ಮಾಸಿಕ ಪಿಂಚಣಿ ಭಾಗ್ಯ ಬಡವರಿಗೆ ನೀಡಿ ಎಂದ ಬಿಗ್ ಬಿ
ನವದೆಹಲಿ, ಅ.21: ಅಖಿಲೇಶ್ ಯಾದವ್ ನೇತೃತ್ವದ ಉತ್ತರ ಪ್ರದೇಶದ ಸಮಾಜವಾದಿ ಪಕ್ಷ ಸರ್ಕಾರ ಬಿಗ್ ಬಿ ಫ್ಯಾಮಿಲಿಗೆ ಮಾಸಿಕ ಪಿಂಚಣಿ ಭಾಗ್ಯ ನೀಡುತ್ತಿದೆ. ಅಮಿತಾಬ್ ಬಚ್ಚನ್, ಪತ್ನಿ ಜಯಾ ಬಚ್ಚನ್ ಹಾಗೂ ಪುತ್ರ ಅಭಿಷೇಕ್ ಬಚ್ಚನ್ಗೆ ಮಾಸಿಕ ತಲಾ 50 ಸಾವಿರ ರು. ಪಿಂಚಣಿ ನೀಡಲಾಗುತ್ತಿದೆ ಎಂದು ಸರ್ಕಾರ ಘೋಷಿಸಿದೆ. ಅದರೆ, ಮಾಸಿಕ ಪಿಂಚಣಿ ಅಗತ್ಯವಿಲ್ಲ, ನಗದು ಮೊತ್ತವನ್ನು ಬಡವರು, ನಿರ್ಗತಿಕರಿಗೆ ನೀಡುವಂತೆ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ.
ಉತ್ತರ ಪ್ರದೇಶ ರಾಜ್ಯದ ಅತ್ಯುನ್ನತ ಪ್ರಶಸ್ತಿಯಾದ ಯಶ್ಭಾರತಿ ಸನ್ಮಾನಿತರಿಗೆ ಮಾಸಿಕ 50 ಸಾವಿರ ರು. ಪಿಂಚಣಿ ನೀಡುವ ಬಗ್ಗೆ ಮುಖ್ಯಮಂತ್ರಿ ಅಖಿಲೇಶ್ ನೇತೃತ್ವದಲ್ಲಿ ನಡೆದ ಸಂಪುಟ ಸಭೆ ತೀರ್ಮಾನಿಸಿದೆ. ಹಿರಿಯ ನಟ ಬಚ್ಚನ್, ಅವರ ಪತ್ನಿ ಜಯಾಬಚ್ಚನ್ ಹಾಗೂ ಪುತ್ರ ಅಭಿಷೇಕ್ ಬಚ್ಚನ್ ಮೂವರೂ ಈ ಪ್ರತಿಷ್ಠಿತ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಕಲೆ, ಸಂಸ್ಕೃತಿ, ಕ್ರೀಡೆ, ಸಾಹಿತ್ಯ, ವೈದ್ಯಕೀಯ, ಪತ್ರಿಕೋದ್ಯಮ್ ಹಾಗೂ ಸಮಾಜಸೇವೆ ಕ್ಷೇತ್ರಗಳಲ್ಲಿನ ಸಾಧಕರಿಗೆ ಈ ಪ್ರಶಸ್ತಿ ನೀಡಲಾಗುತ್ತದೆ. ಕೇಂದ್ರ ಅಥವಾ ರಾಜ್ಯ ಸರ್ಕಾರ ಕಾರ್ಯ ನಿರತ ನೌಕರರು ಮಾಸಿಕ 50 ಸಾವಿರ ಪಿಂಚಣಿ ಪಡೆಯುತ್ತಿಲ್ಲ.
1994ರಿಂದ ಈ ಪ್ರಶಸ್ತಿ ನೀಡಲಾಗುತ್ತಿದ್ದು, 150ಕ್ಕೂ ಅಧಿಕ ಗಣ್ಯರಿಗೆ ಪ್ರಶಸ್ತಿ ಸಂದಿದೆ. ಆರಂಭದಲ್ಲಿ 5 ಲಕ್ಷ ಪ್ರಶಸ್ತಿ ಮೊತ್ತವಿತ್ತು ನಂತರ 11 ಲಕ್ಷ ರು ಗೆ ಏರಿಸಲಾಯಿತು. ಪ್ರಥಮ ವರ್ಷದಲ್ಲೇ ಅಮಿತಾಬ್ ಬಚ್ಚನ್ ಅವರ ತಂದೆ ಕವಿ ಹರಿವಂಶ್ ರಾಯ್ ಬಚ್ಚನ್ ಗೆ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು.
ಅಮಿತಾಬ್ ಬಚ್ಚನ್ ಕುಟುಂಬವಲ್ಲದೆ, ನವಾಜುದ್ದೀನ್ ಸಿದ್ದಿಕಿ, ಜಿಮ್ಮಿ ಶೆರ್ಗಲ್, ಗಾಯಕ ಕೈಲಾಶ್ ಖೇರ್, ರೇಖಾ ಭಾರದ್ವಾಜ್, ಪಂಡಿತ್ ರಾಜನ್ ಹಾಗೂ ಸಾಜನ್ ಮಿಶ್ರಾ ಅವರಿಗೆ ಈ ಪ್ರಶಸ್ತಿ ಸಂದಿದೆ.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications