Get Updates
Get notified of breaking news, exclusive insights, and must-see stories!

ಮುಲಾಯಂ ಸಿಂಗ್ ಯಾದವ್ ಗಂಭೀರ, ಜೀವರಕ್ಷಕ ಔಷಧಗಳನ್ನು ನೀಡಲಾಗುತ್ತಿದೆ: ಮೇದಾಂತ ಆಸ್ಪತ್ರೆ

ಲಕ್ನೋ ಅಕ್ಟೋಬರ್ 5: ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಲಾಯಂ ಸಿಂಗ್ ಯಾದವ್ ಗುರುಗ್ರಾಮ್‌ನ ಮೇದಾಂತ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಅವರ ಸ್ಥಿತಿ ಗಂಭೀರವಾಗಿದೆ ಎಂದು ಆಸ್ಪತ್ರೆ ತಿಳಿಸಿದೆ. ಅವರಿಗೆ ಜೀವರಕ್ಷಕ ಔಷಧಗಳನ್ನು ನೀಡಲಾಗುತ್ತಿದೆ ಎಂದು ಆಸ್ಪತ್ರೆಯ ಅಧಿಕಾರಿಗಳು ತಿಳಿಸಿದ್ದಾರೆ.

"ಮುಲಾಯಂ ಸಿಂಗ್ ಅವರು ಇನ್ನೂ ಚಿಕಿತ್ಸೆ ಪಡೆಯುತ್ತಿದ್ದಾರೆ. ಜೀವ ಉಳಿಸುವ ಔಷಧಿಗಳ ಮೇಲೆ, ಅವರು ಗುರುಗ್ರಾಮ್‌ನ ಐಸಿಯು ಮೇದಾಂತ ಆಸ್ಪತ್ರೆಯಲ್ಲಿ ಸಮಗ್ರ ತಜ್ಞರ ತಂಡದಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ" ಎಂದು ಆಸ್ಪತ್ರೆಯ ಆರೋಗ್ಯ ಬುಲೆಟಿನ್‌ನಲ್ಲಿ ತಿಳಿಸಿರುವುದನ್ನು ಸಮಾಜವಾದಿ ಪಕ್ಷದ (ಎಸ್‌ಪಿ) ಟ್ವೀಟ್ ಮಾಡಿದೆ.

ಯಾದವ್ (82) ಅವರನ್ನು ಭಾನುವಾರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಎಸ್ಪಿ ಪೋಷಕ ಆಗಸ್ಟ್ 22 ರಿಂದ ಮೇದಾಂತದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜುಲೈನಲ್ಲಿ ಅವರು ಹೆಚ್ಚಿನ ಚಿಕಿತ್ಸೆಗಾಗಿ ದಾಖಲಾಗಿದ್ದರು.

UP: Mulayam Singh Yadav critical, life-saving drugs being administered: Medanta Hospital

ಪ್ರಧಾನಿ ನರೇಂದ್ರ ಮೋದಿ ಮತ್ತು ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಇಬ್ಬರೂ ಅಖಿಲೇಶ್ ಯಾದವ್ ಅವರಿಗೆ ಕರೆ ಮಾಡಿ ಮುಲಾಯಂ ಸಿಂಗ್ ಅವರ ಆರೋಗ್ಯದ ಬಗ್ಗೆ ವಿಚಾರಿಸಿದರು. ಯಾವುದೇ ಸಂಭಾವ್ಯ ಸಹಾಯ ಮತ್ತು ನೆರವನ್ನು ನೀಡಲು ನಾನು ಇದ್ದೇನೆ ಎಂದು ಅಖಿಲೇಶ್ ಯಾದವ್ ಅವರಿಗೆ ಮೋದಿ ಭರವಸೆ ನೀಡಿದರು ಎಂದು ಮೂಲಗಳು ತಿಳಿಸಿವೆ.

ಉತ್ತರ ಪ್ರದೇಶ ಸರ್ಕಾರ ನೀಡಿದ ಮಾಹಿತಿಯ ಪ್ರಕಾರ, ಆದಿತ್ಯನಾಥ್ ಅವರು ಆಸ್ಪತ್ರೆಯ ವೈದ್ಯರನ್ನು ಕರೆದು ಮುಲಾಯಂ ಸಿಂಗ್ ಅವರಿಗೆ ಉತ್ತಮ ಚಿಕಿತ್ಸೆ ನೀಡುವಂತೆ ಸೂಚಿಸಿದ್ದಾರೆಂದು ತಿಳಿದು ಬಂದಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+