲಾಖೆ ನಿರ್ವಹಣೆಯ www.upnews360.in ವೆಬ್ ಸೈಟ್ ನಿಂದ ಕೂಡಾ ಎಲ್ಲಾ ದಾಖಲೆಗಳನ್ನು ಅಳಿಸಲಾಗಿತ್ತು.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications