ಸುಪ್ರೀಂ ಕೋರ್ಟ್ ವಕೀಲೆಯ ಹತ್ಯೆ: ಸ್ಟೋರ್ ರೂಂನಲ್ಲಿ ಅಡಗಿ ಕುಳಿತ ಪತಿ!
ಲಕ್ನೋ ಸೆಪ್ಟೆಂಬರ್ 11: ಸುಪ್ರೀಂ ಕೋರ್ಟ್ ವಕೀಲರೊಬ್ಬರನ್ನು ಹತ್ಯೆ ಮಾಡಿದ ಭೀಕರ ಘಟನೆ ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದಿದೆ. 24 ಗಂಟೆಗಳ ಕಾಲ ಬಂಗಲೆಯ ಸ್ಟೋರ್ ರೂಂನಲ್ಲಿ ಅಡಗಿ ಕುಳಿತಿದ್ದ ಆಕೆಯ ಪತಿಯನ್ನು ಪೊಲೀಸರು ಬಂಧಿಸಿದ್ದಾರೆ.
ಸುಪ್ರೀಂ ಕೋರ್ಟ್ ವಕೀಲರಾಗಿದ್ದ ಅವರ ಪತ್ನಿಯನ್ನು ಕೊಂದ 62 ವರ್ಷದ ಮಾಜಿ ಭಾರತೀಯ ಕಂದಾಯ ಸೇವೆ ಅಧಿಕಾರಿಯನ್ನು ಸೋಮವಾರ ಬಂಧಿಸಲಾಗಿದೆ. ಆರೋಪಿ ನಿತಿನ್ ಸಿನ್ಹಾ ಭಾನುವಾರ ಅಪರಾಧ ಎಸಗಿದ ನಂತರ ಬಂಗಲೆಯ ಸ್ಟೋರ್ ರೂಂನಲ್ಲಿ ತಲೆಮರೆಸಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತರನ್ನು 61 ವರ್ಷದ ರೇಣು ಸಿನ್ಹಾ ಎಂದು ಗುರುತಿಸಲಾಗಿದೆ. ರೇಣು ಸಿನ್ಹಾ ಅವರ ಸಹೋದರನ ಫೋನ್ ಕರೆಗಳಿಗೆ ಎರಡು ದಿನಗಳಿಂದ ಪ್ರತಿಕ್ರಿಯಿಸದೇ ಇದ್ದಾಗ ಘಟನೆ ಬೆಳಕಿಗೆ ಬಂದಿದೆ. ಇದರಿಂದ ಆತಂಕಗೊಂಡ ಆಕೆಯ ಸಹೋದರ ಪೊಲೀಸರಿಗೆ ದೂರು ನೀಡಿದ್ದಾರೆ.

ಪೊಲೀಸರು ರೇಣು ಸಿನ್ಹಾ ಅವರು ವಾಸವಿದ್ದ ಬಂಗಲೆಯೊಳಗೆ ಬಲವಂತವಾಗಿ ಪ್ರವೇಶಿಸಿದ ನಂತರ ಬಾತ್ರೂಮ್ನಲ್ಲಿ ರೇಣು ಶವ ಪತ್ತೆ ಆಗಿದೆ. ಘಟನೆಯ ನಂತರ ನಾಪತ್ತೆಯಾಗಿದ್ದ ಆಕೆಯ ಪತಿ ನಾಪತ್ತೆಯಾಗಿದ್ದರು. ರೇಣು ಸಿನ್ಹಾ ಅವರ ಸಹೋದರ ಅಜಯ್ ಮೇಲೆ ಕೊಲೆ ಆರೋಪ ಹೋರಿಸಿದ್ದರು. 'ಅವರ ಫೋನ್ ಆಫ್ ಆಗಿದ್ದರಿಂದ ಸಂಪರ್ಕಕ್ಕೆ ಸಿಗಲಿಲ್ಲ. ದಂಪತಿಗಳು ಆಗಾಗ್ಗೆ ಜಗಳವಾಡುತ್ತಿದ್ದರು' ಎಂದು ಸಹೋದರ ಬಹಿರಂಗಪಡಿಸಿದ್ದಾನೆ.
ಇದರ ಬೆನ್ನಲ್ಲೇ ಪೊಲೀಸರು ಆತನಿಗಾಗಿ ಹುಡುಕಾಟ ನಡೆಸಿದ್ದು, ಬಂಗಲೆಯ ಸ್ಟೋರ್ ರೂಂನಲ್ಲಿ ಪತ್ತೆಯಾಗಿದ್ದಾರೆ. ನಿತಿನ್ ಸಿನ್ಹಾ ಬಂಗಲೆಗೆ ಬೀಗ ಜಡಿದು ಟೆರೇಸ್ನಲ್ಲಿರುವ ಖಾಲಿ ರೂಂ್ನಲ್ಲಿ ಆಶ್ರಯ ಪಡೆದಿದ್ದರು ಎನ್ನಲಾಗಿದೆ. ನಂತರ ಆತನನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ.
ವಿಚಾರಣೆ ವೇಳೆ, ನಿತಿನ್ ಸಿನ್ಹಾ ಅವರು ತಮ್ಮ ಬಂಗಲೆಯನ್ನು 4 ಕೋಟಿ ರೂಪಾಯಿಗೆ ಮಾರಾಟ ಮಾಡಲು ಯೋಜಿಸಿದ್ದರು. ಮುಂಗಡವನ್ನೂ ತೆಗೆದುಕೊಂಡಿದ್ದರು. ಆದರೆ ಅವರ ಪತ್ನಿ ಮಾರಾಟಕ್ಕೆ ವಿರುದ್ಧವಾಗಿದ್ದರು. ಮೃತ ವಕೀಲರು ಕ್ಯಾನ್ಸರ್ ವಿರುದ್ಧ ಹೋರಾಡುತ್ತಿದ್ದರು. ಆದರೆ ಇತ್ತೀಚೆಗಷ್ಟೇ ಒಂದು ತಿಂಗಳ ಹಿಂದೆ ಕ್ಯಾನ್ಸರ್ ಮುಕ್ತರಾಗಿದ್ದರು.
ಪ್ರಾಥಮಿಕ ತನಿಖೆಯಲ್ಲಿ ರೇಣು ಅತಿಯಾದ ರಕ್ತ ಸೋರಿಕೆಯಿಂದ ಸಾವನ್ನಪ್ಪಿರಬಹುದು ಎಂದು ತಿಳಿದುಬಂದಿದ್ದು, ಮರಣೋತ್ತರ ಪರೀಕ್ಷೆಯ ವರದಿಯ ನಂತರ ಸಾವಿಗೆ ನಿಖರ ಕಾರಣ ದೃಢಪಡಲಿದೆ. ಪೊಲೀಸರು ಅಪರಾಧ ನಡೆದ ಸ್ಥಳದಿಂದ ಪುರಾವೆಗಳನ್ನು ಸಂಗ್ರಹಿಸಿದ್ದಾರೆ ಮತ್ತು ಪ್ರಸ್ತುತ ತನಿಖೆ ನಡೆಯುತ್ತಿದೆ.
-
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ












Click it and Unblock the Notifications