UP Lok Sabha Election 2024 Result: 'ಅಖಿಲೇಶ್ ಯಾದವ್ ಮುಂದಿನ ಪ್ರಧಾನಿ'- ಇದೇನಿದು ಹೊಸ ಆಟ?
ಲಕ್ನೋ ಜೂನ್ 4: ಉತ್ತರಪ್ರದೇಶದಲ್ಲಿ ನಿರೀಕ್ಷೆಯಂತೆ ಬಿಜೆಪಿ ಹೆಚ್ಚಿನ ಸ್ಥಾನ ತೆಗೆದುಕೊಂಡಿಲ್ಲ. ಅಲ್ಲದೆ ಸಮಾಜವಾದಿ ಪಕ್ಷ ಬಿಜೆಪಿಗೆ ಕಠಿಣ ಸ್ಪರ್ಧೆ ನೀಡುತ್ತಿದೆ. ಇದರ ನಡುವೆ ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಅವರೇ ಮುಂದಿನ ಪ್ರಧಾನಿ ಎಂಬ ಪೋಸ್ಟರ್ಗಳು ಹರಿದಾಡುತ್ತಿವೆ.
ಹೌದು... ಬಿಜೆಪಿಯೊಂದಿಗೆ ಹೆಚ್ಚಿನ ಸ್ಥಾನಗಳ ಅಂತರ ಇಲ್ಲದೆ ಕಠಿಣ ಪೈಪೋಟಿ ನೀಡುತ್ತಿರುವ ಸಮಾಜವಾದಿ ಪಕ್ಷಕ್ಕೆ ಜಯಕಾರಗಳು ಕೇಳಿ ಬರುತ್ತಿವೆ. ಎಲ್ಲೆಡೆ ಸಿಹಿ ಹಂಚಿ ಸಂಭ್ರಮಾಚರಣೆ ಕಂಡು ಬರುತ್ತಿದೆ. ಕಾರ್ಯಕರ್ತರ ಸಂತಸ ಮುಗಿಲು ಮುಟ್ಟಿದೆ. ಇದರ ನಡುವೆ ಅಖಿಲೇಶ್ ಯಾದವ್ ಅವರು ದೇಶದ ಮುಂದಿನ ಪ್ರಧಾನಿ ಎನ್ನುವ ಪೋಸ್ಟರ್ಗಳೊಂದಿಗೆ ಕಾರ್ಯಕರ್ತರು ಸಂಭ್ರಮಿಸಿದ್ದಾರೆ.

ಉತ್ತರಪ್ರದೇಶದಲ್ಲಿ ಯಾದವ ಸಮುದಾಯ ಪ್ರಬಲವಾಗಿದ್ದರಿಂದ ಸಮಾಜವಾದಿ ಪಕ್ಷ ಗೆಲುವು ಸಾಧಿಸುವ ಸಾಧ್ಯತೆ ಕೂಡ ಇದೆ. ಬಿಜೆಪಿ ಆಡಳಿತದ ಅವಧಿಯಲ್ಲಿ ಮಾಡಿದ ಸಾಕಷ್ಟು ಅಭಿವೃದ್ಧಿ ಕಾರ್ಯಗಳಲ್ಲಿ ರಾಮ ಮಂದಿರ ನಿರ್ಮಾಣ ಕೂಡ ಒಂದು. ಇದರಿಂದಾಗಿ ಉತ್ತರಪ್ರದೇಶ ಮಾತ್ರವಲ್ಲದೆ ದೇಶದ ಹಲವೆಡೆ ಬಿಜೆಪಿ ಅಧಿಕ ಸ್ಥಾನಗಳ ಅಂತರದಿಂದ ಜನ ಸಾಧಿಸುವ ಸಾಧ್ಯತೆ ಇದೆ.

ಆದರೆ ಉತ್ತರಪ್ರದೇಶದಲ್ಲಿ ಈವರೆಗಿನ ಫಲಿತಾಂಶ ಅಚ್ಚರಿ ಮೂಡಿಸಿದೆ. ಯಾಕೆಂದರೆ ಉತ್ತರಪ್ರದೇಶದಲ್ಲಿ ಗೆಲುವು ಖಚಿತ ಎಂದು ಬೀಗುತ್ತಿದ್ದ ಬಿಜೆಪಿಗೆ ಎಸ್ಪಿ ಭಾರೀ ಪೈಪೋಟಿ ನೀಡುವ ಮೂಲಕ ಬಿಗ್ ಶಾಕ್ ಕೊಟ್ಟಿದೆ. ಇದರಿಂದ ಕಾರ್ಯಕರ್ತರಲ್ಲಿ ಸಂಭ್ರಮ ಮನೆ ಮಾಡಿದ್ದು ಎಲ್ಲೆಡೆ ಪಟಾಕಿ ಸಿಡಿಸಿ ಗೆಲುವು ನಮ್ಮದೇ ಎಂದು ಕಾರ್ಯಕರ್ತರು ಸಂಭ್ರಮಿಸುತ್ತಿದ್ದು ಹಬ್ಬದಂತಾ ವಾತಾವರಣ ನಿರ್ಮಾಣವಾಗಿದೆ. ಹೀಗಾಗಿ ಎಲ್ಲೆಡೆ ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಅವರೇ ಮುಂದಿನ ಪ್ರಧಾನಿ ಎಂದು ಪೋಸ್ಟರ್ ಅಂಟಿಸಿ ಸಂತಸ ವ್ಯಕ್ತಪಡಿಸಿದ್ದಾರೆ.
-
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
"ಕಾಂಗ್ರೆಸ್ನಿಂದ ದಲಿತ ದ್ರೋಹ: 14,200 ಕೋಟಿ ರೂ ಎಸ್ಸಿಎಸ್ಪಿ/ಟಿಎಸ್ಪಿ ಹಣ ಗ್ಯಾರಂಟಿ ಪಾಲು'' -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ?











Click it and Unblock the Notifications